AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಾವಸ್ಥೆಯಲ್ಲೂ ರಸ್ತೆಗಿಳಿದು ಕಾರ್ಯ ನಿರ್ವಹಿಸಿದ ಡಿಎಸ್​ಪಿ ಶಿಲ್ಪಾ ಸಾಹುಗೆ ಎಲ್ಲೆಡೆ ಮೆಚ್ಚುಗೆ

ಐದು ತಿಂಗಳ ಗರ್ಭಿಣಿ ಶಿಲ್ಪಾ ಸಾಹು ಛತ್ತೀಸ್​ಗಢದ ದಂತೇವಾಡ ಜಿಲ್ಲೆಯ ಡಿಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆಯಲ್ಲಿ ಎಷ್ಟು ಜವಾಬ್ದಾರಿಯಾಗಿ ಇದ್ದರೂ ಸಾಲದು. ಆದರೆ ಜನ ಮಾತ್ರ ನಿರ್ಲಕ್ಷ್ಯತನದಿಂದ ತೋರುತ್ತಿದ್ದಾರೆ. ಈ ವೇಳೆ ತನ್ನ ಕರ್ತವ್ಯಕ್ಕೆ ಹಾಜರಾದ ಗರ್ಭಿಣಿ ಡಿಎಸ್​ಪಿ ಶಿಲ್ಪಾ ಸಾಹು ಕೊರೊನಾ ಮಾರ್ಗಸೂಚಿಯನ್ನು ಪಾಲಿಸಬೇಕೆಂದು ರಸ್ತೆಗೆ ಇಳಿದು ಜನರಿಗೆ ಸಂದೇಶ ನೀಡಿದರು.

ಗರ್ಭಾವಸ್ಥೆಯಲ್ಲೂ ರಸ್ತೆಗಿಳಿದು ಕಾರ್ಯ ನಿರ್ವಹಿಸಿದ ಡಿಎಸ್​ಪಿ ಶಿಲ್ಪಾ ಸಾಹುಗೆ ಎಲ್ಲೆಡೆ ಮೆಚ್ಚುಗೆ
ತನ್ನ ತಂಡದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಡಿಎಸ್​ಪಿ ಶಿಲ್ಪಾ ಸಾಹು
sandhya thejappa
|

Updated on: Apr 24, 2021 | 12:09 PM

Share

ಛತ್ತೀಸ್​ಗಢ್​: ಸರ್ಕಾರದ ಕೆಲಸ ದೇವರ ಕೆಲಸ ಎಂದು ಹಲವರು ಹೇಳುತ್ತಾರೆ. ಆದರೆ ಅದನ್ನು ಪಾಲಿಸುವುದು ಕೆಲವರು ಮಾತ್ರ. ಹಲವು ನೆಪಗಳನ್ನು ಹೇಳಿ ಕೆಲಸದಿಂದ ತಪ್ಪಿಸಿಕೊಳ್ಳುವ ಈ ಕಾಲದಲ್ಲಿ ತುಂಬು ಗರ್ಭಿಣಿ ಅಧಿಕಾರಿಯೊಬ್ಬರು ಕರ್ತವ್ಯದಿಂದ ಹಿಂದೆ ಸರಿಯದೆ ತನ್ನ ಕೆಲಸದಲ್ಲಿ ನಿರತರಾಗಿ ಇತರರಿಗೆ ಮಾದರಿಯಾಗಿದ್ದಾರೆ. ಛತ್ತೀಸ್​ಗಢದ ದಂತೇವಾಡ ಜಿಲ್ಲೆಯ ಡಿಎಸ್ಪಿ ಶಿಲ್ಪಾ ಸಾಹು ಎಂಬುವವರು ಸದ್ಯ ಸುದ್ದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅವರ ವಿಡಿಯೋ ಹರಿಡಾಡುತ್ತಿದೆ.

ಐದು ತಿಂಗಳ ಗರ್ಭಿಣಿ ಶಿಲ್ಪಾ ಸಾಹು ಛತ್ತೀಸ್​ಗಢದ ದಂತೇವಾಡ ಜಿಲ್ಲೆಯ ಡಿಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆಯಲ್ಲಿ ಎಷ್ಟು ಜವಾಬ್ದಾರಿಯಾಗಿ ಇದ್ದರೂ ಸಾಲದು. ಆದರೆ ಜನ ಮಾತ್ರ ನಿರ್ಲಕ್ಷ್ಯತನದಿಂದ ತೋರುತ್ತಿದ್ದಾರೆ. ಈ ವೇಳೆ ತನ್ನ ಕರ್ತವ್ಯಕ್ಕೆ ಹಾಜರಾದ ಗರ್ಭಿಣಿ ಡಿಎಸ್​ಪಿ ಶಿಲ್ಪಾ ಸಾಹು ಕೊರೊನಾ ಮಾರ್ಗಸೂಚಿಯನ್ನು ಪಾಲಿಸಬೇಕೆಂದು ರಸ್ತೆಗೆ ಇಳಿದು ಜನರಿಗೆ ಸಂದೇಶ ನೀಡಿದರು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ತಿಳಿ ಹೇಳಿದರು.

ಕೊರೊನ ಹಿನ್ನೆಲೆ ಛತ್ತೀಸ್ಗಢದ ದಂತೇವಾಡ ಲಾಕ್​ಡೌನ್​ ಆಗಿದೆ. ಆದರೂ ಕೆಲವರು ಚಲಿಸುತ್ತಿದ್ದಾರೆ. ವಾಹನಗಳಲ್ಲಿ ಮಾಸ್ಕ್ ಧರಿಸದೆ ಬೇಕಾಬಿಟ್ಟಿಯಾಗಿ ಓಡಾಡುವ ಜನರನ್ನು ತಡೆದು ಮೊದಲು ಮಾಸ್ಕ್ ಹಾಕಿಕೊಳ್ಳಿ ಎಂದು ಡಿಎಸ್​ಪಿ ಶಿಲ್ಪಾ ಸಾಹು ಮನವಿ ಮಾಡಿದರು. ಸುಡು ಬಿಸಿಲಿನಲ್ಲಿ ನಿಂತು ತನ್ನ ತಂಡದೊಂದಿಗೆ ಕೆಲಸವನ್ನು ನಿರ್ವಹಿಸಿದ ಮಹಿಳಾ ಅಧಿಕಾರಿಯ ಈ ಕಾರ್ಯ ಕ್ಷಮತೆಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಗರ್ಭಿಣಿ ಮಹಿಳೆಗೆ ವಿಶ್ರಾಂತಿ ಅನಿವಾರ್ಯ. ಗರ್ಭ ಧರಿಸುವ ಹೆಣ್ಣು ಕಾಲ ಕಾಲಕ್ಕೆ ಉತ್ತಮ ಆಹಾರವನ್ನು ಪಡೆಯಬೇಕು. ಹೆಚ್ಚು ಆಯಾಸ ಪಡದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಈ ನಡುವೆ ಡಿಎಸ್​ಪಿ ಶಿಲ್ಪಾ ಸಾಹು ರಸ್ತೆಯಲ್ಲಿ ನಿಂತು ಕಾರ್ಯ ನಿರ್ವಹಿಸುವ ಮೂಲಕ ಜನರ ಜೀವದ ಬಗ್ಗೆ ಕಾಳಜಿ ವಹಿಸಿದ್ದು, ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ.

ಇದನ್ನೂ ಓದಿ

ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೂಲ್ಸ್ ಬ್ರೇಕ್; ಹಣ್ಣು, ತರಕಾರಿ ಖರೀದಿಗೆ ಮುಗಿಬಿದ್ದ ಜನ

(During pregnancy DSP Shilpa Sahu advises people to follow the Corona guideline)

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ