ಮದ್ಯದ ಮತ್ತಿನಲ್ಲಿ ಇಂಡಿಗೋ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕರು ಪೊಲೀಸ್ ವಶಕ್ಕೆ

ಜೈಪುರದಿಂದ ಬೆಂಗಳೂರಿಗೆ 6E 556 ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರು ಕುಡಿದ ಅಮಲಿನಲ್ಲಿ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದರ. ಅವರಿಹೆ ಹಲವಾರು ಬಾರಿ ಎಚ್ಚರಿಕೆ ನೀಡಲಾಗಿತ್ತು. ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳೀಯ ಕಾನೂನು ಜಾರಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ" ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಯದ ಮತ್ತಿನಲ್ಲಿ ಇಂಡಿಗೋ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕರು ಪೊಲೀಸ್ ವಶಕ್ಕೆ
ಇಂಡಿಗೋ
ರಶ್ಮಿ ಕಲ್ಲಕಟ್ಟ

Updated on: Nov 20, 2023 | 2:10 PM

ದೆಹಲಿ ನವೆಂಬರ್ 20: ಮದ್ಯದ ಅಮಲಿನಲ್ಲಿ ಪ್ರಯಾಣಿಕರೊಬ್ಬರು ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ (IndiGo )ವಿಮಾನಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಜೈಪುರದಿಂದ (Jaipur) ಬೆಂಗಳೂರಿಗೆ 6E 556 ವಿಮಾನದಲ್ಲಿ ಹಲವಾರು ಎಚ್ಚರಿಕೆಗಳ ಹೊರತಾಗಿಯೂ ಪ್ರಯಾಣಿಕರು ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಇಂಡಿಗೋ ತಿಳಿಸಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, ಅಡ್ಡಿಪಡಿಸಿದ ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯ ಕಾನೂನು ಜಾರಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು, ಅವರು ಈಗ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸುತ್ತಾರೆ.

“ಜೈಪುರದಿಂದ ಬೆಂಗಳೂರಿಗೆ 6E 556 ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರು ಕುಡಿದ ಅಮಲಿನಲ್ಲಿ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದರ. ಅವರಿಹೆ ಹಲವಾರು ಬಾರಿ ಎಚ್ಚರಿಕೆ ನೀಡಲಾಗಿತ್ತು. ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳೀಯ ಕಾನೂನು ಜಾರಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ” ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.

ವ್ಯಕ್ತಿಯು ಎದುರಿಸಬೇಕಾದ ಆರೋಪಗಳ ಸ್ವರೂಪ ಮತ್ತು ಪ್ರಮಾಣವು ಈ ಸಮಯದಲ್ಲಿ ಬಹಿರಂಗವಾಗಿಲ್ಲ. ವಿಮಾನಗಳಲ್ಲಿ ಅಶಿಸ್ತಿನ ವರ್ತನೆಯ ಘಟನೆಗಳು ವಿಶ್ವಾದ್ಯಂತ ಏರ್‌ಲೈನ್‌ಗಳಿಗೆ ಹೆಚ್ಚುತ್ತಿರುವ ಕಾಳಜಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರಯಾಣಿಕರ ಅನುಚಿತ ವರ್ತನೆಯ ಹಲವಾರು ಘಟನೆಗಳು ವರದಿ ಆಗಿವೆ, ಈ ವರ್ಷದ ಆರಂಭದಲ್ಲಿ ಏರ್ ಇಂಡಿಯಾ ಮೂತ್ರ ವಿಸರ್ಜನೆಯ ಪ್ರಕರಣವು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಪ್ರಕರಣವು ನ್ಯೂಯಾರ್ಕ್‌ನಿಂದ ನವದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ನಡೆದ ಘಟನೆಗೆ ಸಂಬಂಧಿಸಿದೆ, “ಅಶಿಸ್ತಿನ” ಪ್ರಯಾಣಿಕ ಶಂಕರ್ ಮಿಶ್ರಾ, ವಿಮಾನದಲ್ಲಿ ವಿಪರೀತ ಮದ್ಯವನ್ನು ಸೇವಿಸಿದ ನಂತರ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದರು. ಘಟನೆಯ ನಂತರ ಸಂತ್ರಸ್ತೆ ವಿಮಾನಯಾನ ಸಂಸ್ಥೆಗೆ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ಕೇರಳ ಸರ್ಕಾರ ಮನವಿ; ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ವಿಮಾನದ ಸಮಯದಲ್ಲಿ ಪ್ರಯಾಣಿಕ ತನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ ನಂತರ ಏರ್ ಇಂಡಿಯಾ ಮತ್ತು ಡಿಜಿಸಿಎ ಎರಡೂ ತನ್ನನ್ನು “ಕಾಳಜಿ ಮತ್ತು ಜವಾಬ್ದಾರಿ” ಯಿಂದ ನೋಡಿಕೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಮಹಿಳೆ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಮೂತ್ರದಿಂದ ಒದ್ದೆಯಾದ ಮತ್ತು ವಾಸನೆಯಿಂದ ಕೂಡಿದ ಅದೇ ಸೀಟಿನಲ್ಲಿ” ಆಕೆಯನ್ನು ಕುಳಿತುಕೊಳ್ಳುವಂತೆ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us