AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕ್ಯುರಿಟಿಯನ್ನು ಕರೆದು ಅವರನ್ನು ಹೊರಗೆ ಕಳಿಸಿ; ಹಿರಿಯ ವಕೀಲರ ಮೇಲೆ ಗರಂ ಆದ ಸಿಜೆಐ ಡಿವೈ ಚಂದ್ರಚೂಡ್

ವಕೀಲರ ವರ್ತನೆಯಿಂದ ಅಸಮಾಧಾನಗೊಂಡ ಸಿಜೆಐ ಚಂದ್ರಚೂಡ್ ಸುಮ್ಮನೆ ಕಿರಿಕಿರಿ ಮಾಡಬೇಡಿ. ಇದು ಕೋರ್ಟ್, ಇಲ್ಲಿ ಉತ್ತಮ ರೀತಿಯಲ್ಲಿ ನಡೆದುಕೊಳ್ಳಿ ಎಂದು ಹೇಳಿದಾಗಲೂ ವಕೀಲರು ಪಾಲಿಸಿಲ್ಲ.  ಇದರಿಂದ ಸಿಟ್ಟುಗೊಂಡ ಸಿಜೆಐ, ಸೆಕ್ಯುರಿಟಿಯನ್ನು ಕರೆಯಿರಿ, ಅವರನ್ನು ಹೊರ ಕಳುಹಿಸಿ ಎಂದಿದ್ದಾರೆ.  ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿದ ವಕೀಲರು, ಹೊರ ಹೋಗಲು ನನಗೆ ಹೇಳಬೇಕಾಗಿಲ್ಲ ಎಂದಿದ್ದಾರೆ.

ಸೆಕ್ಯುರಿಟಿಯನ್ನು ಕರೆದು ಅವರನ್ನು ಹೊರಗೆ ಕಳಿಸಿ; ಹಿರಿಯ ವಕೀಲರ ಮೇಲೆ ಗರಂ ಆದ ಸಿಜೆಐ ಡಿವೈ ಚಂದ್ರಚೂಡ್
ಡಿವೈ ಚಂದ್ರಚೂಡ್
ರಶ್ಮಿ ಕಲ್ಲಕಟ್ಟ
|

Updated on: Jul 23, 2024 | 7:21 PM

Share

ದೆಹಲಿ ಜುಲೈ 23: ಇಂದು (ಮಂಗಳವಾರ) ನಡೆದ ನೀಟ್ ಯುಜಿ (NEET UG)ಪ್ರಶ್ನೆ ಪತ್ರಿಕೆ ಸೋರಿಕೆ  ಪ್ರಕರಣದ  ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ಅವರು ಸುಪ್ರೀಂಕೋರ್ಟ್‌ನಲ್ಲಿರುವ (Supreme Court) ಭದ್ರತಾ ಸಿಬ್ಬಂದಿಗೆ ಹಿರಿಯ ವಕೀಲರನ್ನು ನ್ಯಾಯಾಲಯದಿಂದ ಹೊರತಳ್ಳುವಂತೆ ಆದೇಶಿಸಿದ್ದಾರೆ. ನ್ಯಾಯಮೂರ್ತಿಗಳು ಈ ರೀತಿ ಕಟುವಾಗಿ ಹೇಳಿದ ನಂತರ ವಕೀಲರು ಕೋರ್ಟ್ ರೂಂನಿಂದ ಹೊರ ನಡೆದಿದ್ದಾರೆ. ನೀಟ್-ಯುಜಿ ವಿಚಾರಣೆ ವೇಳೆ ಮತ್ತೊಬ್ಬ ವಕೀಲರ ವಾದಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಹಿರಿಯ ವಕೀಲ ಮ್ಯಾಥ್ಯೂಸ್ ನೆಡುಂಪಾರ ಅವರನ್ನು ಸಿಜೆಐ ಟೀಕಿಸಿದ್ದಾರೆ.

ಈ ಪ್ರಕರಣದಲ್ಲಿ ಅರ್ಜಿದಾರರ ಪರ ವಕಾಲತ್ತು ವಹಿಸಿದ್ದ ಹಿರಿಯ ವಕೀಲ ನರೇಂದ್ರ ಹೂಡಾ ಅವರಿಗೆ ಅಡ್ಡಿಪಡಿಸದಂತೆ ನೆಡುಂಪಾರ ಅವರಿಗೆ ನ್ಯಾಯಮೂರ್ತಿ ಚಂದ್ರಚೂಡ್ ಪದೇ ಪದೇ ಕೇಳಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಆದರೆ ನೆಡುಂಪಾರ ನ್ಯಾಯಮೂರ್ತಿಯವರ ಮಾತು ಲೆಕ್ಕಿಸದೆ ಹೂಡಾ ವಾದದ ನಡುವೆ ಮಧ್ಯಪ್ರವೇಶಿಸುತ್ತಿದ್ದರು. ಹೂಡಾ ಅವರ ವಾದ ಪೂರ್ಣಗೊಳಿಸಿದ ನಂತರ ನೀವು ಮಾತನಾಡಬಹುದು ಎಂದು ಹಿರಿಯ ವಕೀಲ ನೆಡುಂಪಾರ ಅವರಿಗೆ ಸಿಜೆಐ ಹೇಳಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿದ ನೆಡುಂಪಾರ, ನಾನುನ್ಯಾಯಾಲಯದಲ್ಲಿ ಅತ್ಯಂತ ಹಿರಿಯ ವಕೀಲ ಎಂದಿದ್ದಾರೆ.

ವಕೀಲರ ವರ್ತನೆಯಿಂದ ಅಸಮಾಧಾನಗೊಂಡ ಸಿಜೆಐ ಸುಮ್ಮನೆ ಕಿರಿಕಿರಿ ಮಾಡಬೇಡಿ. ಇದು ಕೋರ್ಟ್, ಇಲ್ಲಿ ಉತ್ತಮ ರೀತಿಯಲ್ಲಿ ನಡೆದುಕೊಳ್ಳಿ ಎಂದು ಹೇಳಿದಾಗಲೂ ವಕೀಲರು ಪಾಲಿಸಿಲ್ಲ. ಇದರಿಂದ ಸಿಟ್ಟುಗೊಂಡ ಸಿಜೆಐ, ಸೆಕ್ಯುರಿಟಿಯನ್ನು ಕರೆಯಿರಿ, ಅವರನ್ನು ಹೊರ ಕಳುಹಿಸಿ ಎಂದಿದ್ದಾರೆ.  ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿದ ವಕೀಲರು, ಹೊರ ಹೋಗಲು ನನಗೆ ಹೇಳಬೇಕಾಗಿಲ್ಲ ಎಂದಿದ್ದಾರೆ.

ಇದಕ್ಕೆ ಸಿಜೆಐ “ನೀವು ಹಾಗೆ ಹೇಳಬೇಕಾಗಿಲ್ಲ. ನೀವು ಹೊರಡಬಹುದು. ನಾನು ಕಳೆದ 24 ವರ್ಷಗಳಿಂದ ನ್ಯಾಯಾಂಗವನ್ನು ನೋಡಿದ್ದೇನೆ. ಈ ನ್ಯಾಯಾಲಯದಲ್ಲಿ ಕಾರ್ಯವಿಧಾನವನ್ನು ನಿರ್ದೇಶಿಸಲು ವಕೀಲರಿಗೆ ನಾನು ಅವಕಾಶ ನೀಡುವುದಿಲ್ಲ,” ಎಂದಿದ್ದಾರೆ.  ನಾನು 1979 ರಿಂದ ನ್ಯಾಯಾಂಗವನ್ನು ನೋಡಿರುವೆ ಎಂದು ಹೇಳಿ ನೆಡುಂಪಾರ ಕೋರ್ಟ್ ರೂಂನಿಂದ ಹೊರ ನಡೆದಿದ್ದಾರೆ.

ಅಂದಹಾಗೆ ಸಿಜೆಐ ಅವರು ವಕೀಲರೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದ್ದು ಇದೇ ಮೊದಲಲ್ಲ. ಮಾರ್ಚ್‌ನಲ್ಲಿ ಅವರು ವಕೀಲರಿಗೆ ಕೂಗಬೇಡಿ ಎಂದು ಗದರಿಗದ್ದರು.

ಇದನ್ನೂ ಓದಿ: NEET-UG 2024: ನೀಟ್​ ಮರು ಪರೀಕ್ಷೆ ಇಲ್ಲ; ಸುಪ್ರೀಂ ಕೋರ್ಟ್​ ಮಹತ್ವದ ಆದೇಶ

“ನನ್ನ ಮೇಲೆ ಕೂಗಬೇಡ! ಇದು ಹೈಡ್ ಪಾರ್ಕ್ ಕಾರ್ನರ್ ಸಭೆಯಲ್ಲ, ನೀವು ನ್ಯಾಯಾಲಯದಲ್ಲಿದ್ದೀರಿ. ನೀವು ಅಪ್ಲಿಕೇಶನ್ ಅನ್ನು ಸರಿಸಲು ಬಯಸಿದರೆ, ಅಪ್ಲಿಕೇಶನ್ ಅನ್ನು ಫೈಲ್ ಮಾಡಿ. ಮುಖ್ಯ ನ್ಯಾಯಮೂರ್ತಿಯಾಗಿ ನನ್ನ ನಿರ್ಧಾರವನ್ನು ನೀವು ಪಡೆದುಕೊಂಡಿದ್ದೀರಿ, ನಾವು ನಿಮ್ಮ ಮಾತನ್ನು ಕೇಳುತ್ತಿಲ್ಲ. ನೀವು ಅಪ್ಲಿಕೇಶನ್ ಅನ್ನು ಫೈಲ್ ಮಾಡಲು ಬಯಸಿದರೆ, ಅದನ್ನು ಇಮೇಲ್‌ ಮಾಡಿ. ಇದು ಈ ನ್ಯಾಯಾಲಯದ ನಿಯಮವಾಗಿದೆ ಎಂದು ಸಿಜೆಐ ಹೇಳಿದ್ದರು.

ನೀಟ್ ಮರು ಪರೀಕ್ಷೆ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ