AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ದೇಶದಲ್ಲಿ ತೀವ್ರ ಗತಿಯಲ್ಲಿ ಕೊವಿಡ್ ಹೆಚ್ಚಳ; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ

Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ.

PM Modi: ದೇಶದಲ್ಲಿ ತೀವ್ರ ಗತಿಯಲ್ಲಿ ಕೊವಿಡ್ ಹೆಚ್ಚಳ; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Jan 07, 2022 | 10:06 AM

Share

ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸುವ ಸಾಧ್ಯತೆಯಿದೆ. ದೇಶದಲ್ಲಿ ಕೋವಿಡ್ -19 ಪರಿಸ್ಥಿತಿ ಬಿಗಡಾಯಿಸುತ್ತಿರುವುದು ಮತ್ತು ಅದನ್ನು ಸಾಮೂಹಿಕವಾಗಿ ಎದುರಿಸುವುದು ಹೇಗೆ ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸೋಂಕಿತ ವ್ಯಕ್ತಿಗಳಿಂದ ಇತರರಿಗೆ ಸೋಂಕು ಹರಡವುದನ್ನು ತಪ್ಪಿಸಲು ಪರೀಕ್ಷೆಗಳನ್ನು ಹೆಚ್ಚಿಸುವಂತೆ ಕೇಂದ್ರವು ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದ ಬೆನ್ನಲ್ಲೇ ಸಭೆ ನಡೆಸುವ ತೀರ್ಮಾನ ಕೈಗೊಂಡಿರುವುದು ಪ್ರಾಮುಖ್ಯತೆ ಪಡೆದಿದೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಖಚಿತಪಡಿಸಿದ್ದಾರೆ.

ಬಂಗಾಳದಲ್ಲಿ ಕೊವಿಡ್ ಹೆಚ್ಚಳ; ಪ್ರಧಾನಿ ಜತೆ ಸಭೆಯಲ್ಲಿ ಭಾಗವಹಿಸಲಿರುವ ಮಮತಾ ಬ್ಯಾನರ್ಜಿ: ಏತನ್ಮಧ್ಯೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆತಂಕಕಾರಿ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿಯವರೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ್ದಾರೆ. ಬಂಗಾಳದಲ್ಲಿ ಜನವರಿ 5 ರಂದು 24 ಗಂಟೆಗಳಲ್ಲಿ 14,000 ಹೊಸ ಪ್ರಕರಣಗಳು ದಾಖಲಾಗಿವೆ. ನಿನ್ನೆ ಹೌರಾ ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ, ‘‘ರಾಜ್ಯದಲ್ಲಿ ದೈನಂದಿನ ಕೋವಿಡ್ -19 ಪ್ರಕರಣಗಳ ಸಂಖ್ಯೆ 14,022 ಕ್ಕೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 33,042 ಕ್ಕೆ ಏರಿದೆ. ನಾನು ನಾಳೆ (ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವರ್ಚುವಲ್ ಸಭೆಯಲ್ಲಿ ಭಾಗವಹಿಸುತ್ತೇನೆ’’ ಎಂದಿದ್ದಾರೆ.

ಪಶ್ಚಿಮ ಬಂಗಾಳದ ಕೋವಿಡ್ -19 ಪರಿಸ್ಥಿತಿಯ ಬಗ್ಗೆ ವಿವರಗಳನ್ನು ನೀಡಿದ ಮಮತಾ, ಅಂತರರಾಜ್ಯ ಗಡಿ ಪ್ರದೇಶದ ಪ್ರಯಾಣಕ್ಕೆ ಕಡ್ಡಾಯ ಆರ್‌ಟಿ-ಪಿಸಿಆರ್ ಪರೀಕ್ಷೆಯೊಂದಿಗೆ ನಿರ್ಬಂಧಗಳನ್ನು ಹೆಚ್ಚಿಸುವಂತೆ ಅವರು ತಿಳಿಸಿದ್ದಾರೆ. ‘‘ಒಟ್ಟು 2,075 ಕೋವಿಡ್-19 ರೋಗಿಗಳು ಬಂಗಾಳದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು 403 ಪ್ರದೇಶಗಳು ಕಂಟೈನ್‌ಮೆಂಟ್ ವಲಯಗಳಾಗಿವೆ. ಪಾಸಿಟಿವಿಟಿ ಪ್ರಮಾಣವು 23.17 ಶೇಕಡಾ, ಸಾವಿನ ಪ್ರಮಾಣ ಶೇಕಡಾ 1.18 ಇದೆ. ರಾಜ್ಯದಲ್ಲಿ ಸುಮಾರು 19,517 ಹಾಸಿಗೆಗಳು ಲಭ್ಯವಿದೆ. ಅಂತರರಾಜ್ಯ ಗಡಿಗೆ ಆರ್‌ಟಿ-ಪಿಸಿಆರ್ ಕಡ್ಡಾಯವಾಗಿದೆ.’’ ಎಂದು ಅವರು ಹೇಳಿದ್ದರು. ಇದಲ್ಲದೆ, ಮುಂದಿನ 15 ದಿನಗಳು ಪ್ರಮುಖವಾಗಿವೆ ಮತ್ತು ರಾಜ್ಯ ಸರ್ಕಾರವು ಕೋವಿಡ್ -19 ನಿರ್ಬಂಧಗಳನ್ನು ಹೆಚ್ಚಿಸಲಿದೆ ಎಂದು ಮುಖ್ಯಮಂತ್ರಿ ಮಮತಾ ಹೇಳಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿವೆ ಕೊವಿಡ್ ಪ್ರಕರಣಗಳು; 10,000 ಗಡಿ ದಾಟಿದ ಎಂಟೇ ದಿನಕ್ಕೆ 1 ಲಕ್ಷ ಗಡಿ ದಾಟಿದ ಸೋಂಕು: ಭಾರತದಲ್ಲಿ ಕೊವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. 10,000 ಗಡಿ ದಾಟಿದ ಎಂಟೇ ದಿನಕ್ಕೆ ದೈನಂದಿನ ಸೋಂಕಿನ ಪ್ರಮಾಣ 1 ಲಕ್ಷಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೊನೆಯ ಬಾರಿಗೆ 1 ಲಕ್ಷಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು ಜೂನ್ 6ರಂದು. ಬರೋಬ್ಬರಿ 214 ದಿನಗಳ ನಂತರ ಭಾರತದಲ್ಲಿ ದೈನಂದಿನನ 1 ಲಕ್ಷಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3.5 ಲಕ್ಷಕ್ಕೆ ಏರಿದೆ. ಗುರುವಾರ, ಮಹಾರಾಷ್ಟ್ರದಲ್ಲಿ 36,265 ಪ್ರಕರಣಗಳು ವರದಿಯಾಗಿವೆ. ಪಶ್ಚಿಮ ಬಂಗಾಳ ಸೇರಿದಂತೆ ವಿವಿದೆಡೆ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

PM Modi: ₹ 530 ಕೋಟಿ ವೆಚ್ಚದಲ್ಲಿ ನಿರ್ಮಿತವಾದ ಕೋಲ್ಕತ್ತಾದ ಸಿಎನ್​ಸಿಐ 2ನೇ ಕ್ಯಾಂಪಸ್ಅನ್ನು ಇಂದು​ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿ ಹೆಚ್ಚಳ; ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಓರ್ವ ಅಭ್ಯರ್ಥಿ ಎಷ್ಟು ಖರ್ಚು ಮಾಡಬಹುದು?

Published On - 9:57 am, Fri, 7 January 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ