AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಭಾಷೆಯಲ್ಲಿ ಟ್ವೀಟ್ ಮಾಡಿದ ಯುಎಇ ಪ್ರಧಾನಿಗೆ ಅರೇಬಿಕ್​ನಲ್ಲಿ ಉತ್ತರಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

ಯುಎಇ ಕೇರಳದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದೆ. ದುಬೈ ಮತ್ತು ಯುಎಇಯ ಆರ್ಥಿಕ ಮತ್ತು ಅಭಿವೃದ್ಧಿಯ ಬೆಳವಣಿಗೆಯಲ್ಲಿ ಕೇರಳಿಗರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಯುಎಇ ಪ್ರಧಾನಿ ಶೇಖ್ ಮೊಹಮ್ಮದ್ ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ.

ಮಲಯಾಳಂ ಭಾಷೆಯಲ್ಲಿ ಟ್ವೀಟ್ ಮಾಡಿದ ಯುಎಇ ಪ್ರಧಾನಿಗೆ ಅರೇಬಿಕ್​ನಲ್ಲಿ ಉತ್ತರಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್
ಯುಎಇ ಪ್ರಧಾನಿ ಜೊತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
TV9 Web
| Updated By: ಸುಷ್ಮಾ ಚಕ್ರೆ|

Updated on: Feb 03, 2022 | 6:14 PM

Share

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರನ್ನು ಎಮಿರೇಟ್ಸ್‌ನಲ್ಲಿ ಭೇಟಿಯಾದ ಬೆನ್ನಲ್ಲೇ ಯುಎಇ (UAE) ಉಪಾಧ್ಯಕ್ಷ ಹಾಗೂ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು ಮಲಯಾಳಂನಲ್ಲಿ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ಟ್ವೀಟ್ ಅನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ಟ್ವೀಟ್ ಜೊತೆಗೆ ಯುಎಇ ಪ್ರಧಾನ ಮಂತ್ರಿ ನಿನ್ನೆ ದುಬೈ ಎಕ್ಸ್‌ಪೋ 2020ರ ಸ್ಥಳದಲ್ಲಿ ಪಿಣರಾಯಿ ವಿಜಯನ್‌ ಅವರನ್ನು ಸ್ವಾಗತಿಸಿದ ಫೋಟೋವನ್ನು ಕೂಡ ಹಂಚಿಕೊಂಡಿದ್ದಾರೆ.

ಯುಎಇ ಪ್ರಧಾನಿ ಮಾಡಿದ ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ತಮ್ಮ ಟ್ವಿಟರ್ ಪೇಜಿನಲ್ಲಿ ಹಂಚಿಕೊಂಡಿದ್ದಾರೆ. ಯುಎಇ ಕೇರಳದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದೆ. ದುಬೈ ಮತ್ತು ಯುಎಇಯ ಆರ್ಥಿಕ ಮತ್ತು ಅಭಿವೃದ್ಧಿಯ ಬೆಳವಣಿಗೆಯಲ್ಲಿ ಕೇರಳಿಗರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಯುಎಇ ಪ್ರಧಾನಿ ಶೇಖ್ ಮೊಹಮ್ಮದ್ ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ.

ಕುತೂಹಲಕರವಾದ ವಿಚಾರವೆಂದರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶೇಖ್ ಮೊಹಮ್ಮದ್ ಬಿನ್ ರಶೀದ್ ಅವರಿಗೆ ಅರೇಬಿಕ್ ಭಾಷೆಯ ಟ್ವೀಟ್ ಮೂಲಕ ಧನ್ಯವಾದ ಅರ್ಪಿಸಿದ್ದಾರೆ. “ನಿಮ್ಮ ಆತಿಥ್ಯ ಮತ್ತು ಆತ್ಮೀಯ ಸ್ವಾಗತದಿಂದ ನಾನು ವಿನಮ್ರನಾಗಿದ್ದೇನೆ” ಎಂದು ಪಿಣರಾಯಿ ವಿಜಯನ್ ಅರೇಬಿಕ್ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಕೇರಳ ರಾಜ್ಯವು ಯುಎಇ ಮತ್ತು ದುಬೈನೊಂದಿಗಿನ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ಬಯಸುತ್ತದೆ ಎಂದು ಕೂಡ ಸಿಎಂ ಪಿಣರಾಯಿ ವಿಜಯನ್ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಹಾವು ಹಿಡಿಯುತ್ತಿದ್ದಾಗ ವಾವಾ ಸುರೇಶ್​​ಗೆ ಕಚ್ಚಿದ ನಾಗರ; ಆಸ್ಪ್ರತೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದ ವೈದ್ಯರು

Viral News: 3 ವರ್ಷ ಸಿಗರೇಟ್ ಸೇದುವುದು ಬಿಟ್ಟಿದ್ದಕ್ಕೆ ಲಕ್ಷಾಧಿಪತಿಯಾದ; ಹೇಗೆ ಅಂತೀರಾ?

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ