AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕರ ಮುಂದೆ ಮೂತ್ರ ವಿಸರ್ಜನೆ ಮಾಡಿದ ಕುಡುಕ

ಖಾನ್ ಅವರನ್ನು ಬಂಧಿಸಿ ಸಫ್ದರ್‌ಜಂಗ್ ಆಸ್ಪತ್ರೆಗೆ ಕಳುಹಿಸಲಾಯಿತು, ಅಲ್ಲಿ ಆತ ಕುಡಿದಿದ್ದ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 294 (ಅಶ್ಲೀಲ ಕೃತ್ಯ) ಮತ್ತು 510 (ಕುಡಿತದ ವ್ಯಕ್ತಿಯಿಂದ ಸಾರ್ವಜನಿಕವಾಗಿ ದುರ್ವರ್ತನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೆಹಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕರ ಮುಂದೆ ಮೂತ್ರ ವಿಸರ್ಜನೆ ಮಾಡಿದ ಕುಡುಕ
ದೆಹಲಿ ವಿಮಾನ ನಿಲ್ದಾಣ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 11, 2023 | 3:24 PM

ದೆಹಲಿ:ಜ.8ರಂದು ದೆಹಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ(IGI Airport) ಟಿ3ಯಲ್ಲಿ ಪಾನಮತ್ತ ವ್ಯಕ್ತಿಯೊಬ್ಬರು ನಿರ್ಗಮನ ಗೇಟ್‌ 6ರ ಮುಂದೆ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿರುವುದು ವರದಿಯಾಗಿದೆ. ಅವರು ದೆಹಲಿಯಿಂದ (Delhi) ದಮ್ಮಾಮ್‌ಗೆ ವಿಮಾನದಲ್ಲಿ ತೆರಳಬೇಕಿತ್ತು. ವ್ಯಕ್ತಿಯನ್ನು ಜೌಹರ್ ಅಲಿ ಖಾನ್ ಎಂದು ಗುರುತಿಸಲಾಗಿದೆ. ಸಹ ಪ್ರಯಾಣಿಕರ ಪ್ರಕಾರ, ಖಾನ್ ಕುಡಿದ ಮತ್ತಿನಲ್ಲಿದ್ದ ಇತರ ಪ್ರಯಾಣಿಕರನ್ನು ನಿಂದಿಸಿದ್ದಾನೆಆತನನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಜೌಹರ್ ಅಲಿ ಖಾನ್ ಎಂಬ ಪ್ರಯಾಣಿಕ ಡಿಪಾರ್ಚರ್ ಗೇಟ್ ನಂ. 6 ಮುಂಭಾಗದ ಪ್ರದೇಶದಲ್ಲಿ ಕುಡಿದ ಸ್ಥಿತಿಯಲ್ಲಿದ್ದರು. ಪ್ರಯಾಣಿಕರು ಮತ್ತು ಸಂದರ್ಶಕರ ನಡುವೆ ಸಾರ್ವಜನಿಕ ಸ್ಥಳದಲ್ಲಿ ಆತ ಮೂತ್ರ ವಿಸರ್ಜಿಸಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ಕಿರುಚುವ ಮತ್ತು ಸಾಮಾನ್ಯ ಜನರ ಮೇಲೆ ನಿಂದನೆ ಮಾಡುವ ಮೂಲಕ ಅವನು ಸಾರ್ವಜನಿಕ ಸ್ಥಳದಲ್ಲಿ ಉಪದ್ರವವನ್ನು ಸೃಷ್ಟಿಸಿದನು ಎಂದು ಎಫ್‌ಐಆರ್ ನಲ್ಲಿ ಹೇಳಲಾಗಿದೆ.

ಖಾನ್ ಅವರನ್ನು ಬಂಧಿಸಿ ಸಫ್ದರ್‌ಜಂಗ್ ಆಸ್ಪತ್ರೆಗೆ ಕಳುಹಿಸಲಾಯಿತು, ಅಲ್ಲಿ ಆತ ಕುಡಿದಿದ್ದ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 294 (ಅಶ್ಲೀಲ ಕೃತ್ಯ) ಮತ್ತು 510 (ಕುಡಿತದ ವ್ಯಕ್ತಿಯಿಂದ ಸಾರ್ವಜನಿಕವಾಗಿ ದುರ್ವರ್ತನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Bhopal Gas Tragedy: ಭೋಪಾಲ್ ಅನಿಲ ದುರಂತದ ಪರಿಹಾರದ ಬಗ್ಗೆ 30 ವರ್ಷದ ನಂತರ ಮರುಪರಿಶೀಲನೆ ಅಸಾಧ್ಯ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ ಅವರನ್ನು ಬಂಧಿಸಲಾಗಿರುವ ಘಟನೆಯ ನಡುವೆ ಈ ಘಟನೆ ನಡೆದಿದೆ. ವಿಮಾನ ನಿಲ್ದಾಣದಲ್ಲಿ ಅಥವಾ ವಿಮಾನದೊಳಗೆ ಕುಡಿದು ಪ್ರಯಾಣಿಕರು ಅನುಚಿತವಾಗಿ ವರ್ತಿಸಿದ ಕಳೆದ ವಾರದಲ್ಲಿ ಇದು ಮೂರನೇ ಘಟನೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ