AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂತುಕುಡಿಯಲ್ಲಿ ಡಿಆರ್​ಐ ಕಾರ್ಯಾಚರಣೆ; ಭಾರೀ ಮೊತ್ತದ ಚೀನೀ ಪಟಾಕಿಗಳು ಜಪ್ತಿ; ನಾಲ್ವರ ಬಂಧನ

DRI Seizes Chinese Firecrackers Worth Rs 5 Cr, 4 Arrested: ದೀಪಾವಳಿ ಹಬ್ಬದ ಸಡಗರದ ಮಧ್ಯೆಯೇ ಚೀನಾ ಪಟಾಕಿ ಕಳ್ಳಸಾಗಣೆ ದಂಧೆಗೆ ಡಿಆರ್​ಐ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬಂದರಿಗೆ ಅಕ್ರಮವಾಗಿ ತಂದಿದ್ದ ಬರೋಬ್ಬರಿ 5 ಕೋಟಿ ರೂಪಾಯಿ ಮೌಲ್ಯದ ಚೀನಾ ಪಟಾಕಿಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ದಂಧೆಯ ಹಿಂದಿದ್ದ ಪ್ರಮುಖ ನಾಲ್ವರನ್ನು ಬಂಧಿಸಿದ್ದಾರೆ.

ತೂತುಕುಡಿಯಲ್ಲಿ ಡಿಆರ್​ಐ ಕಾರ್ಯಾಚರಣೆ; ಭಾರೀ ಮೊತ್ತದ ಚೀನೀ ಪಟಾಕಿಗಳು ಜಪ್ತಿ; ನಾಲ್ವರ ಬಂಧನ
ಚೀನೀ ಪಟಾಕಿ
ಹರೀಶ್ ಜಿ.ಆರ್​.
| Edited By: |

Updated on: Oct 19, 2025 | 10:34 PM

Share

ಬೆಂಗಳೂರು, ಅಕ್ಟೋಬರ್ 19: ದೀಪಾವಳಿ ಹಬ್ಬ ಆರಂಭವಾಗುತ್ತಿದ್ದಂತೆಯೇ ಭಾರತದಲ್ಲಿ ಚೀನಾ ಪಟಾಕಿಗಳ ಹಾವಳಿ ಹೆಚ್ಚಿರುತ್ತೆ. ಚೀನಾ ಪಟಾಕಿಗಳ ಕಳ್ಳಸಾಗಾಣಿಕೆ (fire crackers smuggling) ದಂಧೆಗೆ ಡಿಆರ್‌ಐ ಅಧಿಕಾರಿಗಳು ಶಾಕ್ ನೀಡಿದ್ದಾರೆ. ತೂತುಕುಡಿ ಬಂದರಿನಲ್ಲಿ ಡಿಆರ್​ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಅಕ್ರಮ ಪಟಾಕಿ ಆಮದನ್ನು ತಡೆಯಲು ಡಿಆರ್​ಐ ಆಪರೇಷನ್ ಫೈರ್ ಟ್ರೇಲ್ (Operation Fire Trail) ಕಾರ್ಯಾಚರಣೆ ನಡೆಸಿದ್ದು, ಚೀನಾದಿಂದ ಅಕ್ರಮವಾಗಿ ತಂದಿದ್ದ ಪಟಾಕಿ ಜಪ್ತಿ ಮಾಡಿದ್ದಾರೆ.

ತಮಿಳುನಾಡಿನ ತೂತುಕುಡಿ ಬಂದರಿನಲ್ಲಿ (Tuticorn port) 40 ಅಡಿಯ ಎರಡು ಕಂಟೈನರ್‌ಗಳನ್ನು ಡಿಆರ್​ಐ ಅಧಿಕಾರಿಗಳು ತಡೆದು ಪರಿಶೀಲಿಸಿದ್ದಾರೆ. ಎಂಜಿನಿಯರಿಂಗ್ ಸರಕುಗಳೆಂದು ಹೇಳಿಕೊಂಡಿದ್ದ ಎರಡು ಕಂಟೈನರ್​ಗಳಲ್ಲಿ ಬರೋಬ್ಬರಿ 83,520 ಚೀನೀ ಪಟಾಕಿಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ಈ ಚೀನಿ ಪಟಾಕಿಗಳ ಮೌಲ್ಯ ₹5.01 ಕೋಟಿ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ‘ನಮಕ್ ಹರಾಮ್’ಗಳ ಮತಗಳು ಬೇಕಿಲ್ಲ: ಬಿಹಾರದಲ್ಲಿ ಗಿರಿರಾಜ್ ಸಿಂಗ್ ಗುಡುಗು; ಮುಸ್ಲಿಮರನ್ನು ಕುಟುಕಿದ ಮಾಡಿದ ಕೇಂದ್ರ ಸಚಿವ

ಚೀನಾ ಪಟಾಕಿ ಆಮದು: ಏಕೆ ಅಕ್ರಮ?

ವಿದೇಶಿ ವ್ಯಾಪಾರ ನೀತಿಯ ಅಡಿಯಲ್ಲಿ ಪಟಾಕಿಗಳ ಆಮದನ್ನು ಸಂಪೂರ್ಣ ಭಾರತದಲ್ಲಿ ನಿರ್ಬಂಧಿಸಲಾಗಿದೆ. ಪಟಾಕಿ ಆಮದಿಗೆ DGFT ಹಾಗೂ PESO ನಿಂದ ಕಡ್ಡಾಯ ಪರವಾನಗಿ ಬೇಕು. ಈ ಅಕ್ರಮ ಆಮದು ಈ ಕಾನೂನುಗಳನ್ನು ಉಲ್ಲಂಘಿಸಿರುವುದು ಮಾತ್ರವಲ್ಲದೆ, ಚೀನಾ ಪಟಾಕಿಗಳ ಅತಿಹೆಚ್ಚು ದಹನಶೀಲತೆಯಿಂದಾಗಿ ಸಾರ್ವಜನಿಕ ಸುರಕ್ಷತೆ ಮತ್ತು ಬಂದರು ಮೂಲಸೌಕರ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿತ್ತು. ಕಳ್ಳಸಾಗಣೆಯನ್ನು ತಡೆಯಲು ಡಿಆರ್‌ಐ ಬದ್ಧವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ದಂಧೆಯ ಹಿಂದಿದ್ದ 4 ಆರೋಪಿಗಳ ಬಂಧನ

ಈ ಅಕ್ರಮ ಕಳ್ಳಸಾಗಣೆ ದಂಧೆಯ ಹಿಂದಿದ್ದವರನ್ನು ಡಿಆರ್‌ಐ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತೂತುಕುಡಿಯಲ್ಲಿ ಆಮದುದಾರನನ್ನು ಬಂಧಿಸಿದ ಬಳಿಕ, ತನಿಖೆಯಿಂದ ದೊರೆತ ಮಾಹಿತಿ ಮೇರೆಗೆ ಚೆನ್ನೈ ಮತ್ತು ತೂತುಕುಡಿಯಿಂದ ಇಬ್ಬರು ಮುಂಬೈ ಮೂಲದವರು ಸೇರಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ. ಈ ನಾಲ್ವರು ಆರೋಪಿಗಳನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಅಯೋಧ್ಯೆಗೆ ಬೆಳಕಿನ ಮೆರಗು ಕೊಟ್ಟ ದೀಪಾರತಿ; 2 ಗಿನ್ನೆಸ್ ದಾಖಲೆಗಳ ನಿರ್ಮಾಣ

ಒಟ್ಟಿನಲ್ಲಿ, ಡಿಆರ್‌ಐ ಈ ದೊಡ್ಡ ಕಳ್ಳಸಾಗಣೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. ಆಮದು ನಿಯಮಗಳನ್ನು ಉಲ್ಲಂಘಿಸಿ, ಸಾರ್ವಜನಿಕ ಸುರಕ್ಷತೆಗೆ ಅಪಾಯ ತಂದೊಡ್ಡುವ ಇಂತಹ ಕೃತ್ಯಗಳ ವಿರುದ್ಧ ಡಿಆರ್‌ಐ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸುವುದಾಗಿ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?