AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಒಗ್ಗಟ್ಟಾಗಿರಲು ಗಾಂಧಿ ಕುಟುಂಬ ಮುಖ್ಯ, ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕು: ಅಶೋಕ್ ಗೆಹ್ಲೋಟ್

ಪ್ರತಿಸ್ಪರ್ಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, "ಧ್ರುವೀಕರಣದ ರಾಜಕೀಯ ಸುಲಭವಾಗಿದೆ. ಬಿಜೆಪಿಯು ಕಾಂಗ್ರೆಸ್ ಅನ್ನು ಮುಸ್ಲಿಮರ ಪಕ್ಷ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದೆ. ದೇಶದ ಸಮಗ್ರತೆ ಮತ್ತು ಏಕತೆಯನ್ನು ಕಾಪಾಡುವುದು ನಮ್ಮ ಮಾರ್ಗವಾಗಿದೆ

ಕಾಂಗ್ರೆಸ್ ಒಗ್ಗಟ್ಟಾಗಿರಲು ಗಾಂಧಿ ಕುಟುಂಬ ಮುಖ್ಯ, ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕು: ಅಶೋಕ್ ಗೆಹ್ಲೋಟ್
ರಾಹುಲ್ ಗಾಂಧಿ-ಅಶೋಕ್ ಗೆಹ್ಲೋಟ್
TV9 Web
| Edited By: |

Updated on:Mar 13, 2022 | 4:34 PM

Share

ದೆಹಲಿ: ಭಾನುವಾರ ನಡೆದ ಕಾಂಗ್ರೆಸ್‌ನ (Congress) ಉನ್ನತ ಮಟ್ಟದ  ಸಭೆಗೆ ಮುಂಚಿತವಾಗಿ ರಾಜಸ್ಥಾನ ಮುಖ್ಯಮಂತ್ರಿ ಮತ್ತು ಪಕ್ಷದ ಉನ್ನತ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ (Ashok Gehlot) ಅವರು “ಆಂತರಿಕ ಸಂಘರ್ಷದಿಂದಾಗಿ” ಪಕ್ಷವು ಪಂಜಾಬ್ ಅನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.  ಅದೇ ವೇಳೆ ಪಕ್ಷದ ಒಗ್ಗಟ್ಟಿಗೆ ಗಾಂಧಿ ಕುಟುಂಬ ಮುಖ್ಯ ಎಂದು ಒತ್ತಿ ಹೇಳಿದರು. ರಾಹುಲ್ ಗಾಂಧಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಬೇಕು ಎಂದ ಅವರು 2017 ರಲ್ಲಿ ಕಾಂಗ್ರೆಸ್ ಒಟ್ಟಾಗಿದ್ದು ನಾವು ಪಂಜಾಬ್ ಚುನಾವಣೆ ಗೆದ್ದಿದ್ದೇವೆ. ಚರಣ್​​ಜಿತ್ ಸಿಂಗ್ ಚನ್ನಿ ಮುಖ್ಯಮಂತ್ರಿಯಾದ ನಂತರ, ಪರಿಸ್ಥಿತಿಯೂ  ಅನುಕೂಲಕರವಾಗಿತ್ತು. ಆದರೆ ಆಂತರಿಕ ಸಂಘರ್ಷದಿಂದ ನಾವು ಪಂಜಾಬ್ ನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದು ನಮ್ಮ ತಪ್ಪು ಎಂದು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು. ಸುಮಾರು ಮೂರು ದಶಕಗಳಿಂದ ಗಾಂಧಿ ಕುಟುಂಬದಿಂದ ಯಾರೂ ಪ್ರಧಾನಿಯಾಗಲಿ, ಮಂತ್ರಿಯಾಗಲಿ ಆಗಿಲ್ಲ. ಕಾಂಗ್ರೆಸ್‌ನ ಏಕತೆಗೆ ಗಾಂಧಿ ಕುಟುಂಬ ಮುಖ್ಯವಾಗಿದೆ ಎಂದು ಅರ್ಥಮಾಡಿಕೊಳ್ಳಬೇಕಿದೆ ಎಂದು 70 ವರ್ಷದ ನಾಯಕ ಗೆಹ್ಲೋಟ್ ಹೇಳಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಧ್ರುವೀಕರಣದ ರಾಜಕೀಯ ಸುಲಭವಾಗಿದೆ. ಬಿಜೆಪಿಯು ಕಾಂಗ್ರೆಸ್ ಅನ್ನು ಮುಸ್ಲಿಮರ ಪಕ್ಷ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದೆ. ದೇಶದ ಸಮಗ್ರತೆ ಮತ್ತು ಏಕತೆಯನ್ನು ಕಾಪಾಡುವುದು ನಮ್ಮ ಮಾರ್ಗವಾಗಿದೆ. ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಧರ್ಮವು  ಮುಖ್ಯ ವಿಷಯವಾಗುತ್ತದೆ,  ಹಣದುಬ್ಬರ ಮತ್ತು ಉದ್ಯೋಗಗಳ ಸಮಸ್ಯೆಗಳು ನಂತರದ್ದಾಗಿರುತ್ತವೆ ಎಂದಿದ್ದಾರೆ ಗೆಹ್ಲೋಟ್.

ಐದು ರಾಜ್ಯಗಳಲ್ಲಿನ ಭಾರೀ ಸೋಲು ಗಾಂಧಿ ಕುಟುಂಬದ ವಿರುದ್ಧದ ಟೀಕೆಗಳನ್ನು ಹೆಚ್ಚಿಸಿದ್ದು, ಸಂಪೂರ್ಣ ಕೂಲಂಕಷ ಮತ್ತು ನಾಯಕತ್ವ ಬದಲಾವಣೆಯ ಬೇಡಿಕೆಗಳನ್ನು ಪುನರುಜ್ಜೀವನಗೊಳಿಸಿದೆ.

ಇಂದಿನ ಸಿಡಬ್ಲ್ಯುಸಿ ಸಭೆಯಲ್ಲಿ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿದ್ದ ಹೊಸ ಪಕ್ಷದ ಮುಖ್ಯಸ್ಥರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಸಾಂಸ್ಥಿಕ ಚುನಾವಣೆಗಳು ಈಗ ಎರಡು ಮೂರು ತಿಂಗಳುಗಳ ಕಾಲ ಮುಂದುವರಿಯಬಹುದು ಎಂದು ಮೂಲಗಳು ಹೇಳುತ್ತವೆ.

ಈ ಸಭೆಯಲ್ಲಿ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ರಾಜೀನಾಮೆ ನೀಡುತ್ತಾರೆ ಎಂಬುದನ್ನು ಕಾಂಗ್ರೆಸ್ ಸ್ಪಷ್ಟವಾಗಿ ನಿರಾಕರಿಸಿದೆ. ಸಭೆಯ ಮೊದಲು, ಜಾರ್ಖಂಡ್ ಕಾಂಗ್ರೆಸ್ ಸೋನಿಯಾ ಮತ್ತು ರಾಹುಲ್ ಗಾಂಧಿಯನ್ನು ಬೆಂಬಲಿಸುವ ನಿರ್ಣಯವನ್ನು ಅಂಗೀಕರಿಸಿತು.

ರಾಹುಲ್  ಅಧ್ಯಕ್ಷರಾಗಲಿ: ಡಿಕೆ ಶಿವಕುಮಾರ್

ನಾನು ಮೊದಲೇ ಹೇಳಿದಂತೆ  ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ತಕ್ಷಣವೇ ಪೂರ್ಣಾವಧಿಯ ಪಾತ್ರದಲ್ಲಿ ತೆಗೆದುಕೊಳ್ಳಬೇಕು. ಇದು ನನ್ನಂತಹ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರ ಆಶಯ  ಎಂದು ಡಿಕೆ ಶಿವಕುಮಾರ್  ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮುಕುಲ್​ ವಾಸ್ನಿಕ್​​ರನ್ನು ಕಾಂಗ್ರೆಸ್​​ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಜಿ 23 ನಾಯಕರ ಒತ್ತಾಯ; ಆದರೆ ಆಗಿದ್ದೇನು?

Published On - 4:04 pm, Sun, 13 March 22

Follow Us
Web contact
Web contact

TV9 Kannada

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!