AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧ ಸಡಿಸಿಲಿದ ದುಬೈ; ಭಾರತದಿಂದ ಹೋಗುವವರಿದ್ದರೆ ಈ ನಿಯಮಗಳ ಪಾಲನೆ ಕಡ್ಡಾಯ

ಭಾರತದಿಂದ ದುಬೈಗೆ ಹೊರಡುವ ಪ್ರಯಾಣಿಕರೂ ಸಹ ನಾಲ್ಕು ಗಂಟೆ ಮೊದಲು ರ್ಯಾಪಿಡ್​ ಪಿಸಿಆರ್​ ಟೆಸ್ಟ್​​ಗೆ ಒಳಗಾಗಬೇಕು. ಹಾಗೇ ದುಬೈ ತಲುಪಿದ ನಂತರ ಇನ್ನೊಮ್ಮೆ ಪಿಸಿಆರ್​ ಟೆಸ್ಟ್ ಮಾಡಿಸಬೇಕು.   ಟೆಸ್ಟ್​ಗೆ ಒಳಗಾಗುವವರೆಗೂ ಅವರು ಸಾಂಸ್ಥಿಕ ಕ್ವಾರಂಟೈನ್​​ನಲ್ಲೇ ಇರಬೇಕಾಗುತ್ತದೆ.

ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧ ಸಡಿಸಿಲಿದ ದುಬೈ; ಭಾರತದಿಂದ ಹೋಗುವವರಿದ್ದರೆ ಈ ನಿಯಮಗಳ ಪಾಲನೆ ಕಡ್ಡಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 20, 2021 | 9:57 AM

Share

ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಭಾರತ ಸೇರಿ ಹಲವು ರಾಷ್ಟ್ರಗಳ ಪ್ರಯಾಣಿಕರಿಗೆ ನಿರ್ಬಂಧ ಹೇರಿದ್ದ ದುಬೈ ಸರ್ಕಾರ ಅದನ್ನೀಗ ಸಡಿಲಿಸಿದೆ. ಅಂದರೆ ದುಬೈನ ನಿವಾಸಿಗಳಾಗಿದ್ದು ಭಾರತದಕ್ಕೆ ಬಂದು, ಲಾಕ್​ಡೌನ್ ಕಾರಣದಿಂದ ಅಲ್ಲಿಗೆ ಹೋಗಲು ಸಾಧ್ಯವಾಗದೆ ಇದ್ದವರು ಈಗ ದುಬೈಗೆ ತೆರಳಬಹುದು. ಆದರೆ ಯುಎಇ ಅನುಮೋದಿತ ಕೊವಿಡ್​ ಲಸಿಕೆ ಎರಡೂ ಡೋಸ್​ ಪಡೆದವರು ದುಬೈ ಪ್ರವೇಶಿಸಬಹುದಾಗಿದೆ ಎಂದು ಅಲ್ಲಿನ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇದೀಗ ಭಾರತ, ದಕ್ಷಿಣಾಫ್ರಿಕಾ, ನೈಜೀರಿಯಾ ದೇಶಗಳ ಪ್ರಯಾಣಿಕರು ಜೂ.23ರಿಂದ ದುಬೈನ್ನು ಪ್ರವೇಶಿಸಬಹುದಾಗಿದೆ. ಆದರೆ ಕೊವಿಡ್​ 19 ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. ಅದರೊಂದಿಗೆ ಕೆಲವು ಪರಿಷ್ಕೃತ ಶಿಷ್ಟಾಚಾರಗಳನ್ನು ದುಬೈ ಆಡಳಿತ ಪ್ರಕಟಿಸಿದ್ದು, ಅದನ್ನು ಪಾಲಿಸಲೇಬೇಕು ಎಂದು ಹೇಳಲಾಗಿದೆ.

ಭಾರತದಿಂದ ದುಬೈಗೆ ಪ್ರಯಾಣ ಬೆಳೆಸುವವರು ಮಾನ್ಯತೆ ಇರುವ ರೆಸಿಡೆನ್ಸ್​ ವೀಸಾ ಹೊಂದಿರಬೇಕು. ಯುಎಇಯಿಂದಲೂ ಅನುಮೋದನೆ ಹೊಂದಿದ ಕೊವಿಡ್​ 19 ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿರಬೇಕು. ಅಂದರೆ ಕೊವಿಶೀಲ್ಡ್​ ಲಸಿಕೆಯ ಎರಡೂ ಡೋಸ್​ ಪಡೆದಿರಬೇಕು. ಇನ್ನುಳಿದಂತೆ ಯುಎಇ ಸರ್ಕಾರ ಚೀನಾದ ಸಿನೋಫಾರ್ಮ್​ ಲಸಿಕೆ, ಫೈಝರ್​, ಸ್ಪುಟ್ನಿಕ್​ ವಿ ಲಸಿಕೆಗಳಿಗೆ ಅನುಮೋದನೆ ನೀಡಿದೆ. ಹಾಗೇ, ದಕ್ಷಿಣ ಆಫ್ರಿಕಾ ಮತ್ತು ನೈಜೀರಿಯಾದ ಪ್ರಯಾಣಿಕರೂ ಕೂಡ (ಇಲ್ಲಿನ ನಿವಾಸಿಗಳು ಅಲ್ಲದಿದ್ದರೂ) ದುಬೈಗೆ ಪ್ರವೇಶ ಮಾಡಬಹುದಾಗಿದ್ದು, ಲಸಿಕೆ ಹಾಕಿಸಿಕೊಂಡಿರಬೇಕು ಮತ್ತು ಪಿಸಿಆರ್​ ನೆಗೆಟಿವ್​ ರಿಪೋರ್ಟ್ ಹೊಂದಿರಬೇಕು.

ಭಾರತದಿಂದ ದುಬೈಗೆ ಹೊರಡುವ ಪ್ರಯಾಣಿಕರೂ ಸಹ ನಾಲ್ಕು ಗಂಟೆ ಮೊದಲು ರ್ಯಾಪಿಡ್​ ಪಿಸಿಆರ್​ ಟೆಸ್ಟ್​​ಗೆ ಒಳಗಾಗಬೇಕು. ಹಾಗೇ ದುಬೈ ತಲುಪಿದ ನಂತರ ಇನ್ನೊಮ್ಮೆ ಪಿಸಿಆರ್​ ಟೆಸ್ಟ್ ಮಾಡಿಸಬೇಕು.   ಟೆಸ್ಟ್​ಗೆ ಒಳಗಾಗುವವರೆಗೂ ಅವರು ಸಾಂಸ್ಥಿಕ ಕ್ವಾರಂಟೈನ್​​ನಲ್ಲೇ ಇರಬೇಕಾಗುತ್ತದೆ. ಟೆಸ್ಟ್​ಗೆ ಒಳಗಾಗಿ 24ಗಂಟೆಯಲ್ಲಿ ರಿಪೋರ್ಟ್​ ಬರುವುದರಿಂದ ಈ ನಿಯಮ ಪಾಲನೆ ಕಡ್ಡಾಯವಾಗಿದೆ.

ಇದನ್ನೂ ಓದಿ: ನಾಳೆಯಿಂದ ಬೆಂಗಳೂರಿನಲ್ಲಿ ಎಲ್ಲವೂ ಬಹುತೇಕ ನಾರ್ಮಲ್.. ಹೋಟೆಲ್​ನಲ್ಲಿ ಟೇಬಲ್ ಸರ್ವಿಸ್ ಶುರು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?