‘ಶಾರುಖ್​ ಖಾನ್ ಬಿಜೆಪಿ ಸೇರಿದರೆ, ಡ್ರಗ್ಸ್​ ಸಕ್ಕರೆ ಪುಡಿಯಾಗಿ ಬದಲಾಗುತ್ತದೆ’-ಮಹಾ ಸಚಿವನ ವ್ಯಂಗ್ಯ

ಗುಜರಾತ್​ನ ಮುಂದ್ರಾ ಬಂದರಿನಲ್ಲಿ ಭಾರೀ ಪ್ರಮಾಣದ ಮಾದಕದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಆ ಬಗ್ಗೆ ತನಿಖೆ ನಡೆಸದೆ, ಆರ್ಯನ್​ ಖಾನ್​ರನ್ನು ಟಾರ್ಗೆಟ್​ ಮಾಡಲಾಗುತ್ತಿದೆ ಎಂದೂ ಛಗನ್ ಭುಜ್​ಬಲ್ ಟೀಕಿಸಿದ್ದಾರೆ.

‘ಶಾರುಖ್​ ಖಾನ್ ಬಿಜೆಪಿ ಸೇರಿದರೆ, ಡ್ರಗ್ಸ್​ ಸಕ್ಕರೆ ಪುಡಿಯಾಗಿ ಬದಲಾಗುತ್ತದೆ’-ಮಹಾ ಸಚಿವನ ವ್ಯಂಗ್ಯ
ಛಗನ್​ ಭುಜ್​ಬಲ್​
Follow us
| Updated By: Lakshmi Hegde

Updated on:Oct 24, 2021 | 1:29 PM

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನ ಡ್ರಗ್ಸ್​ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್​ ನಟ ಶಾರುಖ್ ಖಾನ್​ ಪುತ್ರ ಆರ್ಯನ್​ ಖಾನ್(Aryan Khan)​​ರನ್ನು ಬಂಧಿಸಿ, ಅವರಿಗೆ ಜಾಮೀನು ಕೂಡ ನೀಡದೆ ನಿರಂತರವಾಗಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಮಹಾರಾಷ್ಟ್ರ ಸಚಿವ, ಎನ್​ಸಿಪಿ ಮುಖಂಡ ಛಗನ್ ಭುಜ್​ಬಲ್​ ಟೀಕಿಸಿದ್ದಾರೆ. ಈಗ ಏನಾದರೂ ಶಾರುಖ್​ ಖಾನ್ ಬಿಜೆಪಿಗೆ ಸೇರ್ಪಡೆಯಾದರೆ ಡ್ರಗ್ಸ್​ ಎನ್ನುವುದು ಸಕ್ಕರೆಯ ಪುಡಿಯಾಗಿ ಬದಲಾಗಬಹುದು ಎಂದು ವ್ಯಂಗ್ಯವಾಡಿದ್ದಾರೆ.  

ಗುಜರಾತ್​ನ ಮುಂದ್ರಾ ಬಂದರಿನಲ್ಲಿ ಭಾರೀ ಪ್ರಮಾಣದ ಮಾದಕದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಪದೇಪದೆ ಹೆರಾಯಿನ್​​​ಗಳು ಸಿಕ್ಕಿವೆ. ಈ ಪ್ರಕರಣವನ್ನು ವ್ಯಾಪಕವಾಗಿ ತನಿಖೆ ನಡೆಸುವುದು ಬಿಟ್ಟು, ಎನ್​ಸಿಬಿ ಶಾರುಖ್​ ಖಾನ್​ ಪುತ್ರನನ್ನು ಹಿಡಿದುಕೊಂಡಿದೆ ಎಂದು ಹೇಳಿದ್ದಾರೆ.  ಹಾಗೇ, ಶಾರುಖ್​ ಖಾನ್​ ಬಿಜೆಪಿ ಸೇರ್ಪಡೆಯಾದರೆ ಡ್ರಗ್ಸ್​​ನ್ನು ಸಕ್ಕರೆ ಪೌಡರ್​ ಎಂದು ನಿರೂಪಿಸಿ, ಆರ್ಯನ್ ಬಿಡುಗಡೆಯಾಗುತ್ತದೆ ಎಂದು ಹೇಳಿದ್ದಾರೆ.

ಡ್ರಗ್ಸ್​ ಕೇಸ್​​ನಲ್ಲಿ ಆರ್ಯನ್ ಖಾನ್​ಗೆ ಜಾಮೀನು ಕೂಡ ಸಿಗುತ್ತಿಲ್ಲ. ಇದೀಗ ಅವರ ಪರ ವಕೀಲರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಇತ್ತೀಚೆಗೆ ಜಮ್ಮು-ಕಾಶ್ಮಿರದ ಮೆಹಬೂಬಾ ಮುಫ್ತಿ ಕೂಡ ಆರ್ಯನ್​ ಬಂಧನದ ಬಗ್ಗೆ ಕಿಡಿಕಾರಿದ್ದರು. ಅವರು ಖಾನ್​ ಎಂಬ ಒಂದೇ ಕಾರಣಕ್ಕೆ ಟಾರ್ಗೆಟ್​ ಮಾಡಲಾಗುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಆರ್ಯನ್​ ಖಾನ್​ ಜೊತೆ ಸ್ನೇಹ ಹೊಂದಿರುವ ಅನನ್ಯಾ ಪಾಂಡೆ ಅವರಿಗೂ ಈಗ ಸಂಕಷ್ಟ ಎದುರಾಗಿದೆ. ಅವರ ಮನೆ ಮೇಲೆ ಎನ್​ಸಿಬಿ ಅಧಿಕಾರಿಗಳು ಇತ್ತೀಚೆಗೆ ದಾಳಿ ಮಾಡಿದ್ದರು. ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಸದ್ಯ ಅವರ ಮೊಬೈಲ್​ ಮತ್ತು ಲ್ಯಾಪ್​​ಟಾಪ್​ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿನ ವಾಟ್ಸಪ್​ ಚಾಟ್​ಗಳನ್ನು ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: ಕಾಂಗ್ರೆಸ್​ನವರು ಮತ ಹಾಕಿಸಿಕೊಂಡು ಐದು ವರ್ಷ ನಿಮ್ಮನ್ನು ಅಂಧಕಾರದಲ್ಲಿ ಇಡುತ್ತಾರೆ -ಸಿಎಂ ಬಸವರಾಜ ಬೊಮ್ಮಾಯಿ

ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ

Published On - 1:29 pm, Sun, 24 October 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ