AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಭಾಷೆಯಲ್ಲಿ ಟ್ವೀಟ್ ಮಾಡಿದ ಯುಎಇ ಪ್ರಧಾನಿಗೆ ಅರೇಬಿಕ್​ನಲ್ಲಿ ಉತ್ತರಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

ಯುಎಇ ಕೇರಳದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದೆ. ದುಬೈ ಮತ್ತು ಯುಎಇಯ ಆರ್ಥಿಕ ಮತ್ತು ಅಭಿವೃದ್ಧಿಯ ಬೆಳವಣಿಗೆಯಲ್ಲಿ ಕೇರಳಿಗರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಯುಎಇ ಪ್ರಧಾನಿ ಶೇಖ್ ಮೊಹಮ್ಮದ್ ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ.

ಮಲಯಾಳಂ ಭಾಷೆಯಲ್ಲಿ ಟ್ವೀಟ್ ಮಾಡಿದ ಯುಎಇ ಪ್ರಧಾನಿಗೆ ಅರೇಬಿಕ್​ನಲ್ಲಿ ಉತ್ತರಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್
ಯುಎಇ ಪ್ರಧಾನಿ ಜೊತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
TV9 Web
| Edited By: |

Updated on: Feb 03, 2022 | 6:14 PM

Share

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರನ್ನು ಎಮಿರೇಟ್ಸ್‌ನಲ್ಲಿ ಭೇಟಿಯಾದ ಬೆನ್ನಲ್ಲೇ ಯುಎಇ (UAE) ಉಪಾಧ್ಯಕ್ಷ ಹಾಗೂ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು ಮಲಯಾಳಂನಲ್ಲಿ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ಟ್ವೀಟ್ ಅನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ಟ್ವೀಟ್ ಜೊತೆಗೆ ಯುಎಇ ಪ್ರಧಾನ ಮಂತ್ರಿ ನಿನ್ನೆ ದುಬೈ ಎಕ್ಸ್‌ಪೋ 2020ರ ಸ್ಥಳದಲ್ಲಿ ಪಿಣರಾಯಿ ವಿಜಯನ್‌ ಅವರನ್ನು ಸ್ವಾಗತಿಸಿದ ಫೋಟೋವನ್ನು ಕೂಡ ಹಂಚಿಕೊಂಡಿದ್ದಾರೆ.

ಯುಎಇ ಪ್ರಧಾನಿ ಮಾಡಿದ ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ತಮ್ಮ ಟ್ವಿಟರ್ ಪೇಜಿನಲ್ಲಿ ಹಂಚಿಕೊಂಡಿದ್ದಾರೆ. ಯುಎಇ ಕೇರಳದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದೆ. ದುಬೈ ಮತ್ತು ಯುಎಇಯ ಆರ್ಥಿಕ ಮತ್ತು ಅಭಿವೃದ್ಧಿಯ ಬೆಳವಣಿಗೆಯಲ್ಲಿ ಕೇರಳಿಗರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಯುಎಇ ಪ್ರಧಾನಿ ಶೇಖ್ ಮೊಹಮ್ಮದ್ ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ.

ಕುತೂಹಲಕರವಾದ ವಿಚಾರವೆಂದರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶೇಖ್ ಮೊಹಮ್ಮದ್ ಬಿನ್ ರಶೀದ್ ಅವರಿಗೆ ಅರೇಬಿಕ್ ಭಾಷೆಯ ಟ್ವೀಟ್ ಮೂಲಕ ಧನ್ಯವಾದ ಅರ್ಪಿಸಿದ್ದಾರೆ. “ನಿಮ್ಮ ಆತಿಥ್ಯ ಮತ್ತು ಆತ್ಮೀಯ ಸ್ವಾಗತದಿಂದ ನಾನು ವಿನಮ್ರನಾಗಿದ್ದೇನೆ” ಎಂದು ಪಿಣರಾಯಿ ವಿಜಯನ್ ಅರೇಬಿಕ್ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಕೇರಳ ರಾಜ್ಯವು ಯುಎಇ ಮತ್ತು ದುಬೈನೊಂದಿಗಿನ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ಬಯಸುತ್ತದೆ ಎಂದು ಕೂಡ ಸಿಎಂ ಪಿಣರಾಯಿ ವಿಜಯನ್ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಹಾವು ಹಿಡಿಯುತ್ತಿದ್ದಾಗ ವಾವಾ ಸುರೇಶ್​​ಗೆ ಕಚ್ಚಿದ ನಾಗರ; ಆಸ್ಪ್ರತೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದ ವೈದ್ಯರು

Viral News: 3 ವರ್ಷ ಸಿಗರೇಟ್ ಸೇದುವುದು ಬಿಟ್ಟಿದ್ದಕ್ಕೆ ಲಕ್ಷಾಧಿಪತಿಯಾದ; ಹೇಗೆ ಅಂತೀರಾ?

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ