AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದುರು ಪೊಲೀಸ್​ ಜೀಪ್, 2 ಕಿ.ಮೀಗಿಂತಲೂ ಹೆಚ್ಚು ದೂರ ಹಿಮ್ಮುಖವಾಗಿ ಓಡಿದ ಕಾರು

ಗಾಜಿಯಾಬಾದ್​ನ ಎಲಿವೇಟೆಡ್ ರಸ್ತೆಯೊಂದರಲ್ಲಿ ಕಾರೊಂದು 2ಕ್ಕೂ ಹೆಚ್ಚು ಕಿ.ಮೀ ದೂರ ಹಿಮ್ಮುಖವಾಗಿ ಚಲಿಸುರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಾಲಕರೊಬ್ಬರು ಕಾರನ್ನು ಅತಿ ವೇಗದಲ್ಲಿ ಚಲಾಯಿಸಿದ್ದು ಜತೆಗೆ ನಿಯಮಗಳನ್ನು ಮೀರಿ ನಡೆದುಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರನ್ನು ಚೇಸ್​ ಮಾಡಿಕೊಂಡು ಬಂದಿದ್ದಾರೆ. ಎದುರು ಬಂದ ಪೊಲೀಸ್​ ವಾಹನ ನೋಡಿ ಚಾಲಕ ಕಾರನ್ನು ಹಿಮ್ಮುಖವಾಗಿ ಚಲಾಯಿಸಿದ್ದಾರೆ.

ಎದುರು ಪೊಲೀಸ್​ ಜೀಪ್, 2 ಕಿ.ಮೀಗಿಂತಲೂ ಹೆಚ್ಚು ದೂರ ಹಿಮ್ಮುಖವಾಗಿ ಓಡಿದ ಕಾರು
ಕಾರುImage Credit source: Free Press Journal
ನಯನಾ ರಾಜೀವ್
|

Updated on:Feb 22, 2024 | 3:22 PM

Share

ಕಾರೊಂದು ಗಾಜಿಯಾಬಾದ್​ನ ರಾಜ್​ನಗರದಲ್ಲಿ ಅತಿ ವೇಗವಾಗಿ ಜತೆಗೆ ನಿಯಮಗಳನ್ನು ಗಾಳಿಗೆ ತೂರಿ ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಈ ಬಗ್ಗೆ ತನಿಖೆ ಮಾಡಲು ತಕ್ಷಣವೇ ಹೊರಟ ಪೊಲೀಸರಿಗೆ ಗಾಜಿಯಾಬಾದ್​ ಎಲಿವೇಟೆಡ್ ರಸ್ತೆಯಲ್ಲಿ ಕಾರು ಕಾಣಿಸಿತ್ತು. ಅದನ್ನು ನಿಲ್ಲಿಸುವ ಸಲುವಾಗಿ ಪೊಲೀಸರು ಕಾರಿನ ಎದುರು ಜೀಪ್​ ತಂದು ನಿಲ್ಲಿಸಿದ್ದಾರೆ. ಆದರೆ ತಪ್ಪಿಸಿಕೊಳ್ಳಬೇಕೆಂದು ಕಾರಿನ ಚಾಲಕ ಸುಮಾರು 2 ಕಿ.ಮೀ ಹೆಚ್ಚು ದೂರ ಹಿಮ್ಮುಖವಾಗಿ ಗಾಡಿಯನ್ನು ಚಲಾಯಿಸಿರುವ ಘಟನೆ ವರದಿಯಾಗಿದೆ.

ಇಂದಿರಾಪುರಂ ಪೊಲೀಸರ ಪ್ರಕಾರ, ರಾತ್ರಿ 9.30ರ ವೇಳೆಗೆ ಎಲಿವೇಟೆಡ್ ರಸ್ತೆಯಲ್ಲಿ ಕಾರು ಅತಿ ವೇಗವಾಗಿ, ನಿಯಮಗಳಾವುದೂ ತಲೆಯಲ್ಲಿರಿಸಿಕೊಳ್ಳದೆ ಚಾಲನೆ ಮಾಡುತ್ತಿದ್ದರು. ಎರಡು ಕಿ.ಮೀ ಹೋದ ಬಳಿಕ ಕಾರು ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಶೀಘ್ರವೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲಿವೇಟೆಡ್ ರಸ್ತೆಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮರಾಗಳು ಕೆಟ್ಟು ನಿಂತಿರುವ ಕಾರಣ ಚಾಲಕನನ್ನು ಹಿಡಿಯಲು ಸಾಧ್ಯವಾಗಿಲ್ಲ. ಚಾಲಕ ಮದ್ಯಮಾನ ಮಾಡಿದ್ದರಾ ಅಥವಾ ಅವರು ವಾಹನ ಚಾಲನೆ ಮಾಡುವ ರೀತಿಯೇ ಹೀಗಾ ಎಂಬುದರ ಕುರಿತು ಸ್ಪಷ್ಟನೆ ಇನ್ನೂ ಸಿಕ್ಕಿಲ್ಲ.

ಕಾರಿನ ವಿಡಿಯೋ

47 ಸೆಕೆಂಡ್‌ಗಳ ಕ್ಲಿಪ್‌ನಲ್ಲಿ ವಾಹನವು ಅತಿವೇಗದಲ್ಲಿ ಹಿಮ್ಮುಖವಾಗಿ ಚಾಲನೆ ಮಾಡುವುದನ್ನು ತೋರಿಸುತ್ತದೆ, ಜನನಿಬಿಡ ರಸ್ತೆಯಲ್ಲಿ ಚಲಿಸುವ ಪೊಲೀಸ್ ವಾಹನ ಹಿಂಬಾಲಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:07 pm, Thu, 22 February 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್