AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಾವಸ್ಥೆಯಲ್ಲೂ ರಸ್ತೆಗಿಳಿದು ಕಾರ್ಯ ನಿರ್ವಹಿಸಿದ ಡಿಎಸ್​ಪಿ ಶಿಲ್ಪಾ ಸಾಹುಗೆ ಎಲ್ಲೆಡೆ ಮೆಚ್ಚುಗೆ

ಐದು ತಿಂಗಳ ಗರ್ಭಿಣಿ ಶಿಲ್ಪಾ ಸಾಹು ಛತ್ತೀಸ್​ಗಢದ ದಂತೇವಾಡ ಜಿಲ್ಲೆಯ ಡಿಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆಯಲ್ಲಿ ಎಷ್ಟು ಜವಾಬ್ದಾರಿಯಾಗಿ ಇದ್ದರೂ ಸಾಲದು. ಆದರೆ ಜನ ಮಾತ್ರ ನಿರ್ಲಕ್ಷ್ಯತನದಿಂದ ತೋರುತ್ತಿದ್ದಾರೆ. ಈ ವೇಳೆ ತನ್ನ ಕರ್ತವ್ಯಕ್ಕೆ ಹಾಜರಾದ ಗರ್ಭಿಣಿ ಡಿಎಸ್​ಪಿ ಶಿಲ್ಪಾ ಸಾಹು ಕೊರೊನಾ ಮಾರ್ಗಸೂಚಿಯನ್ನು ಪಾಲಿಸಬೇಕೆಂದು ರಸ್ತೆಗೆ ಇಳಿದು ಜನರಿಗೆ ಸಂದೇಶ ನೀಡಿದರು.

ಗರ್ಭಾವಸ್ಥೆಯಲ್ಲೂ ರಸ್ತೆಗಿಳಿದು ಕಾರ್ಯ ನಿರ್ವಹಿಸಿದ ಡಿಎಸ್​ಪಿ ಶಿಲ್ಪಾ ಸಾಹುಗೆ ಎಲ್ಲೆಡೆ ಮೆಚ್ಚುಗೆ
ತನ್ನ ತಂಡದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಡಿಎಸ್​ಪಿ ಶಿಲ್ಪಾ ಸಾಹು
sandhya thejappa
sandhya thejappa|

Updated on: Apr 24, 2021 | 12:09 PM

Share

ಛತ್ತೀಸ್​ಗಢ್​: ಸರ್ಕಾರದ ಕೆಲಸ ದೇವರ ಕೆಲಸ ಎಂದು ಹಲವರು ಹೇಳುತ್ತಾರೆ. ಆದರೆ ಅದನ್ನು ಪಾಲಿಸುವುದು ಕೆಲವರು ಮಾತ್ರ. ಹಲವು ನೆಪಗಳನ್ನು ಹೇಳಿ ಕೆಲಸದಿಂದ ತಪ್ಪಿಸಿಕೊಳ್ಳುವ ಈ ಕಾಲದಲ್ಲಿ ತುಂಬು ಗರ್ಭಿಣಿ ಅಧಿಕಾರಿಯೊಬ್ಬರು ಕರ್ತವ್ಯದಿಂದ ಹಿಂದೆ ಸರಿಯದೆ ತನ್ನ ಕೆಲಸದಲ್ಲಿ ನಿರತರಾಗಿ ಇತರರಿಗೆ ಮಾದರಿಯಾಗಿದ್ದಾರೆ. ಛತ್ತೀಸ್​ಗಢದ ದಂತೇವಾಡ ಜಿಲ್ಲೆಯ ಡಿಎಸ್ಪಿ ಶಿಲ್ಪಾ ಸಾಹು ಎಂಬುವವರು ಸದ್ಯ ಸುದ್ದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅವರ ವಿಡಿಯೋ ಹರಿಡಾಡುತ್ತಿದೆ.

ಐದು ತಿಂಗಳ ಗರ್ಭಿಣಿ ಶಿಲ್ಪಾ ಸಾಹು ಛತ್ತೀಸ್​ಗಢದ ದಂತೇವಾಡ ಜಿಲ್ಲೆಯ ಡಿಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆಯಲ್ಲಿ ಎಷ್ಟು ಜವಾಬ್ದಾರಿಯಾಗಿ ಇದ್ದರೂ ಸಾಲದು. ಆದರೆ ಜನ ಮಾತ್ರ ನಿರ್ಲಕ್ಷ್ಯತನದಿಂದ ತೋರುತ್ತಿದ್ದಾರೆ. ಈ ವೇಳೆ ತನ್ನ ಕರ್ತವ್ಯಕ್ಕೆ ಹಾಜರಾದ ಗರ್ಭಿಣಿ ಡಿಎಸ್​ಪಿ ಶಿಲ್ಪಾ ಸಾಹು ಕೊರೊನಾ ಮಾರ್ಗಸೂಚಿಯನ್ನು ಪಾಲಿಸಬೇಕೆಂದು ರಸ್ತೆಗೆ ಇಳಿದು ಜನರಿಗೆ ಸಂದೇಶ ನೀಡಿದರು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ತಿಳಿ ಹೇಳಿದರು.

ಕೊರೊನ ಹಿನ್ನೆಲೆ ಛತ್ತೀಸ್ಗಢದ ದಂತೇವಾಡ ಲಾಕ್​ಡೌನ್​ ಆಗಿದೆ. ಆದರೂ ಕೆಲವರು ಚಲಿಸುತ್ತಿದ್ದಾರೆ. ವಾಹನಗಳಲ್ಲಿ ಮಾಸ್ಕ್ ಧರಿಸದೆ ಬೇಕಾಬಿಟ್ಟಿಯಾಗಿ ಓಡಾಡುವ ಜನರನ್ನು ತಡೆದು ಮೊದಲು ಮಾಸ್ಕ್ ಹಾಕಿಕೊಳ್ಳಿ ಎಂದು ಡಿಎಸ್​ಪಿ ಶಿಲ್ಪಾ ಸಾಹು ಮನವಿ ಮಾಡಿದರು. ಸುಡು ಬಿಸಿಲಿನಲ್ಲಿ ನಿಂತು ತನ್ನ ತಂಡದೊಂದಿಗೆ ಕೆಲಸವನ್ನು ನಿರ್ವಹಿಸಿದ ಮಹಿಳಾ ಅಧಿಕಾರಿಯ ಈ ಕಾರ್ಯ ಕ್ಷಮತೆಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಗರ್ಭಿಣಿ ಮಹಿಳೆಗೆ ವಿಶ್ರಾಂತಿ ಅನಿವಾರ್ಯ. ಗರ್ಭ ಧರಿಸುವ ಹೆಣ್ಣು ಕಾಲ ಕಾಲಕ್ಕೆ ಉತ್ತಮ ಆಹಾರವನ್ನು ಪಡೆಯಬೇಕು. ಹೆಚ್ಚು ಆಯಾಸ ಪಡದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಈ ನಡುವೆ ಡಿಎಸ್​ಪಿ ಶಿಲ್ಪಾ ಸಾಹು ರಸ್ತೆಯಲ್ಲಿ ನಿಂತು ಕಾರ್ಯ ನಿರ್ವಹಿಸುವ ಮೂಲಕ ಜನರ ಜೀವದ ಬಗ್ಗೆ ಕಾಳಜಿ ವಹಿಸಿದ್ದು, ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ.

ಇದನ್ನೂ ಓದಿ

ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೂಲ್ಸ್ ಬ್ರೇಕ್; ಹಣ್ಣು, ತರಕಾರಿ ಖರೀದಿಗೆ ಮುಗಿಬಿದ್ದ ಜನ

(During pregnancy DSP Shilpa Sahu advises people to follow the Corona guideline)

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ