AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ವಿಮಾನದಲ್ಲಿ ಕುಡುಕ ಯುವತಿಯಿಂದ ಅಸಭ್ಯ ವರ್ತನೆ: ಕೋಲ್ಕತ್ತಾ ಪೊಲೀಸರಿಗೆ ಹಸ್ತಾಂತರ

ಭಾರತೀಯ ಕಾನೂನಿನ ಪ್ರಕಾರ, ಸೂರ್ಯಾಸ್ತದ ನಂತರ ಪೊಲೀಸರು ಮಹಿಳೆಯನ್ನು ಬಂಧಿಸುವಂತಿಲ್ಲ, ಆದ್ದರಿಂದ ಸಿಐಎಸ್ಎಫ್ ಸಿಬ್ಬಂದಿ ಸೂರ್ಯೋದಯದವರೆಗೆ ಕಾಯಬೇಕಾಯಿತು.

ಇಂಡಿಗೋ ವಿಮಾನದಲ್ಲಿ ಕುಡುಕ ಯುವತಿಯಿಂದ ಅಸಭ್ಯ ವರ್ತನೆ: ಕೋಲ್ಕತ್ತಾ ಪೊಲೀಸರಿಗೆ ಹಸ್ತಾಂತರ
ಇಂಡಿಗೋ ವಿಮಾನದಲ್ಲಿ ಕುಡುಕ ಯುವತಿಯಿಂದ ಅಸಭ್ಯ ವರ್ತನೆ
ಸಾಧು ಶ್ರೀನಾಥ್​
|

Updated on:May 12, 2023 | 9:37 AM

Share

ವಿಮಾನದಲ್ಲಿ ಪ್ರಯಾಣಿಕರು ಅಸಭ್ಯವಾಗಿ, ಅನುಚಿತವಾಗಿ (misbehave) ವರ್ತಿಸುವ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿವೆ. ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಸೇರಿದಂತೆ ದೇಶದ ಪ್ರಮುಖ ವಿಮಾನಯಾನ ಸಂಸ್ಥೆಗಳಲ್ಲಿ ಇಂತಹ ಹಲವಾರು ಘಟನೆಗಳು ವರದಿಯಾಗಿವೆ. ಆದರೆ ಈಗ ಆ ಪಟ್ಟಿಗೆ ಇಂಡಿಗೋ ಕೂಡ ಸೇರುತ್ತಿದೆ. ಈ ವೇಳೆ ಯುವತಿಯೊಬ್ಬಳು (woman) ಫ್ಲೈಟ್ ನಲ್ಲಿ ( indigo flight) ಸಮಸ್ಯೆ ಸೃಷ್ಟಿಸಿದ್ದಾಳೆ. ವಿಮಾನದಲ್ಲಿ ಪಾನಮತ್ತ ವಿಮಾಣ ನಿಲ್ದಾಣ ಕಾಯುವ ಸಿಐಎಸ್ಎಫ್ ಸಿಬ್ಬಂದಿ ಅವರನ್ನು ಕೋಲ್ಕತ್ತಾ ಪೊಲೀಸರಿಗೆ ಹಸ್ತಾಂತರಿಸಿದೆ. ನವದೆಹಲಿ-ಕೋಲ್ಕತ್ತಾ ನಡುವೆ (new delhi, kolkata) ಸಂಚರಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದೆ.

ಕುಡಿದ ಮತ್ತಿನಲ್ಲಿದ್ದ ಯುವತಿಯು ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾಳೆ. ಈ ಘಟನೆಯ ನಂತರ ಸಿಐಎಸ್‌ಎಫ್ ಸಿಬ್ಬಂದಿ ಮಹಿಳೆಯನ್ನು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ. ಗುರುವಾರ ಬೆಳಗ್ಗೆ ಸಿಐಎಸ್‌ಎಫ್ ಸಿಬ್ಬಂದಿ ಮಹಿಳೆಯನ್ನು ಕೋಲ್ಕತ್ತಾ ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಮಾನದಲ್ಲಿ ಪಾನಮತ್ತರಾಗಿದ್ದ ಮಹಿಳೆ ಪರಂಜಿತ್ ಕೌರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂಡಿಗೋದ ನವದೆಹಲಿ-ಕೋಲ್ಕತ್ತಾ ವಿಮಾನದಲ್ಲಿ ಪರಂಜಿತ್ ಕೋಲ್ಕತ್ತಾಗೆ ಹೋಗುತ್ತಿದ್ದರು. ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಮದ್ಯದ ಅಮಲಿನಲ್ಲಿದ್ದ ಮಹಿಳೆಯೊಬ್ಬರು ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಮಹಿಳೆ ಹಾರಾಟಕ್ಕೆ ಅಡ್ಡಿಪಡಿಸುತ್ತಿರುವುದನ್ನು ಅರಿತ ಕ್ಯಾಬಿನ್ ಸಿಬ್ಬಂದಿ ಘಟನೆಯ ಬಗ್ಗೆ ಏರ್‌ಲೈನ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಮಾನಯಾನ ಅಧಿಕಾರಿಗಳು ತಕ್ಷಣವೇ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾದ ಸಿಐಎಸ್ಎಫ್ ಸಿಬ್ಬಂದಿಯನ್ನು ಸಂಪರ್ಕಿಸಿದರು. ಮಧ್ಯಾಹ್ನ 1.10ಕ್ಕೆ ವಿಮಾನ ಲ್ಯಾಂಡ್ ಆದ ಬಳಿಕ ಏರ್ ಲೈನ್ ಸಿಬ್ಬಂದಿ ಆಕೆಯನ್ನು ಸಿಐಎಸ್ಎಫ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಗುರುವಾರ ಬೆಳಗಿನ ಜಾವದವರೆಗೆ ಸಿಐಎಸ್‌ಎಫ್‌ ಆಕೆಯನ್ನು ವಿಮಾನ ನಿಲ್ದಾಣದ ಆವರಣದಲ್ಲಿ ಬಂಧಿಸಿ, ಕೊನೆಗೆ ಗುರುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಬಿಧಾನನಗರ ಸಿಟಿ ಪೊಲೀಸ್‌ ಅಧೀನದಲ್ಲಿರುವ ಏರ್‌ಪೋರ್ಟ್‌ ಪೊಲೀಸ್‌ ಠಾಣೆಗೆ ಹಸ್ತಾಂತರಿಸಿದೆ. ಭಾರತೀಯ ಕಾನೂನಿನ ಪ್ರಕಾರ, ಸೂರ್ಯಾಸ್ತದ ನಂತರ ಪೊಲೀಸರು ಮಹಿಳೆಯನ್ನು ಬಂಧಿಸುವಂತಿಲ್ಲ, ಆದ್ದರಿಂದ ಸಿಐಎಸ್ಎಫ್ ಸಿಬ್ಬಂದಿ ಸೂರ್ಯೋದಯದವರೆಗೆ ಕಾಯಬೇಕಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:36 am, Fri, 12 May 23

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ