AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಏರ್​ಫೋರ್ಸ್ ಸ್ಟೇಶನ್​​ನಲ್ಲಿ ಅವಳಿ ಸ್ಫೋಟ ನಡೆಸಲು ಡ್ರೋನ್​ ಬಳಕೆ; ಇಂಥ ಪ್ರಯೋಗ ಇದೇ ಮೊದಲು

ಜಮ್ಮು ಏರ್​ಪೋರ್ಟ್​​ನ ತಾಂತ್ರಿಕ ವಲಯದಲ್ಲಿರುವ ಹೆಲಿಪ್ಯಾಡ್​ ಸಮೀಪದಲ್ಲಿ ಈ ಅವಳಿ ಸ್ಫೋಟಗಳು ನಡೆದಿದೆ. ಇದು ಕಡಿಮೆ ಸಾಂದ್ರತೆಯ ಸ್ಫೋಟವಾಗಿದ್ದು ಯಾರದ್ದೂ ಪ್ರಾಣ ಹಾನಿಯಾಗಿಲ್ಲ. ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಏರ್​ಫೋರ್ಸ್ ಸ್ಟೇಶನ್​​ನಲ್ಲಿ ಅವಳಿ ಸ್ಫೋಟ ನಡೆಸಲು ಡ್ರೋನ್​ ಬಳಕೆ; ಇಂಥ ಪ್ರಯೋಗ ಇದೇ ಮೊದಲು
ಬಾಂಬ್​ ಸ್ಫೋಟದಿಂದ ಮೇಲ್ಛಾವಣಿ ಒಡೆದಿರುವುದು
TV9 Web
| Updated By: Lakshmi Hegde|

Updated on:Jun 27, 2021 | 12:06 PM

Share

ಜಮ್ಮು ವಿಮಾನನಿಲ್ದಾಣದಲ್ಲಿರುವ ಏರ್​ಫೋರ್ಸ್​ ಸ್ಟೇಶನ್​ ಒಳಗೆ ನಿನ್ನೆ ತಡರಾತ್ರಿ ಅವಳಿ ಸ್ಫೋಟ ಉಂಟಾಗಿದ್ದು, ಒಂದು ಬಾಂಬ್​ ಕಟ್ಟಡದ ಮೇಲ್ಛಾವಣಿಯಿಂದ ಸ್ಫೋಟಗೊಂಡಿದ್ದರೆ, ಇನ್ನೊಂದು ನೆಲದಲ್ಲಿ ಸ್ಫೋಟವಾಗಿದೆ. 5 ನಿಮಿಷಗಳ ಅಂತರದಲ್ಲಿ ನಡೆದ ಈ ಎರಡು ಸ್ಫೋಟಗಳ ಬಗ್ಗೆ ತನಿಖೆ ಪ್ರಾರಂಭವಾಗಿದೆ. ಏರ್​ಫೋರ್ಸ್​​ ​ಸ್ಟೇಶನ್​​ನ್ನು ಸ್ಫೋಟಿಸಲು ಡ್ರೋನ್​ ಬಳಸಿದ್ದಾಗಿ ಪ್ರಾಥಮಿಕ ಹಂತದ ತನಿಖೆಯಲ್ಲೇ ಗೊತ್ತಾಗಿದೆ. ಹೀಗೆ ಸ್ಫೋಟಕವನ್ನು ಎಸೆಯಲು ಎದುರಾಳಿ ಪಡೆಯ ಸೈನಿಕರು ಡ್ರೋನ್​ ಬಳಕೆ ಮಾಡಿದ್ದು ಇದೇ ಮೊದಲು ಎನ್ನಲಾಗಿದೆ.

ಜಮ್ಮು ಏರ್​ಪೋರ್ಟ್​​ನ ತಾಂತ್ರಿಕ ವಲಯದಲ್ಲಿರುವ ಹೆಲಿಪ್ಯಾಡ್​ ಸಮೀಪದಲ್ಲಿ ಈ ಅವಳಿ ಸ್ಫೋಟಗಳು ನಡೆದಿದೆ. ಇದು ಕಡಿಮೆ ಸಾಂದ್ರತೆಯ ಸ್ಫೋಟವಾಗಿದ್ದು ಯಾರದ್ದೂ ಪ್ರಾಣ ಹಾನಿಯಾಗಿಲ್ಲ. ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಏರ್​ಪೋರ್ಟ್ ಹೊರಗೆ ನಿಲ್ಲಿಸಲಾಗಿದ್ದ ಯುದ್ಧ ವಿಮಾನವನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಈ ಏರ್​ಫೋರ್ಸ್​ ಸ್ಟೇಶನ್​​ನಿಂದ ಭಾರತ-ಪಾಕಿಸ್ತಾನ ಗಡಿ 14 ಕಿಮೀ ದೂರ ಇದೆ. ಈ ಹಿಂದೆ ಡ್ರೋಣ್​​ಗಳನ್ನು ಬಳಸಿ ಭಾರತೀಯ ಭೂಪ್ರದೇಶದ 12 ಕಿಮೀ ಒಳಗೆ ಶಸ್ತ್ರಾಸ್ತ್ರಗಳನ್ನು ಬಿಸಾಡಿದ ಉದಾಹರಣೆಗಳು ಇವೆ. ಅಂದರೆ ಪಾಕಿಸ್ತಾನ ಇಲ್ಲಿ ಜಮ್ಮು-ಕಾಶ್ಮೀರ, ಪಂಜಾಬ್​ಗಳಲ್ಲಿರುವ ಉಗ್ರರಿಗೆ ಡ್ರೋನ್​ ಮೂಲಕ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದೆ. ಹೀಗೆ ಶಸ್ತ್ರಾಸ್ತ್ರ ಪೂರೈಕೆ ಡ್ರೋನ್​ಗಳನ್ನು ಭಾರತೀಯ ಸೇನಾ ಪಡೆಗಳು ಹೊಡೆದು ಉರುಳಿಸಿದ್ದೂ ಇದೆ. ಆದರೆ ಡ್ರೋನ್​ಗಳ ಮೂಲಕ ಸ್ಫೋಟಿಸಿದ್ದು ಇದೇ ಮೊದಲು ಎಂದೂ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಬಗ್ಗೆ ಚರ್ಚಿಸಲು ಹಿರಿಯ ಪೊಲೀಸ್​ ಅಧಿಕಾರಿಗಳು ಮತ್ತು ಭಾರತೀಯ ವಾಯು ಪಡೆ ಅಧಿಕಾರಿಗಳು ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೀದಿ ಪ್ರಾಣಿಗಳಿಗೆ ಆಸರೆಯಾದ ಕೋಲಾರದ ವ್ಯಕ್ತಿ; ನಾಯಿ, ಕೋತಿಗಳಿಗೆ ನಿತ್ಯ ಆಹಾರ ನೀಡಿ ಪೋಷಣೆ

Published On - 12:06 pm, Sun, 27 June 21

ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು