AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ; 6 ಕೊವಿಡ್ ರೋಗಿಗಳು ಸಾವು

Madhya Pradesh: ವೈದ್ಯಕೀಯ ಕಾಲೇಜಿನ ಕೊವಿಡ್ ತುರ್ತು ನಿಗಾ ಘಟಕ (ICU) ವಾರ್ಡ್ ನಲ್ಲಿ 62 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಇದರಲ್ಲಿ 6 ರೋಗಿಗಳಿಗೆ ಲಿಕ್ವಿಡ್ ಆಕ್ಸಿಜನ್ ಸಿಗದ ಕಾರಣ ಸಾವಿಗೀಡಾಗಿದ್ದಾರೆ.ಚಿಂತಾಜನಕ ಪರಿಸ್ಥಿತಿಯಲ್ಲಿದ್ದ ಇತರ ರೋಗಿಗಳು ಸುರಕ್ಷಿತರಾಗಿದ್ದಾರೆ ಎಂದು ಅಲ್ಲಿನ ಡೀನ್ ಡಾ.ಮಿಲಿಂದ್ ಶಿರಾಲ್ಕರ್ ಹೇಳಿದ್ದಾರೆ.

ಮಧ್ಯಪ್ರದೇಶದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ; 6 ಕೊವಿಡ್ ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 18, 2021 | 2:43 PM

Share

ಭೋಪಾಲ್: ಮಧ್ಯಪ್ರದೇಶದ ಶಾಹಡೊಲ್​ನಲ್ಲಿರುವ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯಿಂದ ಆರು ಕೊವಿಡ್ ರೋಗಿಗಳು ಸಾವಿಗೀಡಾಗಿದ್ದಾರೆ. ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ, ಭಾನುವಾರ ಮುಂಜಾನೆ ವೇಳೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ವೈದ್ಯಕೀಯ ಕಾಲೇಜಿನ ಕೊವಿಡ್ ತುರ್ತು ನಿಗಾ ಘಟಕ (ICU) ವಾರ್ಡ್ ನಲ್ಲಿ 62 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಇದರಲ್ಲಿ 6 ರೋಗಿಗಳಿಗೆ ಲಿಕ್ವಿಡ್ ಆಕ್ಸಿಜನ್ ಸಿಗದ ಕಾರಣ ಸಾವಿಗೀಡಾಗಿದ್ದಾರೆ.ಚಿಂತಾಜನಕ ಪರಿಸ್ಥಿತಿಯಲ್ಲಿದ್ದ ಇತರ ರೋಗಿಗಳು ಸುರಕ್ಷಿತರಾಗಿದ್ದಾರೆ ಎಂದು ಅಲ್ಲಿನ ಡೀನ್ ಡಾ.ಮಿಲಿಂದ್ ಶಿರಾಲ್ಕರ್ ಹೇಳಿದ್ದಾರೆ. ಈ ಬಗ್ಗೆ ತನಿಖೆಗಾಗಿ ತಜ್ಞರನ್ನು ಕರೆದಿದ್ದು, ಸಾವಿನ ಕಾರಣ ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಶನಿವಾರ ಸಂಜೆ ಆಸ್ಪತ್ರೆಯಲ್ಲಿ ಲಿಕ್ವಿಡ್ ಆಕ್ಸಿಜನ್ ಕೊರತೆ ಕಂಡು ಬಂದಿತ್ತು. ತಕ್ಷಣವೇ ಆಕ್ಸಿಜನ್ ಸರಬರಾಜು ಮಾಡುವವರನ್ನು ಸಂಪರ್ಕಿಸಿದ್ದೆವು. ಆದರೆ ವಾಹನ ತಡರಾತ್ರಿಯಾದರೂ ತಲುಪಲಿಲ್ಲ. ಹಾಗಾಗಿ ರೋಗಿಗಳಿಗೆ ನೀಡುವ ಆಕ್ಸಿಜನ್ ಪ್ರಮಾಣವೂ ಕಡಿಮೆ ಆಯತು ಎಂದು ಶಿರಾಲ್ಕರ್ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಇಲ್ಲಿ ಆಮ್ಲಜನಕದ ಪೂರೈಕೆ ಕೊರತೆ ಇತ್ತು. ಆಸ್ಪತ್ರೆಯ ಆವರಣದಲ್ಲಿರುವ ಆಮ್ಲಜನಕ ಘಟಕದಲ್ಲಿ ಪ್ರತಿದಿನ 10 ಕೆಜಿ ಲೀಟರ್ ಸಂಗ್ರಹ ಸಾಮರ್ಥ್ಯವಿದ್ದು, ಲಿಕ್ವಿಡ್ ಆಕ್ಸಿಜನ್​ನ್ನು ಇತರ ರಾಜ್ಯಗಳಿಂದ ತರುತ್ತಿದ್ದೇವೆ. ಆಸ್ಪತ್ರೆಯಲ್ಲಿ 62 ಐಸಿಯು ಬೆಡ್ ಗಳಿದ್ದು ಗಂಭೀರ ಪರಿಸ್ಥಿತಿಯಲ್ಲಿರುವ ಕೊವಿಡ್ ರೋಗಿಗಳನ್ನು ಇಲ್ಲಿ ದಾಖಲಿಸಲಾಗುತ್ತದೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದಾಗ್ಯೂ, ರಾಜ್ಯದಲ್ಲಿ ಎಷ್ಟು ಕಾಲ ಜನರು ಆಕ್ಸಿಜನ್ ಸಿಗದೆ ಸಾಯುತ್ತಿರಬೇಕು ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಕಮಲ್​ ನಾಥ್ ಅವರು ಪ್ರಶ್ನಿಸಿದ್ದಾರೆ.

ಶಾಹಡೊಲ್ನಲ್ಲಿ ಆಮ್ಲಜನಕದ ಕೊರತೆಯಂದ ಜನರು ಸತ್ತಿದ್ದಾರೆ ಎಂಬ ದುಃಖದ ಸುದ್ದಿಯೊಂದು ಕೇಳಿ ಬಂತು. ಭೋಪಾಲ್, ಇಂದೋರ್, ಉಜ್ಜೈನ್, ಸಾಗರ್, ಜಬಲ್ ಪುರ್, ಖಾಂದ್ವಾ, ಖರಗೋನ್​ನಲ್ಲಿ ಆಮ್ಲಜನಕದ ಕೊರತೆಯಿಂದ ಜನರು ಸಾವಿಗೀಡಾದ ನಂತರವೂ ಸರ್ಕಾರ ಯಾಕೆ ಎಚ್ಚೆತ್ತುಗೊಂಡಿಲ್ಲ? ಎಷ್ಟು ಕಾಲ ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಂದ ಜನರು ಸಾಯುತ್ತಿರಬೇಕು ಎಂದು ಕಮಲ್ ನಾಥ್ ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ ಪರಿಸ್ಥಿತಿ ಭಯಾನಕ ಎಂದು ಹೇಳಿದ ಕಮಲ್ ನಾಥ್, ಕೊರೊನಾವೈರಸ್ ಚಿಕಿತ್ಸೆಗೆ ಬಳಸುವ ರೆಮ್‌ಡಿಸಿವಿರ್ ಇಂಜೆಕ್ಷನ್ ಕೊರತೆ ಇದೆ. ವೈರಸ್ ನಿಯಂತ್ರಣ ಲಸಿಕೆ ಮತ್ತು ಆಮ್ಲಜನಕ ಸರ್ಕಾರದ ಕಡತಗಳಲ್ಲಿ ಮಾತ್ರ ಇದೆ, ವಾಸ್ತವದಲ್ಲಿ ಇಲ್ಲ ಎಂದಿದ್ದಾರೆ. ಶಾಹಡೊಲ್ ಪ್ರಕರಣ ಬಗ್ಗೆ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್ ಪ್ರಕಾರ ಶನಿವಾರ ಶಾಹಡೊಲ್​ನಲ್ಲಿ 142 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು ಪ್ರಕರಣಗಳ ಸಂಖ್ಯೆ 4,528ಕ್ಕೇರಿದೆ. ಶನಿವಾರದವರೆಗೆ ಪ್ರಸ್ತುತ ಜಿಲ್ಲೆಯಲ್ಲಿ 38 ರೋಗಿಗಳು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವೈದ್ಯಕೀಯ ಆಮ್ಲಜನಕ ವ್ಯರ್ಥ ಮಾಡಬೇಡಿ: ರಾಜ್ಯ ಸರ್ಕಾರಗಳಿಗೆ ಕೇಂದ್ರದ ಸೂಚನೆ

ಆಮ್ಲಜನಕ ಕೊರತೆ ಆರೋಪ; ಕೊರೊನಾ ಸೋಂಕಿತ 7 ಜನರ ಸಾವು, ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

(Due to low pressure in medical oxygen six Covid19 Patients died in the ICU of Government Hospital in Madhya Pradesh Shahdol)

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು