AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂತುಕುಡಿಯಲ್ಲಿ ಡಿಆರ್​ಐ ಕಾರ್ಯಾಚರಣೆ; ಭಾರೀ ಮೊತ್ತದ ಚೀನೀ ಪಟಾಕಿಗಳು ಜಪ್ತಿ; ನಾಲ್ವರ ಬಂಧನ

DRI Seizes Chinese Firecrackers Worth Rs 5 Cr, 4 Arrested: ದೀಪಾವಳಿ ಹಬ್ಬದ ಸಡಗರದ ಮಧ್ಯೆಯೇ ಚೀನಾ ಪಟಾಕಿ ಕಳ್ಳಸಾಗಣೆ ದಂಧೆಗೆ ಡಿಆರ್​ಐ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬಂದರಿಗೆ ಅಕ್ರಮವಾಗಿ ತಂದಿದ್ದ ಬರೋಬ್ಬರಿ 5 ಕೋಟಿ ರೂಪಾಯಿ ಮೌಲ್ಯದ ಚೀನಾ ಪಟಾಕಿಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ದಂಧೆಯ ಹಿಂದಿದ್ದ ಪ್ರಮುಖ ನಾಲ್ವರನ್ನು ಬಂಧಿಸಿದ್ದಾರೆ.

ತೂತುಕುಡಿಯಲ್ಲಿ ಡಿಆರ್​ಐ ಕಾರ್ಯಾಚರಣೆ; ಭಾರೀ ಮೊತ್ತದ ಚೀನೀ ಪಟಾಕಿಗಳು ಜಪ್ತಿ; ನಾಲ್ವರ ಬಂಧನ
ಚೀನೀ ಪಟಾಕಿ
ಹರೀಶ್ ಜಿ.ಆರ್​.
| Edited By: |

Updated on: Oct 19, 2025 | 10:34 PM

Share

ಬೆಂಗಳೂರು, ಅಕ್ಟೋಬರ್ 19: ದೀಪಾವಳಿ ಹಬ್ಬ ಆರಂಭವಾಗುತ್ತಿದ್ದಂತೆಯೇ ಭಾರತದಲ್ಲಿ ಚೀನಾ ಪಟಾಕಿಗಳ ಹಾವಳಿ ಹೆಚ್ಚಿರುತ್ತೆ. ಚೀನಾ ಪಟಾಕಿಗಳ ಕಳ್ಳಸಾಗಾಣಿಕೆ (fire crackers smuggling) ದಂಧೆಗೆ ಡಿಆರ್‌ಐ ಅಧಿಕಾರಿಗಳು ಶಾಕ್ ನೀಡಿದ್ದಾರೆ. ತೂತುಕುಡಿ ಬಂದರಿನಲ್ಲಿ ಡಿಆರ್​ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಅಕ್ರಮ ಪಟಾಕಿ ಆಮದನ್ನು ತಡೆಯಲು ಡಿಆರ್​ಐ ಆಪರೇಷನ್ ಫೈರ್ ಟ್ರೇಲ್ (Operation Fire Trail) ಕಾರ್ಯಾಚರಣೆ ನಡೆಸಿದ್ದು, ಚೀನಾದಿಂದ ಅಕ್ರಮವಾಗಿ ತಂದಿದ್ದ ಪಟಾಕಿ ಜಪ್ತಿ ಮಾಡಿದ್ದಾರೆ.

ತಮಿಳುನಾಡಿನ ತೂತುಕುಡಿ ಬಂದರಿನಲ್ಲಿ (Tuticorn port) 40 ಅಡಿಯ ಎರಡು ಕಂಟೈನರ್‌ಗಳನ್ನು ಡಿಆರ್​ಐ ಅಧಿಕಾರಿಗಳು ತಡೆದು ಪರಿಶೀಲಿಸಿದ್ದಾರೆ. ಎಂಜಿನಿಯರಿಂಗ್ ಸರಕುಗಳೆಂದು ಹೇಳಿಕೊಂಡಿದ್ದ ಎರಡು ಕಂಟೈನರ್​ಗಳಲ್ಲಿ ಬರೋಬ್ಬರಿ 83,520 ಚೀನೀ ಪಟಾಕಿಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ಈ ಚೀನಿ ಪಟಾಕಿಗಳ ಮೌಲ್ಯ ₹5.01 ಕೋಟಿ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ‘ನಮಕ್ ಹರಾಮ್’ಗಳ ಮತಗಳು ಬೇಕಿಲ್ಲ: ಬಿಹಾರದಲ್ಲಿ ಗಿರಿರಾಜ್ ಸಿಂಗ್ ಗುಡುಗು; ಮುಸ್ಲಿಮರನ್ನು ಕುಟುಕಿದ ಮಾಡಿದ ಕೇಂದ್ರ ಸಚಿವ

ಚೀನಾ ಪಟಾಕಿ ಆಮದು: ಏಕೆ ಅಕ್ರಮ?

ವಿದೇಶಿ ವ್ಯಾಪಾರ ನೀತಿಯ ಅಡಿಯಲ್ಲಿ ಪಟಾಕಿಗಳ ಆಮದನ್ನು ಸಂಪೂರ್ಣ ಭಾರತದಲ್ಲಿ ನಿರ್ಬಂಧಿಸಲಾಗಿದೆ. ಪಟಾಕಿ ಆಮದಿಗೆ DGFT ಹಾಗೂ PESO ನಿಂದ ಕಡ್ಡಾಯ ಪರವಾನಗಿ ಬೇಕು. ಈ ಅಕ್ರಮ ಆಮದು ಈ ಕಾನೂನುಗಳನ್ನು ಉಲ್ಲಂಘಿಸಿರುವುದು ಮಾತ್ರವಲ್ಲದೆ, ಚೀನಾ ಪಟಾಕಿಗಳ ಅತಿಹೆಚ್ಚು ದಹನಶೀಲತೆಯಿಂದಾಗಿ ಸಾರ್ವಜನಿಕ ಸುರಕ್ಷತೆ ಮತ್ತು ಬಂದರು ಮೂಲಸೌಕರ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿತ್ತು. ಕಳ್ಳಸಾಗಣೆಯನ್ನು ತಡೆಯಲು ಡಿಆರ್‌ಐ ಬದ್ಧವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ದಂಧೆಯ ಹಿಂದಿದ್ದ 4 ಆರೋಪಿಗಳ ಬಂಧನ

ಈ ಅಕ್ರಮ ಕಳ್ಳಸಾಗಣೆ ದಂಧೆಯ ಹಿಂದಿದ್ದವರನ್ನು ಡಿಆರ್‌ಐ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತೂತುಕುಡಿಯಲ್ಲಿ ಆಮದುದಾರನನ್ನು ಬಂಧಿಸಿದ ಬಳಿಕ, ತನಿಖೆಯಿಂದ ದೊರೆತ ಮಾಹಿತಿ ಮೇರೆಗೆ ಚೆನ್ನೈ ಮತ್ತು ತೂತುಕುಡಿಯಿಂದ ಇಬ್ಬರು ಮುಂಬೈ ಮೂಲದವರು ಸೇರಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ. ಈ ನಾಲ್ವರು ಆರೋಪಿಗಳನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಅಯೋಧ್ಯೆಗೆ ಬೆಳಕಿನ ಮೆರಗು ಕೊಟ್ಟ ದೀಪಾರತಿ; 2 ಗಿನ್ನೆಸ್ ದಾಖಲೆಗಳ ನಿರ್ಮಾಣ

ಒಟ್ಟಿನಲ್ಲಿ, ಡಿಆರ್‌ಐ ಈ ದೊಡ್ಡ ಕಳ್ಳಸಾಗಣೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. ಆಮದು ನಿಯಮಗಳನ್ನು ಉಲ್ಲಂಘಿಸಿ, ಸಾರ್ವಜನಿಕ ಸುರಕ್ಷತೆಗೆ ಅಪಾಯ ತಂದೊಡ್ಡುವ ಇಂತಹ ಕೃತ್ಯಗಳ ವಿರುದ್ಧ ಡಿಆರ್‌ಐ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸುವುದಾಗಿ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!