AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಪಾಸ್‌ ರಸ್ತೆಯಲ್ಲಿ ಭಸ್ಮಗೊಂಡ ಐಷಾರಾಮಿ ಖಾಸಗಿ ಟ್ರಾವೆಲ್ಸ್‌ ಬಸ್‌, ಒಬ್ಬರ ಸಜೀವ ದಹನ

Bus Fire Accident: ನಲ್ಗೊಂಡ ಮರಿಗೂಡ ಬೈಪಾಸ್ ರಸ್ತೆ ಬಳಿ ಶಾರ್ಟ್​​ ಸರ್ಕ್ಯೂಟ್‌ನಿಂದ ಶ್ರೀ ಕೃಷ್ಣ ಖಾಸಗಿ ಟ್ರಾವೆಲ್ಸ್ ಬಸ್‌ಗೆ ಬೆಂಕಿ ಹೊತ್ತಿಕೊಂಡು ಭಸ್ಮಗೊಂಡಿದೆ.

ಬೈಪಾಸ್‌ ರಸ್ತೆಯಲ್ಲಿ ಭಸ್ಮಗೊಂಡ ಐಷಾರಾಮಿ ಖಾಸಗಿ ಟ್ರಾವೆಲ್ಸ್‌ ಬಸ್‌,  ಒಬ್ಬರ ಸಜೀವ ದಹನ
ಭಸ್ಮಗೊಂಡ ಐಷಾರಾಮಿ ಖಾಸಗಿ ಟ್ರಾವೆಲ್ಸ್‌ ಬಸ್‌.
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 04, 2023 | 10:01 AM

Share

ನಲ್ಲಗೊಂಡ-ಮರಿಗೂಡ (Nalgonda) ಬೈಪಾಸ್ ರಸ್ತೆ ಬಳಿ ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಐಷಾರಾಮಿ ಬಸ್ ಭಸ್ಮಗೊಂಡಿದೆ. ಶಾಕ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಬೆಂಕಿಗೆ ಆಹುತಿಯಾದ ಬಸ್ (Bus Short Circuit) ಶ್ರೀ ಕೃಷ್ಣ ಟ್ರಾವೆಲ್ಸ್ ಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ವಸ್ತುಗಳು, ಪ್ರಮುಖ ದಾಖಲೆಗಳು ಸುಟ್ಟು ಕರಕಲಾಗಿದ್ದು, ಒಬ್ಬ ಪ್ರಯಾಣಿಕರು (Passenger) ಪ್ರಾಣ ಕಳೆದುಕೊಂಡಿದ್ದಾರೆ. ಅವಘಡ ಸಂಭವಿಸಿದರೂ ಟ್ರಾವೆಲ್ ಮಾಲೀಕರು ಪ್ರಯಾಣಿಕರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಬಸ್ಸಿನಲ್ಲಿದ್ದವರು ಹೇಳಿದ್ದಾರೆ.

ಸಹಾಯಕ್ಕಾಗಿ ಮೂರು ಗಂಟೆಗಳ ಕಾಲ ರಸ್ತೆಯಲ್ಲಿ ಪ್ರಯಾಣಿಕರು ಪರದಾಡಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ 40 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಹೈದರಾಬಾದ್‌ನಿಂದ ಚಿರಾಲಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸಜೀವವಾಗಿ ದಹನವಾಗಿದ್ದಾರೆ.

ಮತ್ತಷ್ಟು ಓದಿ: ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಆಕಸ್ಮಿಕ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಅಪಘಾತ ಸಂಭವಿಸಿದೆಯೇ ಅಥವಾ ಚಾಲಕ ಮತ್ತು ಟ್ರಾವೆಲ್ಸ್​​ ಮಾಲೀಕರ ತಪ್ಪೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ