AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ನೋಯ್ಡಾ ರಸ್ತೆ ಮಧ್ಯೆ ಪಟಾಕಿ ತುಂಬಿದ್ದ ಇ ರಿಕ್ಷಾಗೆ ತಗುಲಿದ ಬೆಂಕಿ; ಓರ್ವ ವ್ಯಕ್ತಿ ಸಾವು

ಇ-ರಿಕ್ಷಾಗೆ ಬೆಂಕಿ ಹತ್ತಿ ಪಟಾಕಿ ಸಿಡಿಯುತ್ತಿರುವ ದೃಶ್ಯ ರಸ್ತೆಯಲ್ಲಿರುವ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗ್ರೇಟರ್ ನೋಯ್ಡಾ ರಸ್ತೆ ಮಧ್ಯೆ ಪಟಾಕಿ ತುಂಬಿದ್ದ ಇ ರಿಕ್ಷಾಗೆ ತಗುಲಿದ ಬೆಂಕಿ; ಓರ್ವ ವ್ಯಕ್ತಿ  ಸಾವು
ರಶ್ಮಿ ಕಲ್ಲಕಟ್ಟ
|

Updated on:Feb 28, 2023 | 4:53 PM

Share

ಗ್ರೇಟರ್ ನೋಯ್ಡಾದಲ್ಲಿ (Greater Noida)ರಸ್ತೆ ಮಧ್ಯದಲ್ಲಿ ಪಟಾಕಿ ತುಂಬಿದ ಇ-ರಿಕ್ಷಾಕ್ಕೆ (e-rickshaw) ಬೆಂಕಿ ಹೊತ್ತಿಕೊಂಡಿದ್ದು, ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾರೆ. ಈ ಪ್ರದೇಶದಲ್ಲಿ ಜಗನ್ನಾಥ ಯಾತ್ರೆ ವೇಳೆ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಪೊಲೀಸ್ ಸಿಬ್ಬಂದಿ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಮಂಗಳವಾರ ನಡೆದ ಈ ಘಟನೆಯಲ್ಲಿ ಗಾಯಗೊಂಡ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ. ಇ ರಿಕ್ಷಾಗೆ ಬೆಂಕಿ ಹತ್ತಿ ಪಟಾಕಿ ಸಿಡಿಯುತ್ತಿರುವ ದೃಶ್ಯ ರಸ್ತೆಯಲ್ಲಿರುವ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ, ಇ-ರಿಕ್ಷಾ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದ ಸಣ್ಣ ಅಂಗಡಿಯೊಂದರ ಮುಂದೆ ನಿಂತಿದ್ದು ಅಲ್ಲೇ ಪಕ್ಕದಲ್ಲಿ ಜನರು ಹಾದು ಹೋಗುತ್ತಿರುವುದು ಕಾಣಿಸುತ್ತದೆ. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಜನರು ಓಡಲಾರಂಭಿಸಿದ್ದು ಆಗ ಸೈಕಲ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿ ಕೆಳಗೆ ಬಿದ್ದಿದ್ದಾರೆ. ಮೊದಲಿಗೆ ಜನರು ಗಾಬರಿಯಿಂದ ಓಡಿದ್ದರಿಂದ ರಸ್ತೆ ನಿರ್ಜನವಾಗಿತ್ತು, ಆದರೆ ನಂತರ ಕೆಲವರು ಸಹಾಯಕ್ಕಾಗಿ ಧಾವಿಸಿದ್ದಾರೆ.

ಈ ಬಗ್ಗೆ ಟ್ವಿಟರ್​ನಲ್ಲಿ ವಿಡಿಯೊ ಪೋಸ್ಟ್ ಮಾಡಿದ ಗ್ರೇಟರ್ ನೋಯ್ಡಾದ ಎಡಿಸಿಪಿ 27.02.2023 ರಂದು ದಾದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ದಾದ್ರಿ ಪಟ್ಟಣದಲ್ಲಿ ಜಗನ್ನಾಥ ಶೋಭಾ ಯಾತ್ರೆ ಸಾಂಪ್ರದಾಯಿಕವಾಗಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಕೆಲವರು ಪಟಾಕಿ ಸಿಡಿಸುತ್ತಿದ್ದರು. ಮುಂದೆ ಸಾಗುತ್ತಿದ್ದ ಇ-ರಿಕ್ಷಾದ ಮೇಲೆ ಒಂದು ಪಟಾಕಿ ಬಿದ್ದಿತು, ಅದರಲ್ಲಿ ಇತರ ಪಟಾಕಿಗಳನ್ನು ಇರಿಸಲಾಗಿತ್ತು, ಇದರಿಂದಾಗಿ ಉಳಿದವುಗಳಿಗೆ ಬೆಂಕಿ ಹಚ್ಚಿಕೊಂಡಿತು ಎಂದಿದ್ದಾರೆ.

ಅಪಘಾತದಲ್ಲಿ ಪಟಾಕಿ ಹಚ್ಚುತ್ತಿದ್ದ ಸಲ್ಮಾನ್ ಮತ್ತು ಇ-ರಿಕ್ಷಾ ಚಾಲಕ ಪಪ್ಪು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಜಲಫಿರಂಗಿಗಳನ್ನು ತಂದು ಬೆಂಕಿಯನ್ನು ನಂದಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Tue, 28 February 23

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು