ಕೇರಳದಲ್ಲಿ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ, ಬಿಎಸ್​ವೈ ಸ್ವಲ್ಪದರಲ್ಲಿ ಬಚಾವ್

ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ 2ನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ. ಬಿಎಸ್​ವೈ ಕಣ್ಣೂರಿನಲ್ಲಿ ದೇವಸ್ಥಾನಕ್ಕೆ ತೆರಳುವ ವೇಳೆ ಸಿಎಎ ಮತ್ತು ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ ವಿರೋಧಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಬ್ಯಾಕ್​ ಗೋಬ್ಯಾಕ್​ ಎಂದು ಘೋಷಣೆ ಕೂಗಿ ಸಿಎಂ ಬಿಎಸ್​ವೈಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಕಣ್ಣೂರಿನಲ್ಲಿ ಕಾರು ಅಡ್ಡಗಟ್ಟಿ ಸಿಎಂ ಬಿಎಸ್​ವೈ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಸಿಪಿಐ(ಎಂ)ಯೂತ್​ ವಿಂಗ್​ನ ಗುಂಪಿನವರು ಈ ಕೃತ್ಯ ನಡೆಸಿದ್ದಾರೆ. ಕಾರು ಚಾಲಕನ ಚಾಣಾಕ್ಷತನದಿಂದ ಯಡಿಯೂರಪ್ಪ ಬಚಾವ್​ ಆಗಿದ್ದಾರೆ. ಇಲ್ಲವಾದಲ್ಲಿ […]

ಕೇರಳದಲ್ಲಿ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ, ಬಿಎಸ್​ವೈ ಸ್ವಲ್ಪದರಲ್ಲಿ ಬಚಾವ್
ಸಾಧು ಶ್ರೀನಾಥ್​

Updated on: Dec 25, 2019 | 3:48 PM

ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ 2ನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ. ಬಿಎಸ್​ವೈ ಕಣ್ಣೂರಿನಲ್ಲಿ ದೇವಸ್ಥಾನಕ್ಕೆ ತೆರಳುವ ವೇಳೆ ಸಿಎಎ ಮತ್ತು ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ ವಿರೋಧಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಬ್ಯಾಕ್​ ಗೋಬ್ಯಾಕ್​ ಎಂದು ಘೋಷಣೆ ಕೂಗಿ ಸಿಎಂ ಬಿಎಸ್​ವೈಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.

ಕಣ್ಣೂರಿನಲ್ಲಿ ಕಾರು ಅಡ್ಡಗಟ್ಟಿ ಸಿಎಂ ಬಿಎಸ್​ವೈ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಸಿಪಿಐ(ಎಂ)ಯೂತ್​ ವಿಂಗ್​ನ ಗುಂಪಿನವರು ಈ ಕೃತ್ಯ ನಡೆಸಿದ್ದಾರೆ. ಕಾರು ಚಾಲಕನ ಚಾಣಾಕ್ಷತನದಿಂದ ಯಡಿಯೂರಪ್ಪ ಬಚಾವ್​ ಆಗಿದ್ದಾರೆ. ಇಲ್ಲವಾದಲ್ಲಿ ಹೆಚ್ಚಿನ ರೀತಿಯಲ್ಲಿ ಅನಾಹುತ ಉಂಟಾಗುತ್ತಿತ್ತು. ಆದರೆ ಈವರೆಗೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟ್ವಿಟ್ಟರ್​ನಲ್ಲಿ ಕೇರಳ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದೇ ಮಂಗಳೂರಿಗೆ ಆಗಮಿಸಲಿರುವ ಬಿಎಸ್​ವೈ:
ಕಣ್ಣೂರಿನಲ್ಲಿ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇರಳ ಪ್ರವಾಸ ಮೊಟಕುಗೊಳಿಸಿ ಇಂದೇ ಕಣ್ಣೂರಿನಿಂದ ಮಂಗಳೂರಿಗೆ ಸಿಎಂ ಬಿಎಸ್​ವೈ ವಾಪಸ್ ಬರಲಿದ್ದಾರೆ. ಪೂರ್ವನಿಗದಿತ ವೇಳಾಪಟ್ಟಿ ಪ್ರಕಾರ ನಾಳೆ ಮಂಗಳೂರಿಗೆ ಹಿಂದಿರುಗಬೇಕಿತ್ತು. ಆದ್ರೆ ಕೇರಳದಲ್ಲಿ ವ್ಯಾಪಕವಾದ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ರಾತ್ರಿಯೇ ಮಂಗಳೂರಿಗೆ ಹಿಂದಿರುಗಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.

Published On - 3:28 pm, Tue, 24 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us