AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ: PF ಖಾತೆಯಿಂದ 30 ಸಾವಿರ ಕೋಟಿ ರೂ. ಹಿಂಪಡೆದ 80 ಲಕ್ಷ ನೌಕರರು!

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಕ್ರೂರತೆ ದಿನೇ ದಿನೆ ಏರುತ್ತಲೇ ಇದ್ದು ಸಂಕಷ್ಟದ ಸ್ಥಿತಿ ಎದುರಾಗಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಇದರಿಂದಾಗಿ ಸಾವಿರಾರು ಕಂಪನಿಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿವೆ. ಹೀಗಾಗಿ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಜೊತೆಗೆ, ಸಾಕಷ್ಟು ನಷ್ಟದಲ್ಲಿರುವ ಕೆಲವು ಕಂಪನಿಗಳು ತಮ್ಮ ಕೆಲಸಗಾರರಿಗೆ ಅರ್ಧ ವೇತನ ನೀಡುತ್ತಿವೆ. ಇದರಿಂದಾಗಿ ಕಾರ್ಮಿಕರು ತಮ್ಮ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಹಿಂಪಡೆಯಲು ಮುಂದಾಗಿದ್ದು ಇದರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. […]

ಕೊರೊನಾ ಸಂಕಷ್ಟ: PF ಖಾತೆಯಿಂದ 30 ಸಾವಿರ ಕೋಟಿ ರೂ. ಹಿಂಪಡೆದ 80 ಲಕ್ಷ ನೌಕರರು!
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್​ಒ)
ಸಾಧು ಶ್ರೀನಾಥ್​
| Edited By: |

Updated on:Jul 29, 2020 | 1:47 PM

Share

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಕ್ರೂರತೆ ದಿನೇ ದಿನೆ ಏರುತ್ತಲೇ ಇದ್ದು ಸಂಕಷ್ಟದ ಸ್ಥಿತಿ ಎದುರಾಗಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಇದರಿಂದಾಗಿ ಸಾವಿರಾರು ಕಂಪನಿಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿವೆ.

ಹೀಗಾಗಿ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಜೊತೆಗೆ, ಸಾಕಷ್ಟು ನಷ್ಟದಲ್ಲಿರುವ ಕೆಲವು ಕಂಪನಿಗಳು ತಮ್ಮ ಕೆಲಸಗಾರರಿಗೆ ಅರ್ಧ ವೇತನ ನೀಡುತ್ತಿವೆ. ಇದರಿಂದಾಗಿ ಕಾರ್ಮಿಕರು ತಮ್ಮ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಹಿಂಪಡೆಯಲು ಮುಂದಾಗಿದ್ದು ಇದರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.

ದೇಶದಲ್ಲಿ 6 ಕೋಟಿ ನೌಕರರ PF ಖಾತೆ ಇದ್ದು, ಅದರಲ್ಲಿ ಏಪ್ರಿಲ್​ನಿಂದ ಜುಲೈವರೆಗೂ ಸುಮಾರು 80 ಲಕ್ಷ ಉದ್ಯೋಗಿಗಳು ತಾವು ಕೂಡಿಟ್ಟಿದ್ದ ಸುಮಾರು 30 ಸಾವಿರ ಕೋಟಿ ಹಣವನ್ನು ಹಿಂತೆಗೆದುಕೊಂಡಿದ್ದಾರೆ.

ಕೊರೊನಾ ಸೋಂಕಿನ ಕಾರಣ ನೀಡಿ 30 ಲಕ್ಷ ಉದ್ಯೋಗಿಗಳು 8,000 ಕೋಟಿ ಹಣವನ್ನು ಭವಿಷ್ಯ ನಿಧಿಯಿಂದ ಹಿಂಪಡೆದಿದ್ದರೆ, ವೈದ್ಯಕೀಯ ಕಾರಣ ನೀಡಿ 50 ಲಕ್ಷ ಉದ್ಯೋಗಿಗಳು 22,000 ಕೋಟಿ ಹಣವನ್ನು ಹಿಂತೆಗೆದಿದ್ದಾರೆ ಎಂದು ವರದಿಯಾಗಿದೆ.

Published On - 2:38 pm, Tue, 28 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More