AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲ್ಕೋಹಾಲ್ ಬಿಡಿ, ಹಸುವಿನ ಹಾಲು ಕುಡಿಯಿರಿ: ಮಧ್ಯಪ್ರದೇಶದಲ್ಲಿ ಜನರಿಗೆ ಕರೆ ನೀಡಿದ ಉಮಾ ಭಾರತಿ

ಸರಣಿ ಟ್ವೀಟ್‌ಗಳಲ್ಲಿ, ಬಿಜೆಪಿ ನಾಯಕಿ ಘಟನೆಯನ್ನು ಹಂಚಿಕೊಂಡಿದ್ದು ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಮದ್ಯ ಸೇವನೆಯ ವಿರುದ್ಧದ ಅಭಿಯಾನದ ಬಗ್ಗೆ ವಿವರಿಸಿದ್ದಾರೆ. ಜನರ ಕುಡಿತದ ಚಟವನ್ನು ತನ್ನ ಅನುಕೂಲಕ್ಕೆ ಬಳಸಿಕೊಳ್ಳದಂತೆ ಉಮಾ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಆಲ್ಕೋಹಾಲ್ ಬಿಡಿ, ಹಸುವಿನ ಹಾಲು ಕುಡಿಯಿರಿ: ಮಧ್ಯಪ್ರದೇಶದಲ್ಲಿ ಜನರಿಗೆ ಕರೆ ನೀಡಿದ ಉಮಾ ಭಾರತಿ
ಉಮಾ ಭಾರತಿ
ರಶ್ಮಿ ಕಲ್ಲಕಟ್ಟ
|

Updated on:Feb 03, 2023 | 2:11 PM

Share

ಮದ್ಯ ಸೇವನೆ ಬಿಡಿ ಅದರ ಬದಲಿಗೆ ಹಸುವಿನ ಹಾಲನ್ನು(Milk) ಕುಡಿಯಲು ಪ್ರಾರಂಭಿಸಿ ಎಂದು ಬಿಜೆಪಿ ನಾಯಕಿ ಉಮಾ ಭಾರತಿ (Uma Bharti) ಜನರಿಗೆ ಕರೆ ನೀಡಿದ್ದಾರೆ. ಮಧ್ಯಪ್ರದೇಶದ (Madhya Pradesh) ಓರ್ಚಾಗೆ ಭೇಟಿ ನೀಡಿದ ಅವರು ಸ್ಥಳೀಯ ಮದ್ಯದ ಅಂಗಡಿಯೊಂದರ ಸುತ್ತಲೂ ಮೇಯುತ್ತಿದ್ದ ಬೀದಿ ಹಸುಗಳನ್ನು ಕಟ್ಟಿ ಅವುಗಳಿಗೆ ಆಹಾರ ನೀಡಿದ್ದಾರೆ.. ಆ ಮದ್ಯದಂಗಡಿ ಮುಂದೆ ನಿಂತ ಉಮಾ ಭಾರತಿ,”ಶರಾಬ್ ನಹಿ, ದೂಧ್ ಪಿಯೋ’ (ಹಾಲು ಕುಡಿಯಿರಿ, ಮದ್ಯ ಅಲ್ಲ) ಎಂದಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ, ಬಿಜೆಪಿ ನಾಯಕಿ ಘಟನೆಯನ್ನು ಹಂಚಿಕೊಂಡಿದ್ದು ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಮದ್ಯ ಸೇವನೆಯ ವಿರುದ್ಧದ ಅಭಿಯಾನದ ಬಗ್ಗೆ ವಿವರಿಸಿದ್ದಾರೆ. ಜನರ ಕುಡಿತದ ಚಟವನ್ನು ತನ್ನ ಅನುಕೂಲಕ್ಕೆ ಬಳಸಿಕೊಳ್ಳದಂತೆ ಉಮಾ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ಗೆ ಶೀಘ್ರದಲ್ಲೇ ಐವರು ನೂತನ ನ್ಯಾಯಾಧೀಶರ ನೇಮಕ: ಕೇಂದ್ರ ಸರ್ಕಾರ

ಭಾರತಿ ಕಳೆದ ವರ್ಷದಿಂದ ಮದ್ಯ ಸೇವನೆ ವಿರುದ್ಧ ಪ್ರತಿಭಟನೆ ನಡೆಸಿ ಸುದ್ದಿಯಾಗುತ್ತಿದ್ದಾರೆ. ಜೂನ್ 2022 ರಲ್ಲಿ, ಅವರು ಮದ್ಯದ ಅಂಗಡಿಗೆ ಸಗಣಿ ಎಸೆದಿದ್ದರು. ಮಾರ್ಚ್ 2022 ರಲ್ಲಿ ಅವರು ಭೋಪಾಲ್‌ನ ಮತ್ತೊಂದು ಮದ್ಯದ ಅಂಗಡಿಗೆ ಕಲ್ಲು ಎಸೆದರು. ಕಳೆದೆರಡು ತಿಂಗಳಿನಿಂದ ಅವರು ಸಂಪೂರ್ಣ ಮದ್ಯಪಾನ ನಿಷೇಧ ಹಾಗೂ ರಾಜ್ಯದಲ್ಲಿ ಮದ್ಯ ಮಾರಾಟವನ್ನು ನಿಯಂತ್ರಿಸುವಂತೆ ಒತ್ತಾಯಿಸುತ್ತಿದ್ದಾರೆ.

ಮದ್ಯದಂಗಡಿಯನ್ನು ಗೋಶಾಲೆ ಮಾಡಿ ಎಂದು ಒತ್ತಾಯಿಸಿದ ಬಿಜೆಪಿ ನಾಯಕಿ

ಉಮಾಭಾರತಿ ಅವರು ಮಂಗಳವಾರ ಮಧ್ಯಪ್ರದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಹೆಚ್ಚಳಕ್ಕೆ ಮದ್ಯವೇ  ಕಾರಣ ಎಂದಿದ್ದಾರೆ. ಅದೇ ವೇಳೆ ನಿಯಮಗಳನ್ನು ಉಲ್ಲಂಘಿಸಿ ನಡೆಸುತ್ತಿರುವ ಮದ್ಯದ ಅಂಗಡಿಗಳನ್ನು  ಗೋಶಾಲೆಗಳಾಗಿ ಪರಿವರ್ತಿಸಲು  ಒತ್ತಾಯಿಸಿದ್ದಾರೆ. ಭೋಪಾಲ್‌ನ ದೇವಸ್ಥಾನದಲ್ಲಿ ನಾಲ್ಕು ದಿನ ಕಳೆದ  ಉಮಾ ಭಾರತಿ, ರಾಜ್ಯದಲ್ಲಿ “ನಿಯಂತ್ರಿತ” ಮದ್ಯ ನೀತಿಯ ಬೇಡಿಕೆಯನ್ನು ಬೆಂಬಲಿಸಲು “ಮಧುಶಾಲಾ ಮೇ ಗೌಶಾಲಾ” (ಮದ್ಯ ಮಾರಾಟ ಕೇಂದ್ರಗಳ ಸ್ಥಳದಲ್ಲಿ ಗೋಶಾಲೆಗಳು) ಕಾರ್ಯಕ್ರಮವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.

ಮದ್ಯದ ನೀತಿಗೆ ಕಾಯದೆ, ನಿಯಮಗಳನ್ನು ಉಲ್ಲಂಘಿಸಿ ನಡೆಸುತ್ತಿರುವ ಮದ್ಯದಂಗಡಿಗಳನ್ನು ಗೋಶಾಲೆಯನ್ನಾಗಿ ಪರಿವರ್ತಿಸಲು ನಾನು ಪ್ರಾರಂಭಿಸುತ್ತೇನೆ. ಓರ್ಚಾದಲ್ಲಿರುವ “ಅಕ್ರಮ” ಮದ್ಯದ ಅಂಗಡಿಯ ಹೊರಗೆ  11 ಹಸುಗಳನ್ನು ಕಟ್ಟಿ ಹಾಕಲಿರುವ ವ್ಯವಸ್ಥೆ ಮಾಡಲು ಜನರಿಗೆ ತಿಳಿಸಿದ್ದೇನೆ. “ನನ್ನನ್ನು ತಡೆಯಲು ಯಾರು ಧೈರ್ಯ ಮಾಡುತ್ತಾರೆ ಎಂಬುದನ್ನು ನೋಡುತ್ತೇವೆ .ಈ ಹಸುಗಳಿಗೆ ಆಹಾರ , ನೀರುನ್ನು ನಾನು ಕೊಡುತ್ತೇನೆ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ನಾಯಕಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:05 pm, Fri, 3 February 23

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ