AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗೂಲಿಯಿಂದ ಅಮೀರ್​ ಖಾನ್​ವರೆಗೆ; ನಾಳೆ ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ 4ನೇ ಸೀಸನ್ ಆರಂಭ

ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್ ಜೊತೆಗಿನ ಡ್ಯುಯೊಲಾಗ್ ಸೀಸನ್ 4 ನಾಳೆ ಶುರುವಾಗಲಿದೆ. ಕ್ರೀಡಾ ದಂತಕಥೆಗಳಿಂದ ಹಿಡಿದು ಪ್ರಸಿದ್ಧ ನಟರವರೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ದಂತಕಥೆಗಳು ಈ ಹೊಸ ಸರಣಿಯಲ್ಲಿ ಮನಬಿಚ್ಚಿ ಮಾತನಾಡಲಿದ್ದಾರೆ. ಡ್ಯುಯೊಲಾಗ್ ವಿತ್ ಬರುಣ್ ದಾಸ್ ಸೀಸನ್ 4 ಕೇವಲ ಮನರಂಜನೆಯನ್ನು ಮಾತ್ರವಲ್ಲದೆ ಹಲವು ರೀತಿಯ ಆಲೋಚನೆಗಳ ಆಳವಾದ ವಿನಿಮಯವನ್ನೂ ನೀಡುತ್ತದೆ. ಬರುಣ್ ದಾಸ್ ನಡೆಸಿಕೊಡುವ ಈ ಕಾರ್ಯಕ್ರಮದಲ್ಲಿ ಈ ಸರಣಿಯಲ್ಲಿ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತು ನಟ ಅಮಿರ್ ಖಾನ್ ಅವರಂತಹ ಪ್ರಸಿದ್ಧ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.

ಗಂಗೂಲಿಯಿಂದ ಅಮೀರ್​ ಖಾನ್​ವರೆಗೆ; ನಾಳೆ 'ಡ್ಯುಯೊಲಾಗ್ ವಿತ್ ಬರುಣ್ ದಾಸ್' 4ನೇ ಸೀಸನ್ ಆರಂಭ
Duologue With Barun Das
ಸುಷ್ಮಾ ಚಕ್ರೆ
|

Updated on: Feb 27, 2026 | 8:32 PM

Share

ನವದೆಹಲಿ, ಫೆಬ್ರವರಿ 27: ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ (Duologue with Barun Das) 4ನೇ ಸೀಸನ್‌ ನಾಳೆ ಪ್ರೇಕ್ಷಕರ ಮುಂದೆ ಬರಲಿದೆ. ಈ ಹೊಸ ಸೀಸನ್ ಫೆಬ್ರವರಿ 28ರಂದು ಪ್ರದರ್ಶನಗೊಳ್ಳಲಿದೆ. ಮೊದಲ 3 ಸೀಸನ್‌ಗಳ ಯಶಸ್ಸಿನ ನಂತರ, ಈ ಬಾರಿ ಈ ಕಾರ್ಯಕ್ರಮವನ್ನು ಇನ್ನೂ ದೊಡ್ಡ ಪ್ರಮಾಣದಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಈ ಬಾರಿ ಇದು ಮನರಂಜನೆ ನೀಡುವುದಲ್ಲದೆ, ನಿಮ್ಮನ್ನು ಚಿಂತಿಸುವಂತೆ ಮಾಡುವ ಸಂಭಾಷಣೆಗಳನ್ನು ಈ ಶೋ ಒಳಗೊಂಡಿರುತ್ತದೆ. ಈ ಕಾರ್ಯಕ್ರಮವು ಬೇರೆ ಟಾಕ್ ಶೋಗಳಿಗಿಂತ ಭಿನ್ನವಾಗಿದೆ. ಏಕೆಂದರೆ ಇದು ಕೇವಲ ಪ್ರಶ್ನೆಗಳು ಮತ್ತು ಉತ್ತರಗಳನ್ನು ಒಳಗೊಂಡಿರುವುದಿಲ್ಲ, ಆಳವಾದ ವಿಚಾರ ವಿನಿಮಯವನ್ನು ಕೂಡ ಒಳಗೊಂಡಿರುತ್ತದೆ.

ಈ ವಿಶೇಷ ಕಾರ್ಯಕ್ರಮವನ್ನು ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್ ನಡೆಸಿಕೊಡಲಿದ್ದಾರೆ. ಅವರ ಸಂಭಾಷಣೆಯ ಶೈಲಿ ಸರಳವಾದರೂ ಆಳವಾಗಿದ್ದು, ಅತಿಥಿಗಳು ಮುಕ್ತವಾಗಿ ಮನಬಿಚ್ಚಿ ಮಾತನಾಡಲು ಅವಕಾಶ ಕಲ್ಪಿಸಿಕೊಡುತ್ತದೆ. ಕ್ರೀಡೆ, ಸಿನಿಮಾ, ಫ್ಯಾಷನ್ ಮತ್ತು ಇತರ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳು ಈ ಸೀಸನ್​​ನಲ್ಲಿ ಆಗಮಿಸಿ, ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಇದನ್ನೂ ಓದಿ: Duologue NXTನಲ್ಲಿ ಬರುಣ್ ದಾಸ್ ಜೊತೆ ತಮ್ಮ ಭಾವನೆ ಹಂಚಿಕೊಳ್ಳಲಿದ್ದಾರೆ ಪೂಜಾ ಜೈನ್ ಗುಪ್ತಾ

ಈ ಸೀಸನ್‌ನಲ್ಲಿ ಹಲವು ವೈವಿಧ್ಯಮಯ ಕ್ಷೇತ್ರಗಳ ದಿಗ್ಗಜರು ಭಾಗವಹಿಸಲಿದ್ದಾರೆ. ಈ ವೈವಿಧ್ಯತೆಯೇ ಕಾರ್ಯಕ್ರಮದ ದೊಡ್ಡ ಶಕ್ತಿ. ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ 4ನೇ ಸೀಸನ್ ಭಾರತೀಯ ಕ್ರಿಕೆಟ್ ದಂತಕಥೆ ಸೌರವ್ ಗಂಗೂಲಿ ಅವರೊಂದಿಗೆ ಆರಂಭವಾಗಲಿದೆ. ನಂತರ ಕ್ರೀಡೆ ಮತ್ತು ಮನರಂಜನೆ ಎರಡರಲ್ಲೂ ಹೆಸರು ಮಾಡಿರುವ ಟೆನಿಸ್ ಆಟಗಾರ ಮತ್ತು ನಟ ವಿಜಯ್ ಅಮೃತರಾಜ್ ಭಾಗವಹಿಸಲಿದ್ದಾರೆ. ಇದಾದ ನಂತರ ಫುಟ್ಬಾಲ್ ದಂತಕತೆಯಾದ ಲೋಥರ್ ಮ್ಯಾಥ್ಯೂಸ್, ಪ್ರಸಿದ್ಧ ಫ್ಯಾಷನ್ ಪರ್ಸನಾಲಿಟಿ ಬಿಯಾಂಕಾ ಬಾಲ್ಟಿ ತಮ್ಮ ಸ್ಪೂರ್ತಿದಾಯಕ ಕಥೆಯನ್ನು ಹಂಚಿಕೊಳ್ಳಲಿದ್ದಾರೆ. ಈ ಸೀಸನ್‌ನ ಅಂತಿಮ ಸಂಚಿಕೆಯಲ್ಲಿ ಖ್ಯಾತ ಬಾಲಿವುಡ್ ನಟ ಅಮೀರ್ ಖಾನ್ ಭಾಗವಹಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ