AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮಹಾಸಾಗರದಲ್ಲಿ ಇಸ್ರೇಲ್‌ ಸರಕು-ಸಾಗಣೆ ಹಡಗಿನ ಮೇಲೆ ಡ್ರೋನ್ ದಾಳಿ

ಹಿಂದೂ ಮಹಾಸಾಗರದಲ್ಲಿ ಇಂದು (ಡಿ.23) ಸರಕು-ಸಾಗಣೆ ಹಡಗುಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ. ಈ ದಾಳಿಯಿಂದ ಯಾವುದೇ ಸಾವು-ನೋವುಗಳ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಒಂದು ಹಡಗು ಇಸ್ರೇಲ್‌ಗೆ ಸಂಬಂಧಿಸಿದೆ ಎಂದು ವರದಿ ತಿಳಿಸಿದೆ.

ಹಿಂದೂ ಮಹಾಸಾಗರದಲ್ಲಿ ಇಸ್ರೇಲ್‌ ಸರಕು-ಸಾಗಣೆ ಹಡಗಿನ ಮೇಲೆ ಡ್ರೋನ್ ದಾಳಿ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 23, 2023 | 5:32 PM

ಹಿಂದೂ ಮಹಾಸಾಗರದಲ್ಲಿ (Indian Ocean) ಇಂದು (ಡಿ.23) ಸರಕು-ಸಾಗಣೆ ಹಡಗುಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ. ಈ ದಾಳಿಯಿಂದ ಯಾವುದೇ ಸಾವು-ನೋವುಗಳ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಒಂದು ಹಡಗು ಇಸ್ರೇಲ್‌ಗೆ ಸಂಬಂಧಿಸಿದೆ ಎಂದು ವರದಿ ತಿಳಿಸಿದೆ. ಬ್ರಿಟಿಷ್ ಮಿಲಿಟರಿಯ ಯುನೈಟೆಡ್ ಕಿಂಗ್‌ಡಮ್ ಮಾರಿಟೈಮ್ ಟ್ರೇಡ್ ಆಪರೇಷನ್ಸ್ ಮತ್ತು ಕಡಲ ಭದ್ರತಾ ಸಂಸ್ಥೆ ಅಂಬ್ರೆ ಪ್ರಕಾರ, ಭಾರತದ ಕರಾವಳಿ ಭಾಗದಲ್ಲಿ ಈ ದಾಳಿ ನಡೆದಿದೆ. ಈ ದಾಳಿಯಿಂದ ಹಡುಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಿದೆ. ಇದು ಇಸ್ರೇಲ್​ನ ಲೈಬೀರಿಯಾ-ಫ್ಲಾಗ್ಡ್ ರಾಸಾಯನಿಕ/ಉತ್ಪನ್ನಗಳ ಟ್ಯಾಂಕರ್​​​​ಗಳನ್ನು ಹೊತ್ತೊಯ್ಯುತ್ತಿದ್ದ ಹಡಗು ಎಂದು ಹೇಳಲಾಗಿದೆ. ಇನ್ನು ಈ ದಾಳಿಗೆ ಭಾರತೀಯ ನೌಕಾಪಡೆ ಪ್ರತ್ಯುತ್ತರ ನೀಡುತ್ತಿದೆ ಎಂದು ಹೇಳಲಾಗಿದೆ. ಇನ್ನು ದಾಳಿಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಬಗ್ಗೆ ಇಸ್ರೇಲ್​ಗೂ ವರದಿ ಮಾಡಲಾಗಿದೆ. ಇನ್ನು ಈ ದಾಳಿ ಎಲ್ಲಿಂದ ನಡೆದಿದೆ ? ಯಾರು ನಡೆಸಿದ್ದಾರೆ ಎಂದು ತಿಳಿದು ಬಂದಿಲ್ಲ ಎಂದು ವರದಿ ಹೇಳಿದೆ. ಭಾರತ ಸರ್ಕಾರ ಹೆಚ್ಚಿನ ಕ್ರಮ ತೆಗೆದುಕೊಳ್ಳುವಂತೆ ನೌಕ ದಳಕ್ಕೆ ತಿಳಿಸಿದೆ.

ಈ ದಾಳಿಗೆ ಗುರಿಯಾಗಿದ್ದು ಒಂದು ಇಸ್ರೇಲ್​​​ ಸರಕು ಸಾಗಣೆ ಹಡಗು ಎಂದು ಹೇಳಲಾಗಿತ್ತು. ಇದೀಗ ಎರಡನೇ ಹಡಗು ಸೌದಿ ಅರೇಬಿಯಾದ ಬಂದರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಹಡಗು ಎಂದು ಹೇಳಲಾಗಿದೆ. ಪೋರಬಂದರ್ ಕರಾವಳಿಯಿಂದ 217 ನಾಟಿಕಲ್ ಮೈಲಿ ದೂರದಲ್ಲಿರುವ ಅರಬ್ಬಿ ಸಮುದ್ರದಲ್ಲಿ ಎಂವಿ ಕೆಮ್ ಪ್ಲುಟೊ ಎಂಬ ಸರಕು ಸಾಗಣೆ ಹಡಗು ಎಂದು ಭಾರತೀಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಇದು ಸೌದಿ ಅರೇಬಿಯಾದ ಬಂದರಿನಿಂದ ಮಂಗಳೂರು ಕಡೆಗೆ ಹೋಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಬೆಂಕಿ ತಗುಲಿದ ಹಡಗಿನ ರಕ್ಷಣೆ ಮಾಡಲಾಗಿದೆ, ಬೆಂಕಿ ನಂದಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ICGS ವಿಕ್ರಮ್ ಅನ್ನು ಭಾರತೀಯ ವಿಶೇಷ ಆರ್ಥಿಕ ವಲಯದ ಗಸ್ತುಗೆ ನಿಯೋಜಿಸಲಾಗಿದೆ. ಇದರ ಸಹಾಯದಿಂದ ಈ ಹಡಗುಗಳ ರಕ್ಷಣೆ ಮಾಡಲಾಗಿದೆ. ಈಗಾಗಲೇ ಭಾರತೀಯ ಸೇನೆಗಳು ಡ್ರೊನ್​​​​ಗಳನ್ನು ಹೊಡೆದುರುಳಿಸಲಾಗಿದೆ. ಇತ್ತಿಚೇಗಷ್ಟೇ ಕಾರ್ಯನಿವಹಿಸಲು ಪ್ರಾರಂಭಿಸಿದ ವಿಕ್ರಮ್​​, ಸರಕು ಸಾಗಣೆ ಹಡಗುಗಳ ಮೇಲೆ ದಾಳಿಯನ್ನು ತಡೆಯಲು ಹಾಗೂ ರಕ್ಷಣೆಯನ್ನು ಮಾಡಲು ಮುಂದಾಗಿದೆ.

ಇನ್ನು ಈ ದಾಳಿಯನ್ನು ಇರಾನ್ ಬೆಂಬಲಿತ ಹೌತಿ ಬಂಡುಕೋರರಿಂದ ನಡೆಸಲಾಗಿದೆ ಎಂದು ಹೇಳಲಾಗಿದೆ. ಇದರ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಬಂದಿಲ್ಲ. ಸಮುದ್ರ ಭಾಗದಲ್ಲಿ ಇರಾನ್​​​ ದಾಳಿ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ದಾಳಿಯ ಮುಖ್ಯ ಗುರಿ ಇಸ್ರೇಲ್​​ ಆಗಿದೆ ಎಂದು ಯುಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಸ್ರೇಲ್​​​ – ಹಮಾಸ್​​​ ನಡುವಿನ ಸಂಘರ್ಷಣೆಯೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಇಸ್ರೇಲ್​​ ಮೇಲೆ ಬೆಂಕಿಕಾರುತ್ತಿರುವ ಹಮಾಸ್​​​ ಉಗ್ರರ ಪರವಾಗಿ ಇರಾನ್​​​ ಮತ್ತು ಇತರ ಮುಸ್ಲಿಂ ರಾಷ್ಟ್ರಗಳು ನಿಂತಿದೆ. ಈ ಕಾರಣಕ್ಕೆ ಇರಾನ್​​​​ ಟಾರ್ಗೆಟ್​​​ ಮಾಡಿ ಇಸ್ರೇಲ್​​​ ಹಡಗಿನ ಮೇಲೆ ದಾಳಿ ಮಾಡಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಇಸ್ರೇಲ್ ಪಿಎಂ ನೆತನ್ಯಾಹುನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲುವ ಸಮಯ ಬಂದಿದೆ: ಕಾಂಗ್ರೆಸ್ ಸಂಸದ

ಪೆಂಟಗನ್ ಪ್ರಕಾರ, ಹೌತಿ ಬಂಡುಕೋರರು 100 ಕ್ಕೂ ಹೆಚ್ಚು ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ಮಾಡಿದ್ದಾರೆ. 35 ಕ್ಕೂ ಹೆಚ್ಚು ವಿವಿಧ ದೇಶಗಳನ್ನು ಒಳಗೊಂಡ 10 ಸರಕು ಸಾಗಣೆ ಹಡಗುಗಳನ್ನು ಗರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Sat, 23 December 23

ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ