Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ ಎಂದು ಲಿವ್​-ಇನ್ ಸಂಗಾತಿಯ ಹತ್ಯೆಗೈದ ವ್ಯಕ್ತಿ

ತನಗೆ ಇಷ್ಟವಾದ ಅಡುಗೆ ಮಾಡಿಲ್ಲ ಎನ್ನುವ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ತನ್ನ ಲಿವ್-ಇನ್ ಸಂಗಾತಿಯನ್ನೇ ಹತ್ಯೆಗೈದಿದ್ದಾನೆ. ಲಲ್ಲನ್ ಯಾದವ್ (35) ವಿಚಾರಣೆ ವೇಳೆ ಮದ್ಯದ ಅಮಲಿನಲ್ಲಿ ತನ್ನ ಸಂಗಾತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ ಎಂದು ಲಿವ್​-ಇನ್ ಸಂಗಾತಿಯ ಹತ್ಯೆಗೈದ ವ್ಯಕ್ತಿ
ಅಪರಾಧ
Follow us
ನಯನಾ ರಾಜೀವ್
|

Updated on: Mar 17, 2024 | 3:10 PM

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ ಎಂದು ವ್ಯಕ್ತಿಯೊಬ್ಬ ತನ್ನ ಲಿವ್​-ಇನ್ ಸಂಗಾತಿಯನ್ನು ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಆತ ತನ್ನ ಲಿವ್​ ಇನ್ ಸಂಗಾತಿಯನ್ನು ಹೊಡೆದು ಹತ್ಯೆ ಮಾಡಿದ್ದಾನೆ. ಲಲ್ಲನ್ ಯಾದವ್ (35) ವಿಚಾರಣೆ ವೇಳೆ ಮದ್ಯದ ಅಮಲಿನಲ್ಲಿ ತನ್ನ ಸಂಗಾತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ಮೊಟ್ಟೆ ಕರಿ ಮಾಡಲು ನಿರಾಕರಿಸಿದಾಗ ಆತ ತನ್ನ ತಾಳ್ಮೆ ಕಳೆದುಕೊಂಡು ಸುತ್ತಿಗೆ ಮತ್ತು ಬೆಲ್ಟ್‌ನಿಂದ ಹೊಡೆದಿದ್ದಾನೆ ಎಂದು ಯಾದವ್ ಪೊಲೀಸರಿಗೆ ತಿಳಿಸಿದ್ದಾರೆ. ಬಿಹಾರದ ಮಾಧೇಪುರ ಜಿಲ್ಲೆಯ ಔರಾಹಿ ಗ್ರಾಮದವರಾದ ಯಾದವ್ ಅವರನ್ನು ಪಾಲಮ್ ವಿಹಾರ್ ಪೊಲೀಸ್ ಠಾಣೆಯ ತಂಡ ದೆಹಲಿಯ ಸರಾಯ್ ಕಾಲೇ ಖಾನ್ ಪ್ರದೇಶದಿಂದ ಬಂಧಿಸಿದೆ.

ಚಿಂದಿ ಆಯುವ ಅಂಜಲಿ (32) ಚೌಮಾ ಗ್ರಾಮದ ನಿರ್ಮಾಣ ಹಂತದ ಕಟ್ಟಡದಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ. ಶವವನ್ನು ಕಂಡ ನಂತರ ಕಟ್ಟಡದ ಉಸ್ತುವಾರಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರ ಪ್ರಕಾರ, ಯಾದವ್ ಮತ್ತು ಅಂಜಲಿಯನ್ನು ಮಾರ್ಚ್ 10 ರಂದು ಗುರುಗ್ರಾಮ ಬಸ್ ನಿಲ್ದಾಣದಿಂದ ಕೆಲಸದ ಸ್ಥಳಕ್ಕೆ ಕರೆತರಲಾಗಿತ್ತು.

ಮತ್ತಷ್ಟು ಓದಿ: Uttar Pradesh: ನಿರಂತರ ಕಿರುಕುಳದಿಂದ ಬೇಸತ್ತು ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಅವರ ಸರಿಯಾದ ಹೆಸರುಗಳು, ವಿಳಾಸಗಳು ಮತ್ತು ಐಡಿಗಳನ್ನು ಸಹ ಮನೆ ಮಾಲೀಕರು ತೆಗೆದುಕೊಂಡಿಲ್ಲ. ಯಾದವ್ ಅಂಜಲಿಯನ್ನು ತನ್ನ ಹೆಂಡತಿ ಎಂದು ಪರಿಚಯಿಸಿದ್ದ. ಆರು ವರ್ಷಗಳ ಹಿಂದೆ ಹಾವು ಕಡಿತದಿಂದ ಪತ್ನಿ ಮೃತಪಟ್ಟಿದ್ದು, ಬಳಿಕ ದೆಹಲಿಗೆ ಬಂದಿದ್ದಾಗಿ ಯಾದವ್ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾರೆ.

ಸುಮಾರು ಏಳು ತಿಂಗಳ ಹಿಂದೆ, ಅವರು ಚಿಂದಿ ಆಯುವ ಅಂಜಲಿಯನ್ನು ಭೇಟಿಯಾಗಿದ್ದ ಮತ್ತು ಇಬ್ಬರೂ ಕೂಲಿ ಕೆಲಸ ಮಾಡುವಾಗ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಕೊಂದು ಆತ ಪರಾರಿಯಾಗಿದ್ದ, ಕೊಲೆಗೆ ಬಳಸಿದ ಸುತ್ತಿಗೆ ಮತ್ತು ಬೆಲ್ಟ್ ಅನ್ನು ನಾವು ವಶಪಡಿಸಿಕೊಂಡಿದ್ದೇವೆ ಮತ್ತು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪಾಲಂ ವಿಹಾರ್ ಎಸಿಪಿ ನವೀನ್ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ