AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು

ದೇಶದಲ್ಲಿ ಸದ್ಯದಲ್ಲಿರುವ ಕೊವಿಡ್​ 19 ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಪರೀಕ್ಷಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಏಪ್ರಿಲ್​ ಸೆಷನ್​​ನಲ್ಲಿ ನಡೆಯಬೇಕಿದ್ದ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್​ಟಿಎ ಹೇಳಿಕೆ ಬಿಡುಗಡೆ ಮಾಡಿದೆ.

JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 18, 2021 | 1:00 PM

Share

ದೆಹಲಿ: ದೇಶಾದ್ಯಂತ ಕೊರೊನ ಸೋಂಕು ಮತ್ತೆ ಮಿತಿಮೀರುತ್ತಿದ್ದು ಶಿಕ್ಷಣ ವ್ಯವಸ್ಥೆಯ ಮೇಲೆ ಪ್ರಭಾವ ಬೀರುತ್ತಿದೆ. ಮತ್ತೆ ಪರೀಕ್ಷೆಗಳು ಮುಂದೂಡಲ್ಪಡುತ್ತಿದ್ದು, ಇದೀಗ ಈ ಸಾಲಿಗೆ ಜಂಟಿ ಪ್ರವೇಶ ಮುಖ್ಯ ಪರೀಕ್ಷೆ (JEE) ಯೂ ಸೇರಿದೆ. ಏಪ್ರಿಲ್​ 27ರಿಂದ 30ರವರೆಗೆ ನಡೆಯಲಿದ್ದ JEE ಮುಖ್ಯ ಪರೀಕ್ಷೆ(2021)ಯನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಮುಂದೂಡಿದೆ. ಸದ್ಯಕ್ಕೇನೂ ಪರೀಕ್ಷೆಯ ಹೊಸ ದಿನಾಂಕವನ್ನು ಘೋಷಣೆ ಮಾಡಿಲ್ಲ.

ದೇಶದಲ್ಲಿ ಸದ್ಯದಲ್ಲಿರುವ ಕೊವಿಡ್​ 19 ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಪರೀಕ್ಷಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಏಪ್ರಿಲ್​ ಸೆಷನ್​​ನಲ್ಲಿ ನಡೆಯಬೇಕಿದ್ದ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್​ಟಿಎ ಹೇಳಿಕೆ ಬಿಡುಗಡೆ ಮಾಡಿದೆ. ಇನ್ನು ಪರೀಕ್ಷೆ ನಡೆಸುವ 15 ದಿನಗಳ ಮೊದಲು ದಿನಾಂಕ ಘೋಷಿಸಲಾಗುವುದು ಎಂದು ತಿಳಿಸಿದೆ.

ಇನ್ನು ಜೆಇಇ ಮುಖ್ಯಪರೀಕ್ಷೆಯ ಫೆಬ್ರವರಿ ಮತ್ತು ಮಾರ್ಚ್​ ಸೆಷನ್​ಗಳು ಮುಕ್ತಾಯಗೊಂಡಿದ್ದು, ಏಪ್ರಿಲ್​ದು 27ರಿಂದ ಪ್ರಾರಂಭವಾಗಲಿತ್ತು. ಆದರೆ ಅದನ್ನು ಮುಂದೂಡಬೇಕು. ಕೊರೊನಾ ಸಮಯದಲ್ಲಿ ಪರೀಕ್ಷೆ ಬರೆಯುವುದು ಸುರಕ್ಷಿತವಲ್ಲ ಎಂದು ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಕೂಡ ಬೇಡಿಕೆ ಮುಂದಿಟ್ಟಿದ್ದರು. ಈ ಬಗ್ಗೆ ಆಕ್ರೋಶವನ್ನೂ ಹೊರಹಾಕಿದ್ದರು. ಪರೀಕ್ಷೆ ಮುಂದೂಡಲ್ಪಟ್ಟಿದ್ದನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಕೂಡ ದೃಢಪಡಿಸಿದ್ದಾರೆ. ಸದ್ಯದ ಕೊವಿಡ್​-19 ಸ್ಥಿತಿಯಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡುವುದೇ ಒಳಿತು ಎಂದು ನಾನೂ ಸಹ ಎನ್​ಟಿಎಗೆ ಸಲಹೆ ನೀಡಿದ್ದೆ. ವಿದ್ಯಾರ್ಥಿಗಳ ಶಿಕ್ಷಣದೊಂದಿಗೆ ಅವರ ಸುರಕ್ಷತೆ ನನ್ನ ಮತ್ತು ಶಿಕ್ಷಣ ಸಚಿವಾಲಯದ ಮೊದಲ ಆದ್ಯತೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಎನ್​ಟಿಎ ವೆಬ್​ಸೈಟ್ www.nta.ac.in ಮತ್ತು https://jeemain.nta.nic.in/ ಕ್ಕೆ ಭೇಟಿ ಕೊಡಬಹುದು.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಕೊವಿಡ್ ಪ್ರಕರಣ ಏರಿಕೆ; ಸಾರ್ವಜನಿಕ ರ‍್ಯಾಲಿಗಳನ್ನು ರದ್ದು ಮಾಡಿದ ರಾಹುಲ್ ಗಾಂಧಿ

ಬೆಂಗಳೂರು ನಗರದಲ್ಲಿ ವಿಶೇಷ ಕಠಿಣ ಕ್ರಮ ಅನಿವಾರ್ಯ; ಆರೋಗ್ಯ ಸಚಿವ ಡಾ.ಸುಧಾಕರ್

ವೈದ್ಯರಾಗಿದ್ದರೂ ತಂದೆ-ತಾಯಿಯನ್ನು ಉಳಿಸಿಕೊಳ್ಳಲಾಗಲಿಲ್ಲ.. ಪೋಷಕರ ಕಳೆದುಕೊಂಡು ಕಣ್ಣೀರಿಟ್ಟ ವೈದ್ಯೆ

Published On - 12:56 pm, Sun, 18 April 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?