AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಕುಡಿದ ಮತ್ತಿನಲ್ಲಿ ಪೊಲೀಸ್​ ಅಧಿಕಾರಿ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ ವ್ಯಕ್ತಿ

ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಪೊಲೀಸ್ ಅಧಿಕಾರಿ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಅಂಗಡಿಯೊಂದಕ್ಕೆ ಪೊಲೀಸ್​ ಹಿಂದೆಯೇ ಹೋಗಿ ಪ್ರಜ್ಞೆತಪ್ಪುವಷ್ಟು ಹೊಡೆದಿದ್ದಾನೆ.

ಆಂಧ್ರಪ್ರದೇಶ: ಕುಡಿದ ಮತ್ತಿನಲ್ಲಿ ಪೊಲೀಸ್​ ಅಧಿಕಾರಿ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ ವ್ಯಕ್ತಿ
ಪೊಲೀಸ್​ ಮೇಲೆ ಹಲ್ಲೆ
ನಯನಾ ರಾಜೀವ್
|

Updated on: Jul 20, 2024 | 10:21 AM

Share

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್​ ಅಧಿಕಾರಿ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ತಿರುಪತಿ ಜಿಲ್ಲೆಯ ಗುಡೂರು ಪಟ್ಟಣದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದಾಗ ಆರೋಪಿ ಕುಡಿದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಹೆಡ್ ಕಾನ್ಸ್‌ಟೇಬಲ್ ಸ್ವಾಮಿ ದಾಸ್ ಎಂದು ಗುರುತಿಸಲಾದ ಪೊಲೀಸ್ ತಲೆಗೆ ತೀವ್ರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಪೊಲೀಸರು ಅಂಗಡಿಯೊಂದಕ್ಕೆ ಹೋಗುತ್ತಿರುವುದನ್ನು ತೋರಿಸಿದೆ. ಸ್ವಲ್ಪ ಸಮಯದ ನಂತರ, ಆರೋಪಿಯು ತನ್ನ ಕೈಯಲ್ಲಿ ದೊಣ್ಣೆಯನ್ನು ಹಿಡಿದುಕೊಂಡು ಆತ ಆರೋಪಿ ಕೂಡ ಹಿಂಬಾಲಿಸಿದ್ದ.

ಆರೋಪಿ ದಾಸ್ ತಲೆಗೆ ಹೊಡೆದಿರುವುದು ವಿಡಿಯೋದಲ್ಲಿದೆ. ಪೊಲೀಸ್ ಸಿಬ್ಬಂದಿ ನೆಲಕ್ಕೆ ಕುಸಿದು ಬೀಳುತ್ತಿರುವುದು ಕಂಡು ಬರುತ್ತಿದೆ. ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯರು ಮಧ್ಯಪ್ರವೇಶಿಸುವ ಮೊದಲು ಆರೋಪಿಯು ಒಂದೆರಡು ಏಟು ಹೊಡೆದಿದ್ದಾನೆ.

ಸ್ಥಳೀಯರು ದಾಸ್ ಅವರನ್ನು ಎದ್ದು ನಿಲ್ಲಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು, ಆದರೆ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ನಂತರ ಗಾಯಗೊಂಡ ಪೊಲೀಸರನ್ನು ಅಂಗಡಿಯಿಂದ ಹೊರಕ್ಕೆ ಹೊತ್ತೊಯ್ಯುತ್ತಿರುವುದು ಕಂಡುಬರುತ್ತದೆ.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಗ್ರಾ.ಪಂ.‌ ಸದಸ್ಯನಿಂದ ಹಲ್ಲೆ ಆರೋಪ: ಅವಾಚ್ಯವಾಗಿ ನಿಂದನೆ

ಸ್ವಾಮಿ ದಾಸ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಚಿಕಿತ್ಸೆಗಾಗಿ ಗುಡೂರು ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಡೂರು ಡಿಎಸ್‌ಪಿ ಸೂರ್ಯನಾರಾಯಣರೆಡ್ಡಿ ಮಾತನಾಡಿ, ಗುಡೂರು ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್‌ಕಾನ್ಸ್‌ಟೇಬಲ್‌ ಮೇಲೆ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ. ದಾಳಿಕೋರನನ್ನು ಪಶ್ಚಿಮ ಬಂಗಾಳದ ಲಾಲ್ತುಕ್ ಕಾಲಿಂದ ಎಂದು ಗುರುತಿಸಲಾಗಿದ್ದು, ಯಾವ ಕಾರಣದಿಂದ ಹಲ್ಲೆ ನಡೆಸಿದ್ದಾನೆ ಎಂಬುದು ತಿಳಿದುಬಂದಿಲ್ಲ. ದಾಳಿಕೋರನನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ