‘ಶಾರುಖ್​ ಖಾನ್ ಬಿಜೆಪಿ ಸೇರಿದರೆ, ಡ್ರಗ್ಸ್​ ಸಕ್ಕರೆ ಪುಡಿಯಾಗಿ ಬದಲಾಗುತ್ತದೆ’-ಮಹಾ ಸಚಿವನ ವ್ಯಂಗ್ಯ

| Updated By: Lakshmi Hegde

Updated on: Oct 24, 2021 | 1:29 PM

ಗುಜರಾತ್​ನ ಮುಂದ್ರಾ ಬಂದರಿನಲ್ಲಿ ಭಾರೀ ಪ್ರಮಾಣದ ಮಾದಕದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಆ ಬಗ್ಗೆ ತನಿಖೆ ನಡೆಸದೆ, ಆರ್ಯನ್​ ಖಾನ್​ರನ್ನು ಟಾರ್ಗೆಟ್​ ಮಾಡಲಾಗುತ್ತಿದೆ ಎಂದೂ ಛಗನ್ ಭುಜ್​ಬಲ್ ಟೀಕಿಸಿದ್ದಾರೆ.

‘ಶಾರುಖ್​ ಖಾನ್ ಬಿಜೆಪಿ ಸೇರಿದರೆ, ಡ್ರಗ್ಸ್​ ಸಕ್ಕರೆ ಪುಡಿಯಾಗಿ ಬದಲಾಗುತ್ತದೆ’-ಮಹಾ ಸಚಿವನ ವ್ಯಂಗ್ಯ
ಛಗನ್​ ಭುಜ್​ಬಲ್​
Follow us on

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನ ಡ್ರಗ್ಸ್​ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್​ ನಟ ಶಾರುಖ್ ಖಾನ್​ ಪುತ್ರ ಆರ್ಯನ್​ ಖಾನ್(Aryan Khan)​​ರನ್ನು ಬಂಧಿಸಿ, ಅವರಿಗೆ ಜಾಮೀನು ಕೂಡ ನೀಡದೆ ನಿರಂತರವಾಗಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಮಹಾರಾಷ್ಟ್ರ ಸಚಿವ, ಎನ್​ಸಿಪಿ ಮುಖಂಡ ಛಗನ್ ಭುಜ್​ಬಲ್​ ಟೀಕಿಸಿದ್ದಾರೆ. ಈಗ ಏನಾದರೂ ಶಾರುಖ್​ ಖಾನ್ ಬಿಜೆಪಿಗೆ ಸೇರ್ಪಡೆಯಾದರೆ ಡ್ರಗ್ಸ್​ ಎನ್ನುವುದು ಸಕ್ಕರೆಯ ಪುಡಿಯಾಗಿ ಬದಲಾಗಬಹುದು ಎಂದು ವ್ಯಂಗ್ಯವಾಡಿದ್ದಾರೆ.  

ಗುಜರಾತ್​ನ ಮುಂದ್ರಾ ಬಂದರಿನಲ್ಲಿ ಭಾರೀ ಪ್ರಮಾಣದ ಮಾದಕದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಪದೇಪದೆ ಹೆರಾಯಿನ್​​​ಗಳು ಸಿಕ್ಕಿವೆ. ಈ ಪ್ರಕರಣವನ್ನು ವ್ಯಾಪಕವಾಗಿ ತನಿಖೆ ನಡೆಸುವುದು ಬಿಟ್ಟು, ಎನ್​ಸಿಬಿ ಶಾರುಖ್​ ಖಾನ್​ ಪುತ್ರನನ್ನು ಹಿಡಿದುಕೊಂಡಿದೆ ಎಂದು ಹೇಳಿದ್ದಾರೆ.  ಹಾಗೇ, ಶಾರುಖ್​ ಖಾನ್​ ಬಿಜೆಪಿ ಸೇರ್ಪಡೆಯಾದರೆ ಡ್ರಗ್ಸ್​​ನ್ನು ಸಕ್ಕರೆ ಪೌಡರ್​ ಎಂದು ನಿರೂಪಿಸಿ, ಆರ್ಯನ್ ಬಿಡುಗಡೆಯಾಗುತ್ತದೆ ಎಂದು ಹೇಳಿದ್ದಾರೆ.

ಡ್ರಗ್ಸ್​ ಕೇಸ್​​ನಲ್ಲಿ ಆರ್ಯನ್ ಖಾನ್​ಗೆ ಜಾಮೀನು ಕೂಡ ಸಿಗುತ್ತಿಲ್ಲ. ಇದೀಗ ಅವರ ಪರ ವಕೀಲರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಇತ್ತೀಚೆಗೆ ಜಮ್ಮು-ಕಾಶ್ಮಿರದ ಮೆಹಬೂಬಾ ಮುಫ್ತಿ ಕೂಡ ಆರ್ಯನ್​ ಬಂಧನದ ಬಗ್ಗೆ ಕಿಡಿಕಾರಿದ್ದರು. ಅವರು ಖಾನ್​ ಎಂಬ ಒಂದೇ ಕಾರಣಕ್ಕೆ ಟಾರ್ಗೆಟ್​ ಮಾಡಲಾಗುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಆರ್ಯನ್​ ಖಾನ್​ ಜೊತೆ ಸ್ನೇಹ ಹೊಂದಿರುವ ಅನನ್ಯಾ ಪಾಂಡೆ ಅವರಿಗೂ ಈಗ ಸಂಕಷ್ಟ ಎದುರಾಗಿದೆ. ಅವರ ಮನೆ ಮೇಲೆ ಎನ್​ಸಿಬಿ ಅಧಿಕಾರಿಗಳು ಇತ್ತೀಚೆಗೆ ದಾಳಿ ಮಾಡಿದ್ದರು. ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಸದ್ಯ ಅವರ ಮೊಬೈಲ್​ ಮತ್ತು ಲ್ಯಾಪ್​​ಟಾಪ್​ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿನ ವಾಟ್ಸಪ್​ ಚಾಟ್​ಗಳನ್ನು ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: ಕಾಂಗ್ರೆಸ್​ನವರು ಮತ ಹಾಕಿಸಿಕೊಂಡು ಐದು ವರ್ಷ ನಿಮ್ಮನ್ನು ಅಂಧಕಾರದಲ್ಲಿ ಇಡುತ್ತಾರೆ -ಸಿಎಂ ಬಸವರಾಜ ಬೊಮ್ಮಾಯಿ

ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ

Published On - 1:29 pm, Sun, 24 October 21