ಬೈಪಾಸ್‌ ರಸ್ತೆಯಲ್ಲಿ ಭಸ್ಮಗೊಂಡ ಐಷಾರಾಮಿ ಖಾಸಗಿ ಟ್ರಾವೆಲ್ಸ್‌ ಬಸ್‌, ಒಬ್ಬರ ಸಜೀವ ದಹನ

Bus Fire Accident: ನಲ್ಗೊಂಡ ಮರಿಗೂಡ ಬೈಪಾಸ್ ರಸ್ತೆ ಬಳಿ ಶಾರ್ಟ್​​ ಸರ್ಕ್ಯೂಟ್‌ನಿಂದ ಶ್ರೀ ಕೃಷ್ಣ ಖಾಸಗಿ ಟ್ರಾವೆಲ್ಸ್ ಬಸ್‌ಗೆ ಬೆಂಕಿ ಹೊತ್ತಿಕೊಂಡು ಭಸ್ಮಗೊಂಡಿದೆ.

ಬೈಪಾಸ್‌ ರಸ್ತೆಯಲ್ಲಿ ಭಸ್ಮಗೊಂಡ ಐಷಾರಾಮಿ ಖಾಸಗಿ ಟ್ರಾವೆಲ್ಸ್‌ ಬಸ್‌,  ಒಬ್ಬರ ಸಜೀವ ದಹನ
ಭಸ್ಮಗೊಂಡ ಐಷಾರಾಮಿ ಖಾಸಗಿ ಟ್ರಾವೆಲ್ಸ್‌ ಬಸ್‌.
ಸಾಧು ಶ್ರೀನಾಥ್​

Updated on: Dec 04, 2023 | 10:01 AM

ನಲ್ಲಗೊಂಡ-ಮರಿಗೂಡ (Nalgonda) ಬೈಪಾಸ್ ರಸ್ತೆ ಬಳಿ ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಐಷಾರಾಮಿ ಬಸ್ ಭಸ್ಮಗೊಂಡಿದೆ. ಶಾಕ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಬೆಂಕಿಗೆ ಆಹುತಿಯಾದ ಬಸ್ (Bus Short Circuit) ಶ್ರೀ ಕೃಷ್ಣ ಟ್ರಾವೆಲ್ಸ್ ಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ವಸ್ತುಗಳು, ಪ್ರಮುಖ ದಾಖಲೆಗಳು ಸುಟ್ಟು ಕರಕಲಾಗಿದ್ದು, ಒಬ್ಬ ಪ್ರಯಾಣಿಕರು (Passenger) ಪ್ರಾಣ ಕಳೆದುಕೊಂಡಿದ್ದಾರೆ. ಅವಘಡ ಸಂಭವಿಸಿದರೂ ಟ್ರಾವೆಲ್ ಮಾಲೀಕರು ಪ್ರಯಾಣಿಕರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಬಸ್ಸಿನಲ್ಲಿದ್ದವರು ಹೇಳಿದ್ದಾರೆ.

ಸಹಾಯಕ್ಕಾಗಿ ಮೂರು ಗಂಟೆಗಳ ಕಾಲ ರಸ್ತೆಯಲ್ಲಿ ಪ್ರಯಾಣಿಕರು ಪರದಾಡಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ 40 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಹೈದರಾಬಾದ್‌ನಿಂದ ಚಿರಾಲಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸಜೀವವಾಗಿ ದಹನವಾಗಿದ್ದಾರೆ.

ಮತ್ತಷ್ಟು ಓದಿ: ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಆಕಸ್ಮಿಕ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಅಪಘಾತ ಸಂಭವಿಸಿದೆಯೇ ಅಥವಾ ಚಾಲಕ ಮತ್ತು ಟ್ರಾವೆಲ್ಸ್​​ ಮಾಲೀಕರ ತಪ್ಪೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us