AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಏರ್​ಫೋರ್ಸ್ ಸ್ಟೇಶನ್​​ನಲ್ಲಿ ಅವಳಿ ಸ್ಫೋಟ ನಡೆಸಲು ಡ್ರೋನ್​ ಬಳಕೆ; ಇಂಥ ಪ್ರಯೋಗ ಇದೇ ಮೊದಲು

ಜಮ್ಮು ಏರ್​ಪೋರ್ಟ್​​ನ ತಾಂತ್ರಿಕ ವಲಯದಲ್ಲಿರುವ ಹೆಲಿಪ್ಯಾಡ್​ ಸಮೀಪದಲ್ಲಿ ಈ ಅವಳಿ ಸ್ಫೋಟಗಳು ನಡೆದಿದೆ. ಇದು ಕಡಿಮೆ ಸಾಂದ್ರತೆಯ ಸ್ಫೋಟವಾಗಿದ್ದು ಯಾರದ್ದೂ ಪ್ರಾಣ ಹಾನಿಯಾಗಿಲ್ಲ. ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಏರ್​ಫೋರ್ಸ್ ಸ್ಟೇಶನ್​​ನಲ್ಲಿ ಅವಳಿ ಸ್ಫೋಟ ನಡೆಸಲು ಡ್ರೋನ್​ ಬಳಕೆ; ಇಂಥ ಪ್ರಯೋಗ ಇದೇ ಮೊದಲು
ಬಾಂಬ್​ ಸ್ಫೋಟದಿಂದ ಮೇಲ್ಛಾವಣಿ ಒಡೆದಿರುವುದು
TV9 Web
| Edited By: |

Updated on:Jun 27, 2021 | 12:06 PM

Share

ಜಮ್ಮು ವಿಮಾನನಿಲ್ದಾಣದಲ್ಲಿರುವ ಏರ್​ಫೋರ್ಸ್​ ಸ್ಟೇಶನ್​ ಒಳಗೆ ನಿನ್ನೆ ತಡರಾತ್ರಿ ಅವಳಿ ಸ್ಫೋಟ ಉಂಟಾಗಿದ್ದು, ಒಂದು ಬಾಂಬ್​ ಕಟ್ಟಡದ ಮೇಲ್ಛಾವಣಿಯಿಂದ ಸ್ಫೋಟಗೊಂಡಿದ್ದರೆ, ಇನ್ನೊಂದು ನೆಲದಲ್ಲಿ ಸ್ಫೋಟವಾಗಿದೆ. 5 ನಿಮಿಷಗಳ ಅಂತರದಲ್ಲಿ ನಡೆದ ಈ ಎರಡು ಸ್ಫೋಟಗಳ ಬಗ್ಗೆ ತನಿಖೆ ಪ್ರಾರಂಭವಾಗಿದೆ. ಏರ್​ಫೋರ್ಸ್​​ ​ಸ್ಟೇಶನ್​​ನ್ನು ಸ್ಫೋಟಿಸಲು ಡ್ರೋನ್​ ಬಳಸಿದ್ದಾಗಿ ಪ್ರಾಥಮಿಕ ಹಂತದ ತನಿಖೆಯಲ್ಲೇ ಗೊತ್ತಾಗಿದೆ. ಹೀಗೆ ಸ್ಫೋಟಕವನ್ನು ಎಸೆಯಲು ಎದುರಾಳಿ ಪಡೆಯ ಸೈನಿಕರು ಡ್ರೋನ್​ ಬಳಕೆ ಮಾಡಿದ್ದು ಇದೇ ಮೊದಲು ಎನ್ನಲಾಗಿದೆ.

ಜಮ್ಮು ಏರ್​ಪೋರ್ಟ್​​ನ ತಾಂತ್ರಿಕ ವಲಯದಲ್ಲಿರುವ ಹೆಲಿಪ್ಯಾಡ್​ ಸಮೀಪದಲ್ಲಿ ಈ ಅವಳಿ ಸ್ಫೋಟಗಳು ನಡೆದಿದೆ. ಇದು ಕಡಿಮೆ ಸಾಂದ್ರತೆಯ ಸ್ಫೋಟವಾಗಿದ್ದು ಯಾರದ್ದೂ ಪ್ರಾಣ ಹಾನಿಯಾಗಿಲ್ಲ. ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಏರ್​ಪೋರ್ಟ್ ಹೊರಗೆ ನಿಲ್ಲಿಸಲಾಗಿದ್ದ ಯುದ್ಧ ವಿಮಾನವನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಈ ಏರ್​ಫೋರ್ಸ್​ ಸ್ಟೇಶನ್​​ನಿಂದ ಭಾರತ-ಪಾಕಿಸ್ತಾನ ಗಡಿ 14 ಕಿಮೀ ದೂರ ಇದೆ. ಈ ಹಿಂದೆ ಡ್ರೋಣ್​​ಗಳನ್ನು ಬಳಸಿ ಭಾರತೀಯ ಭೂಪ್ರದೇಶದ 12 ಕಿಮೀ ಒಳಗೆ ಶಸ್ತ್ರಾಸ್ತ್ರಗಳನ್ನು ಬಿಸಾಡಿದ ಉದಾಹರಣೆಗಳು ಇವೆ. ಅಂದರೆ ಪಾಕಿಸ್ತಾನ ಇಲ್ಲಿ ಜಮ್ಮು-ಕಾಶ್ಮೀರ, ಪಂಜಾಬ್​ಗಳಲ್ಲಿರುವ ಉಗ್ರರಿಗೆ ಡ್ರೋನ್​ ಮೂಲಕ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದೆ. ಹೀಗೆ ಶಸ್ತ್ರಾಸ್ತ್ರ ಪೂರೈಕೆ ಡ್ರೋನ್​ಗಳನ್ನು ಭಾರತೀಯ ಸೇನಾ ಪಡೆಗಳು ಹೊಡೆದು ಉರುಳಿಸಿದ್ದೂ ಇದೆ. ಆದರೆ ಡ್ರೋನ್​ಗಳ ಮೂಲಕ ಸ್ಫೋಟಿಸಿದ್ದು ಇದೇ ಮೊದಲು ಎಂದೂ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಬಗ್ಗೆ ಚರ್ಚಿಸಲು ಹಿರಿಯ ಪೊಲೀಸ್​ ಅಧಿಕಾರಿಗಳು ಮತ್ತು ಭಾರತೀಯ ವಾಯು ಪಡೆ ಅಧಿಕಾರಿಗಳು ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೀದಿ ಪ್ರಾಣಿಗಳಿಗೆ ಆಸರೆಯಾದ ಕೋಲಾರದ ವ್ಯಕ್ತಿ; ನಾಯಿ, ಕೋತಿಗಳಿಗೆ ನಿತ್ಯ ಆಹಾರ ನೀಡಿ ಪೋಷಣೆ

Published On - 12:06 pm, Sun, 27 June 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್