AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ತಪಾಸಣೆ ವೇಳೆ, ಕುಡಿದ ಅಮಲಿನಲ್ಲಿ ಟ್ರಾಫಿಕ್​​​​​​ ಪೊಲೀಸರನ್ನೇ ಎಳೆದುಕೊಂಡು ಹೋದ ಕಾರು ಚಾಲಕ

ವಾಹನ ತಪಾಸಣೆ ವೇಳೆ ಕುಡಿದು ಕಾರು ಓಡಿಸುತ್ತಿದ್ದ ಚಾಲಕನನ್ನು ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್ ಪರಿಶೀಲನೆ ಮಾಡಲು ಕಾರಿನ ಡೋರ್ ಓಪನ್​​ ಮಾಡಿ, ಒಳಗೆ ಹೋಗಬೇಕೆನ್ನುಷ್ಟರಲ್ಲಿ ಚಾಲಕ ಕಾರನ್ನು ಮುಂದೆ ವೇಗವಾಗಿ ಮೂವ್ ಮಾಡಿ, ಪೊಲೀಸನ್ನು ಸ್ವಲ್ಪ ದೂರದ ವರೆಗೆ ಎಳೆದುಕೊಂಡು ಹೋಗಿದ್ದಾನೆ

ವಾಹನ ತಪಾಸಣೆ ವೇಳೆ, ಕುಡಿದ ಅಮಲಿನಲ್ಲಿ ಟ್ರಾಫಿಕ್​​​​​​ ಪೊಲೀಸರನ್ನೇ ಎಳೆದುಕೊಂಡು ಹೋದ ಕಾರು ಚಾಲಕ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Jun 22, 2024 | 4:38 PM

Share

ಫರಿದಾಬಾದ್, ಜೂ.22: ಹರಿಯಾಣದ ಫರಿದಾಬಾದ್​​ನಲ್ಲಿ ವಾಹನ ತಪಾಸಣೆ  ವೇಳೆ ಕಾರು ಚಾಲಕ ಕುಡಿದ ಅಮಲಿನಲ್ಲಿ  ಪೊಲೀಸರು ಎಂಬುದನ್ನು ಲೆಕ್ಕಿಸದೆ  ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. ಪೊಲೀಸರು ಚಾಲಕನ ಬಳಿ ದಾಖಲೆ ಕೇಳಿದ್ದು, ಸರಿಯಾದ ದಾಖಲೆ ಹಾಗೂ ಕುಡಿದು ಕಾರು ಓಡಿಸುತ್ತಿದ್ದ ಕಾರಣ ಟ್ರಾಫಿಕ್​​​​ ಪೊಲೀಸರಿಗೆ ಉತ್ತರ ಹೇಳಲಾಗದೇ ಈ ರೀತಿ ಮಾಡಿದ್ದಾನೆ ಎಂದು ಹೇಳಲಾಗಿದೆ. ಬಲ್ಲಭಗಢ ಬಸ್ ನಿಲ್ದಾಣ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಪೊಲೀಸರ ಪ್ರಕಾರ, ನಿನ್ನೆ ಸಂಜೆ ಚಾಲಕನೊಬ್ಬ ಕುಡಿದ ಅಮಲಿನಲ್ಲಿ ತನ್ನ ಕಾರಿನಲ್ಲಿ ಒಂದಿಷ್ಟು ಪ್ರಯಾಣಿಕರನ್ನು ಕೂರಿಸಿಕೊಂಡು ಚಾಲನೆ ಮಾಡುತ್ತಿದ್ದ ಎಂದು ಹೇಳಲಾಗಿದೆ. ಪೊಲೀಸರಿಗೆ ವಾಹನ ತಪಾಸಣೆ ವೇಳೆ ಈ ವಿಚಾರ ತಿಳಿದು ಬಂದಿದೆ. ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಚಾಲಕನ ಬಳಿಗೆ ಬಂದು ವಾಹನದ ದಾಖಲೆಗಳನ್ನು ಕೇಳಿದ್ದಾರೆ, ದಾಖಲೆಗಳು ಇಲ್ಲದ ಕಾರಣ ಆತನಿಗೆ ದಂಡ ವಿಧಿಸಿದ್ದಾರೆ. ನಂತರ ಇಬ್ಬರ ನಡುವೆ ವಾದ ನಡೆದಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶ ಆರ್‌ಕೆ ದಿವಾಕರ್‌ಗೆ ಇಸ್ಲಾಮಿಕ್ ಮೂಲಭೂತವಾದಿಗಳಿಂದ ಕೊಲೆ ಬೆದರಿಕೆ

ನಂತರ ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್ ಅವನನ್ನು ಪರಿಶೀಲನೆ ಮಾಡಲು ಕಾರಿನ ಡೋರ್ ಓಪನ್​​ ಮಾಡಿ, ಒಳಗೆ ಹೋಗಬೇಕೆನ್ನುಷ್ಟರಲ್ಲಿ ಚಾಲಕ ಕಾರನ್ನು ಮುಂದೆ ವೇಗವಾಗಿ ಮೂವ್ ಮಾಡಿ, ಪೊಲೀಸನ್ನು ಸ್ವಲ್ಪ ದೂರದ ವರೆಗೆ ಎಳೆದುಕೊಂಡು ಹೋಗಿದ್ದಾನೆ, ನಂತರ ಅಲ್ಲಿದ್ದ ಇತರ ಪೊಲೀಸ್​​ ಅಧಿಕಾರಿಗಳು ಬಂದು ಕಾರನ್ನು ಸುತ್ತುವರಿದು ಕಾಪಾಡಿದ್ದಾರೆ. ನಂತರ ಆತನನ್ನು ಹಿಡಿದು ಪೊಲೀಸ್​​ ಠಾಣೆಗೆ ಕರೆದುಕೊಂಡು ಹೋಗಿ ತನಿಖೆ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Sat, 22 June 24

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​