AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court: ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾಗಿ ಇಬ್ಬರ ನೇಮಕ, ಪ್ರಮಾಣವಚನ ಬೋಧಿಸಿದ ಡಿವೈ ಚಂದ್ರಚೂಡ್​​

ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಮಣ ವಿಶ್ವನಾಥನ್ ಅವರಿಗೆ ಶುಕ್ರವಾರದಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.

Supreme Court: ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾಗಿ ಇಬ್ಬರ ನೇಮಕ, ಪ್ರಮಾಣವಚನ ಬೋಧಿಸಿದ ಡಿವೈ ಚಂದ್ರಚೂಡ್​​
ಸುಪ್ರೀಂ ಕೋರ್ಟ್​
ಅಕ್ಷಯ್​ ಪಲ್ಲಮಜಲು​​
|

Updated on:May 19, 2023 | 11:32 AM

Share

ದೆಹಲಿ: ಸುಪ್ರೀಂ ಕೋರ್ಟ್ (Supreme Court)​​ ನ್ಯಾಯಮೂರ್ತಿಗಳಾಗಿ ಇಬ್ಬರನ್ನು ನೇಮಕ ಮಾಡಲಾಗಿದೆ, ನೆನ್ನೆ (ಮೇ 18) ದ್ರೌಪದಿ ಮುರ್ಮು ಅವರು ಆದೇಶಕ್ಕೆ ಸಹಿ ಹಾಕಿದ್ದು, ಇಂದು (ಮೇ19) ಸುಪ್ರೀಂ ಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಮಣ ವಿಶ್ವನಾಥನ್ ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದ್ದು, ಇದೀಗ ಸುಪ್ರೀಂ ಕೋರ್ಟ್​ ಇಬ್ಬರು ಹೊಸ ನ್ಯಾಯಾಧೀಶರನ್ನು ಪಡೆದುಕೊಂಡಿದೆ. ಸುಪ್ರೀಂ ಕೋರ್ಟ್ ಈಗ 34 ನ್ಯಾಯಾಧೀಶರ ಪೂರ್ಣ ಬಲವನ್ನು ಹೊಂದಿದೆ ಎಂದು ಹೇಳಲಾಗಿದೆ.

ನ್ಯಾಯಮೂರ್ತಿ ಮಿಶ್ರಾ ಮತ್ತು ವಿಶ್ವನಾಥನ್ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವ ಆದೇಶ ಪ್ರತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಚೇರಿಯಿಂದ ಗುರುವಾರ ಹೊರಡಿಸಲಾಗಿದೆ. ಈ ಬಗ್ಗೆ ನೂತನವಾಗಿ ಆಯ್ಕೆಯಾಗಿರುವ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಟ್ವಿಟರ್‌ನಲ್ಲಿ ಫೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:Supreme Court: ಪತಿ-ಪತ್ನಿಯ ನಡುವೆ ಪರಸ್ಪರ ಒಪ್ಪಿಗೆ ಇದ್ದಲ್ಲಿ ವಿಚ್ಛೇದನಕ್ಕೆ ಆದೇಶಿಸಬಹುದು, 6 ತಿಂಗಳು ಕಾಯುವ ಅಗತ್ಯವಿಲ್ಲ : ಸುಪ್ರೀಂ

ಇವರನ್ನು ಆಯ್ಕೆ ಮಾಡುವ ಬಗ್ಗೆ ಮೇ 16 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ನೇಮಕಕ್ಕೆ ಶಿಫಾರಸು ಮಾಡಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್, ಕೆಎಂ ಜೋಸೆಫ್, ಅಜಯ್ ರಸ್ತೋಗಿ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಕೊಲಿಜಿಯಂ ಶಿಫಾರಸು ಮಾಡುವಾಗ ಸುಪ್ರೀಂ ಕೋರ್ಟ್ ಪೀಠಕ್ಕೆ ನೇರವಾಗಿ ನೇಮಕಗೊಂಡದ್ದು ಇವರು ಒಬ್ಬರೇ ಎಂದು ಹೇಳಲಾಗಿದೆ. ಹಿರಿಯ ಮತ್ತು ಸಹ ನ್ಯಾಯಮೂರ್ತಿಗಳ ಅಭಿಪ್ರಾಯದಂತೆ, ಹಿರಿಯ ವಕೀಲರಾದ ಕೆವಿ ವಿಶ್ವನಾಥನ್ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:32 am, Fri, 19 May 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!