AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Droupadi Murmu: ಕೋಟ್ಯಂತರ ಮಹಿಳೆಯರ ಕನಸು, ಸಾಮರ್ಥ್ಯದ ಪ್ರತಿಬಿಂಬವಾಗಿ ನಾನು ರಾಷ್ಟ್ರಪತಿಯಾಗಿದ್ದೇನೆ; ದ್ರೌಪದಿ ಮುರ್ಮು

ರಾಷ್ಟ್ರಪತಿ ಹುದ್ದೆಗೇರಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ. ಕೋಟಿಗಟ್ಟಲೆ ಮಹಿಳೆಯರ ಕನಸುಗಳು ಮತ್ತು ಸಾಮರ್ಥ್ಯಗಳ ಪ್ರತಿಬಿಂಬವಾಗಿ ನಾನು ಈ ಹುದ್ದೆಗೆ ಏರಿದ್ದೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

Droupadi Murmu: ಕೋಟ್ಯಂತರ ಮಹಿಳೆಯರ ಕನಸು, ಸಾಮರ್ಥ್ಯದ ಪ್ರತಿಬಿಂಬವಾಗಿ ನಾನು ರಾಷ್ಟ್ರಪತಿಯಾಗಿದ್ದೇನೆ; ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕರಿಸಿದ ಸಂದರ್ಭ
TV9 Web
| Updated By: ಸುಷ್ಮಾ ಚಕ್ರೆ|

Updated on:Jul 25, 2022 | 12:06 PM

Share

ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು (Droupadi Murmu) ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಮಾತನಾಡಿರುವ ದ್ರೌಪದಿ ಮುರ್ಮು, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಜನಿಸಿದ ದೇಶದ ಮೊದಲ ರಾಷ್ಟ್ರಪತಿ ನಾನು. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಸ್ವತಂತ್ರ ಭಾರತದ ಬಗ್ಗೆ ಹೊಂದಿದ್ದ ನಿರೀಕ್ಷೆಗಳನ್ನು ಪೂರೈಸಲು ನಾವು ಇನ್ನಷ್ಟು ಪ್ರಯತ್ನ ಪಡಬೇಕಾಗಿದೆ. ಈ ದೇಶದ ಜನರು ಹಲವು ದಶಕಗಳಿಂದ ಅಭಿವೃದ್ಧಿ ಕಾಣದ ಜನರು, ದಲಿತರು, ಹಿಂದುಳಿದವರು, ಗಿರಿಜನರು ನನ್ನನ್ನು ತಮ್ಮ ಪ್ರತಿಬಿಂಬವಾಗಿ ನೋಡುತ್ತಾರೆ ಎಂಬ ತೃಪ್ತಿ ನನಗಿದೆ. ನಾನು ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿದ್ದರ ಹಿಂದೆ ಬಡವರ ಆಶೀರ್ವಾದವಿದೆ. ಕೋಟಿಗಟ್ಟಲೆ ಮಹಿಳೆಯರ ಕನಸುಗಳು ಮತ್ತು ಸಾಮರ್ಥ್ಯಗಳ ಪ್ರತಿಬಿಂಬವಾಗಿ ನಾನು ಈ ಹುದ್ದೆಗೆ ಏರಿದ್ದೇನೆ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ಹುದ್ದೆಯನ್ನು ತಲುಪಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ. ನನ್ನ ನಾಮನಿರ್ದೇಶನವು ಭಾರತದಲ್ಲಿನ ಬಡವರು ಕನಸು ಕಾಣುವುದು ಮಾತ್ರವಲ್ಲದೆ ಆ ಕನಸುಗಳನ್ನು ನನಸಾಗಿಸಿಕೊಳ್ಳಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ಇದನ್ನೂ ಓದಿ
Image
Droupadi Murmu: ಆ ದಿನ 10 ಬಾರಿ ಫೋನ್ ಮಾಡಿದರೂ ಪ್ರಧಾನಿ ಮೋದಿಗೆ ದ್ರೌಪದಿ ಮುರ್ಮು ಸಿಕ್ಕಿರಲಿಲ್ಲ!; ಕುತೂಹಲಕಾರಿ ಕತೆ ಇಲ್ಲಿದೆ
Image
President of India: ಭಾರತದ ರಾಷ್ಟ್ರಪತಿಗೆ ಇರುವ ಅಧಿಕಾರಗಳೇನು? ರಾಷ್ಟ್ರಪತಿ ಭವನದ ವಿಶೇಷತೆಗಳೇನು? ರಾಷ್ಟ್ರಪತಿಗಳ ಕುರಿತ ವಿವಾದವೇನು?
Image
Ram Nath Kovind: ಐಷಾರಾಮಿ ಬಂಗಲೆ, 1.5 ಲಕ್ಷ ರೂ. ಪೆನ್ಷನ್; ನಿವೃತ್ತರಾದ ರಾಷ್ಟ್ರಪತಿಗೆ ಏನೆಲ್ಲ ಸೌಲಭ್ಯ ಸಿಗುತ್ತೆ ಗೊತ್ತಾ?
Image
Droupadi Murmu: ದ್ರೌಪದಿ ಮುರ್ಮು ಬಗ್ಗೆ ಗೌರವವಿದೆ, ಆದರೆ ಯಶವಂತ್ ಸಿನ್ಹಾಗೆ ನಮ್ಮ ಬೆಂಬಲ; ಆಪ್ ಘೋಷಣೆ

64 ವರ್ಷದ ದ್ರೌಪದಿ ಮುರ್ಮು ಇಂದು ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಎಸ್ ಜೈಶಂಕರ್, ಅಮಿತ್ ಶಾ ಸೇರಿದಂತೆ ಇತರರ ಸಮ್ಮುಖದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಇದನ್ನೂ ಓದಿ: Draupadi Murmu: ಇಂದು ಜುಲೈ 25, ಪ್ರತಿಬಾರಿ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕಾರ ನಡೆಯುವುದು ಇದೇ ದಿನಾಂಕದಲ್ಲಿ, ಏಕೆ ಹೀಗೆ?

ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ದೇಶವನ್ನು ಉದ್ದೇಶಿಸಿ ಮೊದಲ ಬಾರಿಗೆ ಭಾಷಣ ಮಾಡಿದ ದ್ರೌಪದಿ ಮುರ್ಮು, ದೇಶವು ಸ್ವಾತಂತ್ರ್ಯ ಪಡೆದು 75 ವರ್ಷವಾದ ಪವಿತ್ರ ಸಂದರ್ಭದಲ್ಲಿ ನಾನು ರಾಷ್ಟ್ರಪತಿಯಾಗಿ ಜವಾಬ್ದಾರಿ ಸ್ವೀಕರಿಸಿದ್ದೇನೆ. ಇದು ಐತಿಹಾಸಿಕ ಸಂದರ್ಭವಾಗಿದೆ. ದೇಶದ ಎಲ್ಲ ಜನರ ಪ್ರೀತಿಯೇ ನನ್ನ ಶಕ್ತಿಯಾಗಿದೆ ಎಂದು ಹೇಳಿದರು.

ಪೂರ್ವ ಭಾರತದ ಒಂದು ಸಣ್ಣ ಆದಿವಾಸಿ ಹಳ್ಳಿಯಿಂದ ನನ್ನ ಬದುಕಿನ ಯಾತ್ರೆ ಆರಂಭವಾಯಿತು. ಇದು ನಮ್ಮ ಪ್ರಜಾಪ್ರಭುತ್ವದ ಶಕ್ತಿ. ಸಾಮಾನ್ಯ ಆದಿವಾಸಿ ಮಹಿಳೆ ಇಂದು ದೇಶದ ರಾಷ್ಟ್ರಪತಿ ಸ್ಥಾನಕ್ಕೆ ಬಂದಿದ್ದಾಳೆ. ಇದು ನನಗೆ ಸಿಕ್ಕಿದ್ದು ಎಂದು ನಾನು ಅಂದುಕೊಂಡಿಲ್ಲ. ಇದು ಭಾರತದ ಎಲ್ಲ ಬಡವರಿಗೆ ಸಿಕ್ಕ ಗೌರವ. ನಮ್ಮ ದೇಶದ ಬಡವರು ರಾಷ್ಟ್ರಪತಿಯಾಗುವ ಕನಸು ಕಾಣಬಹುದು, ಅದನ್ನು ನನಸು ಮಾಡಿಕೊಳ್ಳಬಹುದು ಎಂದು ಹೇಳಿದರು.

ಇದನ್ನೂ ಓದಿ: Draupadi Murmu Swearing-in LIVE: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್​ರಿಂದ ನಿಕಟಪೂರ್ವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರವರೆಗೆ ಹಲವರು ಈ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಸಂವಿಧಾನಾತ್ಮಕ ಜವಾಬ್ದಾರಿಯನ್ನು ನಾನೂ ಇದೇ ರೀತಿ ನಿರ್ವಹಿಸಲು ಇಚ್ಛಿಸುತ್ತೇನೆ. ಪೂಜ್ಯ ಬಾಪು ನಮಗೆ ಸ್ವರಾಜ್ಯ, ಸ್ವಚ್ಛತೆಯ ಮಾರ್ಗ ತೋರಿಸಿದ್ದರು. ನೇತಾಜಿ, ನೆಹರು, ಚಂದ್ರಶೇಖರ್ ಆಚಾಜ್, ಭಗತ್​ಸಿಂಗ್ ಸೇರಿದಂತೆ ಹಲವು ಹೋರಾಟಗಾರರು ಭಾರತದ ಸ್ವಾಭಿಮಾನ ಹೆಚ್ಚಿಸಲು ಹೋರಾಡಿದರು. ಕಿತ್ತೂರು ಚೆನ್ನಮ್ಮ, ಝಾನ್ಸಿ ರಾಣಿ ಸೇರಿದಂತೆ ಹಲವು ವೀರ ವನಿತೆಯರು ದೇಶಕ್ಕಾಗಿ ಹೋರಾಡಿದರು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ನೆನಪಿಸಿಕೊಂಡರು.

Published On - 10:45 am, Mon, 25 July 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ