AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಮೂತ್ರ ಕುಡಿದು ಸಿದ್ಧವಾಗಿರಿ: ಸಂಸತ್ ಭಾಷಣಕ್ಕೆ ಮುನ್ನ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಟ್ವೀಟ್

. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ನಿರುದ್ಯೋಗದಿಂದ ವಿದೇಶಾಂಗ ನೀತಿಯವರೆಗಿನ ಸಮಸ್ಯೆಗಳ ಬಗ್ಗೆ ಸರ್ಕಾರದ ವಿರುದ್ಧ ಟೀಕಾಪ್ರಹಾರ ಮಾಡಿದ ಒಂದು ದಿನದ ನಂತರ ಮೊಯಿತ್ರಾ ತಮ್ಮ ಭಾಷಣದ ಸುಳಿವು ನೀಡಿ ಟ್ವೀಟ್ ಮಾಡಿದ್ದಾರೆ

ಗೋಮೂತ್ರ ಕುಡಿದು ಸಿದ್ಧವಾಗಿರಿ: ಸಂಸತ್ ಭಾಷಣಕ್ಕೆ ಮುನ್ನ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಟ್ವೀಟ್
ಮಹುವಾ ಮೊಯಿತ್ರಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Feb 03, 2022 | 6:25 PM

Share

ದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ (Mahua Moitra) ಇಂದು ಲೋಕಸಭೆಯಲ್ಲಿ ತಮ್ಮ ಭಾಷಣದಲ್ಲಿ ಏನು ಹೇಳಲಿದ್ದಾರೆ ಎಂಬ ಸುಳಿವು ನೀಡಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರು ನಿರುದ್ಯೋಗದಿಂದ ವಿದೇಶಾಂಗ ನೀತಿಯವರೆಗಿನ ಸಮಸ್ಯೆಗಳ ಬಗ್ಗೆ ಸರ್ಕಾರದ ವಿರುದ್ಧ ಟೀಕಾಪ್ರಹಾರ ಮಾಡಿದ ಒಂದು ದಿನದ ನಂತರ ಮೊಯಿತ್ರಾ ತಮ್ಮ ಭಾಷಣದ ಸುಳಿವು ನೀಡಿ ಟ್ವೀಟ್ ಮಾಡಿದ್ದಾರೆ. ಇಂದು ಸಂಜೆ ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಚರ್ಚೆಯಲ್ಲಿ ಮಾತನಾಡುತ್ತಿದ್ದೇನೆ. ಟೀಕಿಸುವ ತಂಡವನ್ನು ಸಿದ್ಧಗೊಳಿಸಲು ಮತ್ತು ಆದೇಶದ ಕಾಲ್ಪನಿಕ ಅಂಶಗಳನ್ನು ಓದಲು ಬಿಜೆಪಿಗೆ ಸುಳಿವು ನೀಡಲು ಬಯಸುತ್ತೇನೆ. ಗೋಮೂತ್ರವನ್ನು ಕುಡಿಯಿರಿ ಎಂದು ಮೊಯಿತ್ರಾ ಟ್ವೀಟ್ ಮಾಡಿದ್ದಾರೆ. ಮೊಯಿತ್ರಾ ಅವರು ಬಿಜೆಪಿಯ ಸಾಮಾಜಿಕ ಮಾಧ್ಯಮ ಟ್ರೋಲ್ ಗಳಿಗೆ, ವಿಪಕ್ಷಗಳ ಐಟಿ ಸೆಲ್ ಟೀಕೆಗಳಿಗೆ ತಕ್ಕ ಉತ್ತರ ಕೊಡುತ್ತಿರುತ್ತಾರೆ. ಪಶ್ಚಿಮ ಬಂಗಾಳದ ಕೃಷ್ಣನಗರದ ಸಂಸದೆ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ಮತ್ತಷ್ಟು ವಾಗ್ದಾಳಿ ನಡೆಸುವುದಾಗಿ ಸೂಚಿಸಿದರು.

ವಿದೇಶಾಂಗ ನೀತಿಯ ಮೇಲೆ ಮೋದಿ ಸರ್ಕಾರದ ವಿರುದ್ಧ ಗಾಂಧಿಯವರು ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದರು. ಬಿಜೆಪಿ ಸರ್ಕಾರ “ಚೀನಾ ಮತ್ತು ಪಾಕಿಸ್ತಾನವನ್ನು ಒಟ್ಟಿಗೆ ತಂದಿದ್ದಾರೆ” ಎಂದು ಆರೋಪಿಸಿದರು, ಇದಕ್ಕೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಹುಲ್ ಗೆ ಇತಿಹಾಸದ ಪಾಠ ಎಂದು ಟ್ವೀಟ್ ಮಾಡಿದ್ದರು.

ಮೊಯಿತ್ರಾ ಅವರ ಸಹೋದ್ಯೋಗಿ ಮತ್ತು ಸಂಸದ ಸೌಗತ ರಾಯ್ ಬುಧವಾರ ತೃಣಮೂಲ ಕಾಂಗ್ರೆಸ್ ನೊಂದಿಗೆ ಕೇಂದ್ರ ಯಾವ ರೀತಿ ವರ್ತಿಸುತ್ತಿದೆ ಎಂಬುದಕ್ಕೆ ಉದಾಹರಣೆ ನೀಡಿ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರಗಳೊಂದಿಗೆ ಭಿನ್ನಾಭಿಪ್ರಾಯದಿಂದ ಕೆಲಸ ಮಾಡುವ ರಾಜ್ಯಪಾಲರನ್ನು ಕೇಂದ್ರವು ನೇಮಿಸುತ್ತಿದೆ ಎಂದು ರಾಯ್ ಆರೋಪಿಸಿದರು.

“ಕೇಂದ್ರವು ರಾಜ್ಯಪಾಲರನ್ನು ಏಕೆ ಹೇರಿದೆ? ತಮಿಳುನಾಡಿನಲ್ಲಿ ಸಚಿವರಿಗೆ ಅಗೌರವ ತೋರುವ ರಾಜ್ಯಪಾಲರ ವಿರುದ್ಧ ದೂರುಗಳಿವೆ. ಮಹಾರಾಷ್ಟ್ರದಲ್ಲಿ, ಮಹಾರಾಷ್ಟ್ರ ಸರ್ಕಾರಕ್ಕೆ ತೊಂದರೆ ನೀಡುವ ರಾಜ್ಯಪಾಲರಿದ್ದಾರೆ. ಪ್ರತಿದಿನ ಟ್ವೀಟ್ ಮಾಡುವ ರಾಜ್ಯಪಾಲರು ನಮಗಿದ್ದಾರೆ ಎಂದು ರಾಯ್ ಲೋಕಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಆರೋಪಗಳಿಗೆ ಪ್ರತಿಕ್ರಿಯಿಸಿ ಇತಿಹಾಸದ ಪಾಠ ಹೇಳಿದ ವಿದೇಶಾಂಗ ಸಚಿವ ಎಸ್ ಜೈಶಂಕರ್

Published On - 6:02 pm, Thu, 3 February 22

ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ