AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ ಎಂದು ಲಿವ್​-ಇನ್ ಸಂಗಾತಿಯ ಹತ್ಯೆಗೈದ ವ್ಯಕ್ತಿ

ತನಗೆ ಇಷ್ಟವಾದ ಅಡುಗೆ ಮಾಡಿಲ್ಲ ಎನ್ನುವ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ತನ್ನ ಲಿವ್-ಇನ್ ಸಂಗಾತಿಯನ್ನೇ ಹತ್ಯೆಗೈದಿದ್ದಾನೆ. ಲಲ್ಲನ್ ಯಾದವ್ (35) ವಿಚಾರಣೆ ವೇಳೆ ಮದ್ಯದ ಅಮಲಿನಲ್ಲಿ ತನ್ನ ಸಂಗಾತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ ಎಂದು ಲಿವ್​-ಇನ್ ಸಂಗಾತಿಯ ಹತ್ಯೆಗೈದ ವ್ಯಕ್ತಿ
ಅಪರಾಧ
ನಯನಾ ರಾಜೀವ್
|

Updated on: Mar 17, 2024 | 3:10 PM

Share

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ ಎಂದು ವ್ಯಕ್ತಿಯೊಬ್ಬ ತನ್ನ ಲಿವ್​-ಇನ್ ಸಂಗಾತಿಯನ್ನು ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಆತ ತನ್ನ ಲಿವ್​ ಇನ್ ಸಂಗಾತಿಯನ್ನು ಹೊಡೆದು ಹತ್ಯೆ ಮಾಡಿದ್ದಾನೆ. ಲಲ್ಲನ್ ಯಾದವ್ (35) ವಿಚಾರಣೆ ವೇಳೆ ಮದ್ಯದ ಅಮಲಿನಲ್ಲಿ ತನ್ನ ಸಂಗಾತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ಮೊಟ್ಟೆ ಕರಿ ಮಾಡಲು ನಿರಾಕರಿಸಿದಾಗ ಆತ ತನ್ನ ತಾಳ್ಮೆ ಕಳೆದುಕೊಂಡು ಸುತ್ತಿಗೆ ಮತ್ತು ಬೆಲ್ಟ್‌ನಿಂದ ಹೊಡೆದಿದ್ದಾನೆ ಎಂದು ಯಾದವ್ ಪೊಲೀಸರಿಗೆ ತಿಳಿಸಿದ್ದಾರೆ. ಬಿಹಾರದ ಮಾಧೇಪುರ ಜಿಲ್ಲೆಯ ಔರಾಹಿ ಗ್ರಾಮದವರಾದ ಯಾದವ್ ಅವರನ್ನು ಪಾಲಮ್ ವಿಹಾರ್ ಪೊಲೀಸ್ ಠಾಣೆಯ ತಂಡ ದೆಹಲಿಯ ಸರಾಯ್ ಕಾಲೇ ಖಾನ್ ಪ್ರದೇಶದಿಂದ ಬಂಧಿಸಿದೆ.

ಚಿಂದಿ ಆಯುವ ಅಂಜಲಿ (32) ಚೌಮಾ ಗ್ರಾಮದ ನಿರ್ಮಾಣ ಹಂತದ ಕಟ್ಟಡದಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ. ಶವವನ್ನು ಕಂಡ ನಂತರ ಕಟ್ಟಡದ ಉಸ್ತುವಾರಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರ ಪ್ರಕಾರ, ಯಾದವ್ ಮತ್ತು ಅಂಜಲಿಯನ್ನು ಮಾರ್ಚ್ 10 ರಂದು ಗುರುಗ್ರಾಮ ಬಸ್ ನಿಲ್ದಾಣದಿಂದ ಕೆಲಸದ ಸ್ಥಳಕ್ಕೆ ಕರೆತರಲಾಗಿತ್ತು.

ಮತ್ತಷ್ಟು ಓದಿ: Uttar Pradesh: ನಿರಂತರ ಕಿರುಕುಳದಿಂದ ಬೇಸತ್ತು ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಅವರ ಸರಿಯಾದ ಹೆಸರುಗಳು, ವಿಳಾಸಗಳು ಮತ್ತು ಐಡಿಗಳನ್ನು ಸಹ ಮನೆ ಮಾಲೀಕರು ತೆಗೆದುಕೊಂಡಿಲ್ಲ. ಯಾದವ್ ಅಂಜಲಿಯನ್ನು ತನ್ನ ಹೆಂಡತಿ ಎಂದು ಪರಿಚಯಿಸಿದ್ದ. ಆರು ವರ್ಷಗಳ ಹಿಂದೆ ಹಾವು ಕಡಿತದಿಂದ ಪತ್ನಿ ಮೃತಪಟ್ಟಿದ್ದು, ಬಳಿಕ ದೆಹಲಿಗೆ ಬಂದಿದ್ದಾಗಿ ಯಾದವ್ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾರೆ.

ಸುಮಾರು ಏಳು ತಿಂಗಳ ಹಿಂದೆ, ಅವರು ಚಿಂದಿ ಆಯುವ ಅಂಜಲಿಯನ್ನು ಭೇಟಿಯಾಗಿದ್ದ ಮತ್ತು ಇಬ್ಬರೂ ಕೂಲಿ ಕೆಲಸ ಮಾಡುವಾಗ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಕೊಂದು ಆತ ಪರಾರಿಯಾಗಿದ್ದ, ಕೊಲೆಗೆ ಬಳಸಿದ ಸುತ್ತಿಗೆ ಮತ್ತು ಬೆಲ್ಟ್ ಅನ್ನು ನಾವು ವಶಪಡಿಸಿಕೊಂಡಿದ್ದೇವೆ ಮತ್ತು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪಾಲಂ ವಿಹಾರ್ ಎಸಿಪಿ ನವೀನ್ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ