AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು

ದೇಶದಲ್ಲಿ ಸದ್ಯದಲ್ಲಿರುವ ಕೊವಿಡ್​ 19 ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಪರೀಕ್ಷಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಏಪ್ರಿಲ್​ ಸೆಷನ್​​ನಲ್ಲಿ ನಡೆಯಬೇಕಿದ್ದ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್​ಟಿಎ ಹೇಳಿಕೆ ಬಿಡುಗಡೆ ಮಾಡಿದೆ.

JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 18, 2021 | 1:00 PM

Share

ದೆಹಲಿ: ದೇಶಾದ್ಯಂತ ಕೊರೊನ ಸೋಂಕು ಮತ್ತೆ ಮಿತಿಮೀರುತ್ತಿದ್ದು ಶಿಕ್ಷಣ ವ್ಯವಸ್ಥೆಯ ಮೇಲೆ ಪ್ರಭಾವ ಬೀರುತ್ತಿದೆ. ಮತ್ತೆ ಪರೀಕ್ಷೆಗಳು ಮುಂದೂಡಲ್ಪಡುತ್ತಿದ್ದು, ಇದೀಗ ಈ ಸಾಲಿಗೆ ಜಂಟಿ ಪ್ರವೇಶ ಮುಖ್ಯ ಪರೀಕ್ಷೆ (JEE) ಯೂ ಸೇರಿದೆ. ಏಪ್ರಿಲ್​ 27ರಿಂದ 30ರವರೆಗೆ ನಡೆಯಲಿದ್ದ JEE ಮುಖ್ಯ ಪರೀಕ್ಷೆ(2021)ಯನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಮುಂದೂಡಿದೆ. ಸದ್ಯಕ್ಕೇನೂ ಪರೀಕ್ಷೆಯ ಹೊಸ ದಿನಾಂಕವನ್ನು ಘೋಷಣೆ ಮಾಡಿಲ್ಲ.

ದೇಶದಲ್ಲಿ ಸದ್ಯದಲ್ಲಿರುವ ಕೊವಿಡ್​ 19 ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಪರೀಕ್ಷಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಏಪ್ರಿಲ್​ ಸೆಷನ್​​ನಲ್ಲಿ ನಡೆಯಬೇಕಿದ್ದ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್​ಟಿಎ ಹೇಳಿಕೆ ಬಿಡುಗಡೆ ಮಾಡಿದೆ. ಇನ್ನು ಪರೀಕ್ಷೆ ನಡೆಸುವ 15 ದಿನಗಳ ಮೊದಲು ದಿನಾಂಕ ಘೋಷಿಸಲಾಗುವುದು ಎಂದು ತಿಳಿಸಿದೆ.

ಇನ್ನು ಜೆಇಇ ಮುಖ್ಯಪರೀಕ್ಷೆಯ ಫೆಬ್ರವರಿ ಮತ್ತು ಮಾರ್ಚ್​ ಸೆಷನ್​ಗಳು ಮುಕ್ತಾಯಗೊಂಡಿದ್ದು, ಏಪ್ರಿಲ್​ದು 27ರಿಂದ ಪ್ರಾರಂಭವಾಗಲಿತ್ತು. ಆದರೆ ಅದನ್ನು ಮುಂದೂಡಬೇಕು. ಕೊರೊನಾ ಸಮಯದಲ್ಲಿ ಪರೀಕ್ಷೆ ಬರೆಯುವುದು ಸುರಕ್ಷಿತವಲ್ಲ ಎಂದು ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಕೂಡ ಬೇಡಿಕೆ ಮುಂದಿಟ್ಟಿದ್ದರು. ಈ ಬಗ್ಗೆ ಆಕ್ರೋಶವನ್ನೂ ಹೊರಹಾಕಿದ್ದರು. ಪರೀಕ್ಷೆ ಮುಂದೂಡಲ್ಪಟ್ಟಿದ್ದನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಕೂಡ ದೃಢಪಡಿಸಿದ್ದಾರೆ. ಸದ್ಯದ ಕೊವಿಡ್​-19 ಸ್ಥಿತಿಯಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡುವುದೇ ಒಳಿತು ಎಂದು ನಾನೂ ಸಹ ಎನ್​ಟಿಎಗೆ ಸಲಹೆ ನೀಡಿದ್ದೆ. ವಿದ್ಯಾರ್ಥಿಗಳ ಶಿಕ್ಷಣದೊಂದಿಗೆ ಅವರ ಸುರಕ್ಷತೆ ನನ್ನ ಮತ್ತು ಶಿಕ್ಷಣ ಸಚಿವಾಲಯದ ಮೊದಲ ಆದ್ಯತೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಎನ್​ಟಿಎ ವೆಬ್​ಸೈಟ್ www.nta.ac.in ಮತ್ತು https://jeemain.nta.nic.in/ ಕ್ಕೆ ಭೇಟಿ ಕೊಡಬಹುದು.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಕೊವಿಡ್ ಪ್ರಕರಣ ಏರಿಕೆ; ಸಾರ್ವಜನಿಕ ರ‍್ಯಾಲಿಗಳನ್ನು ರದ್ದು ಮಾಡಿದ ರಾಹುಲ್ ಗಾಂಧಿ

ಬೆಂಗಳೂರು ನಗರದಲ್ಲಿ ವಿಶೇಷ ಕಠಿಣ ಕ್ರಮ ಅನಿವಾರ್ಯ; ಆರೋಗ್ಯ ಸಚಿವ ಡಾ.ಸುಧಾಕರ್

ವೈದ್ಯರಾಗಿದ್ದರೂ ತಂದೆ-ತಾಯಿಯನ್ನು ಉಳಿಸಿಕೊಳ್ಳಲಾಗಲಿಲ್ಲ.. ಪೋಷಕರ ಕಳೆದುಕೊಂಡು ಕಣ್ಣೀರಿಟ್ಟ ವೈದ್ಯೆ

Published On - 12:56 pm, Sun, 18 April 21

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ