AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು

ದೇಶದಲ್ಲಿ ಸದ್ಯದಲ್ಲಿರುವ ಕೊವಿಡ್​ 19 ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಪರೀಕ್ಷಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಏಪ್ರಿಲ್​ ಸೆಷನ್​​ನಲ್ಲಿ ನಡೆಯಬೇಕಿದ್ದ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್​ಟಿಎ ಹೇಳಿಕೆ ಬಿಡುಗಡೆ ಮಾಡಿದೆ.

JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 18, 2021 | 1:00 PM

Share

ದೆಹಲಿ: ದೇಶಾದ್ಯಂತ ಕೊರೊನ ಸೋಂಕು ಮತ್ತೆ ಮಿತಿಮೀರುತ್ತಿದ್ದು ಶಿಕ್ಷಣ ವ್ಯವಸ್ಥೆಯ ಮೇಲೆ ಪ್ರಭಾವ ಬೀರುತ್ತಿದೆ. ಮತ್ತೆ ಪರೀಕ್ಷೆಗಳು ಮುಂದೂಡಲ್ಪಡುತ್ತಿದ್ದು, ಇದೀಗ ಈ ಸಾಲಿಗೆ ಜಂಟಿ ಪ್ರವೇಶ ಮುಖ್ಯ ಪರೀಕ್ಷೆ (JEE) ಯೂ ಸೇರಿದೆ. ಏಪ್ರಿಲ್​ 27ರಿಂದ 30ರವರೆಗೆ ನಡೆಯಲಿದ್ದ JEE ಮುಖ್ಯ ಪರೀಕ್ಷೆ(2021)ಯನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಮುಂದೂಡಿದೆ. ಸದ್ಯಕ್ಕೇನೂ ಪರೀಕ್ಷೆಯ ಹೊಸ ದಿನಾಂಕವನ್ನು ಘೋಷಣೆ ಮಾಡಿಲ್ಲ.

ದೇಶದಲ್ಲಿ ಸದ್ಯದಲ್ಲಿರುವ ಕೊವಿಡ್​ 19 ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಪರೀಕ್ಷಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಏಪ್ರಿಲ್​ ಸೆಷನ್​​ನಲ್ಲಿ ನಡೆಯಬೇಕಿದ್ದ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್​ಟಿಎ ಹೇಳಿಕೆ ಬಿಡುಗಡೆ ಮಾಡಿದೆ. ಇನ್ನು ಪರೀಕ್ಷೆ ನಡೆಸುವ 15 ದಿನಗಳ ಮೊದಲು ದಿನಾಂಕ ಘೋಷಿಸಲಾಗುವುದು ಎಂದು ತಿಳಿಸಿದೆ.

ಇನ್ನು ಜೆಇಇ ಮುಖ್ಯಪರೀಕ್ಷೆಯ ಫೆಬ್ರವರಿ ಮತ್ತು ಮಾರ್ಚ್​ ಸೆಷನ್​ಗಳು ಮುಕ್ತಾಯಗೊಂಡಿದ್ದು, ಏಪ್ರಿಲ್​ದು 27ರಿಂದ ಪ್ರಾರಂಭವಾಗಲಿತ್ತು. ಆದರೆ ಅದನ್ನು ಮುಂದೂಡಬೇಕು. ಕೊರೊನಾ ಸಮಯದಲ್ಲಿ ಪರೀಕ್ಷೆ ಬರೆಯುವುದು ಸುರಕ್ಷಿತವಲ್ಲ ಎಂದು ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಕೂಡ ಬೇಡಿಕೆ ಮುಂದಿಟ್ಟಿದ್ದರು. ಈ ಬಗ್ಗೆ ಆಕ್ರೋಶವನ್ನೂ ಹೊರಹಾಕಿದ್ದರು. ಪರೀಕ್ಷೆ ಮುಂದೂಡಲ್ಪಟ್ಟಿದ್ದನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಕೂಡ ದೃಢಪಡಿಸಿದ್ದಾರೆ. ಸದ್ಯದ ಕೊವಿಡ್​-19 ಸ್ಥಿತಿಯಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡುವುದೇ ಒಳಿತು ಎಂದು ನಾನೂ ಸಹ ಎನ್​ಟಿಎಗೆ ಸಲಹೆ ನೀಡಿದ್ದೆ. ವಿದ್ಯಾರ್ಥಿಗಳ ಶಿಕ್ಷಣದೊಂದಿಗೆ ಅವರ ಸುರಕ್ಷತೆ ನನ್ನ ಮತ್ತು ಶಿಕ್ಷಣ ಸಚಿವಾಲಯದ ಮೊದಲ ಆದ್ಯತೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಎನ್​ಟಿಎ ವೆಬ್​ಸೈಟ್ www.nta.ac.in ಮತ್ತು https://jeemain.nta.nic.in/ ಕ್ಕೆ ಭೇಟಿ ಕೊಡಬಹುದು.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಕೊವಿಡ್ ಪ್ರಕರಣ ಏರಿಕೆ; ಸಾರ್ವಜನಿಕ ರ‍್ಯಾಲಿಗಳನ್ನು ರದ್ದು ಮಾಡಿದ ರಾಹುಲ್ ಗಾಂಧಿ

ಬೆಂಗಳೂರು ನಗರದಲ್ಲಿ ವಿಶೇಷ ಕಠಿಣ ಕ್ರಮ ಅನಿವಾರ್ಯ; ಆರೋಗ್ಯ ಸಚಿವ ಡಾ.ಸುಧಾಕರ್

ವೈದ್ಯರಾಗಿದ್ದರೂ ತಂದೆ-ತಾಯಿಯನ್ನು ಉಳಿಸಿಕೊಳ್ಳಲಾಗಲಿಲ್ಲ.. ಪೋಷಕರ ಕಳೆದುಕೊಂಡು ಕಣ್ಣೀರಿಟ್ಟ ವೈದ್ಯೆ

Published On - 12:56 pm, Sun, 18 April 21

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ