AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

E-RUPI: ಇ-ರುಪಿ ಡಿಜಿಟಲ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ; ಏನಿದರ ವಿಶೇಷತೆ?

E-RUPI Benefits: ಮುಂದಿನ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆಗಳು ಸೇರಿದಂತೆ ಬೇರೆ ವಲಯಗಳಿಗೆ ಈ ಇ-ರುಪಿ ಸೇವೆಯನ್ನು ಅಳವಡಿಕೆ ಮಾಡಲಾಗುವುದು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

E-RUPI: ಇ-ರುಪಿ ಡಿಜಿಟಲ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ; ಏನಿದರ ವಿಶೇಷತೆ?
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 02, 2021 | 5:27 PM

ನವದೆಹಲಿ: ಭಾರತವನ್ನು ಡಿಜಿಟಲೀಕರಣ ಮಾಡಲು ಪಣ ತೊಟ್ಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಮೂಲಕ ಹಣ ಪಾವತಿ ಮಾಡುವ ಇ-ರುಪಿ (E-RUPI) ಸೇವೆಗೆ ಇಂದು ಚಾಲನೆ ನೀಡಿದ್ದಾರೆ. ಈಗಾಗಲೇ ಫೋನ್ ಪೇ, ಗೂಗಲ್ ಪೇ, ಪೇಟಿಎಂ, ವಾಟ್ಸಾಪ್ ಪೇ ಮುಂತಾದ ಡಿಜಿಟಲ್ ಪೇಮೆಂಟ್​ ಆಯ್ಕೆಗಳಿವೆಯಲ್ಲ ಎಂದು ನೀವು ಹುಬ್ಬೇರಿಸಬಹುದು. ಆದರೆ, ಈ ಇ-ರುಪಿ ಬಹಳ ವಿಶೇಷವಾಗಿದ್ದು, ಇದರ ಮೂಲಕ ಇಂಟರ್ನೆಟ್, ಸ್ಮಾರ್ಟ್​ಫೋನ್​ಗಳು ಇಲ್ಲದೆಯೂ ವೋಚರ್ ಮೂಲಕ ಹಣ ಪಾವತಿ ಮಾಡಲು ಸಾಧ್ಯವಿದೆ.

ಇಂದು ಈ ಇ-ರುಪಿ ಸೇವೆಗೆ ಚಾಲನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಆರಂಭಿಕವಾಗಿ ಈ ಸೇವೆ ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಅನುಕೂಲವಾಗಲಿದೆ. ಖಾಸಗಿ ಕೇಂದ್ರಗಳಲ್ಲಿ ಹಣ ಪಾವತಿ ಮಾಡಿ ಕೊವಿಡ್ ಲಸಿಕೆ ಪಡೆಯುವವರು, ಅಥವಾ ಯಾರಾದರೂ ತಮ್ಮ ಸುತ್ತಮುತ್ತಲಿನ 100 ಜನರ ಕೊವಿಡ್ ಲಸಿಕೆಗೆ ಸಹಾಯ ಮಾಡುವವರಿದ್ದರೆ ಅವರು ಇ-ರುಪಿ ವೋಚರ್ ನೀಡಬಹುದು. ಆಗ ಆ ವೋಚರ್​ನಲ್ಲಿರುವ ಹಣವನ್ನು ಲಸಿಕೆಗೆ ಮಾತ್ರ ಬಳಕೆ ಮಾಡಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆಗಳು ಸೇರಿದಂತೆ ಬೇರೆ ವಲಯಗಳಿಗೆ ಈ ಇ-ರುಪಿ ಸೇವೆಯನ್ನು ಅಳವಡಿಕೆ ಮಾಡಲಾಗುವುದು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

ಪ್ರೀಪೇಯ್ಡ್​ ಆಗಿರುವ ಇ-ರುಪಿ ವೋಚರ್​ಗಳನ್ನು ಗಿಫ್ಟ್​ ಕಾರ್ಡ್​ಗಳ ರೀತಿ ಬಳಸಬಹುದು. ಕಾರ್ಡ್​ನ ಕೋಡ್​ ಅನ್ನು ಎಸ್​ಎಂಎಸ್ ಮೂಲಕ ಅಥವಾ ಕ್ಯೂ ಆರ್​ ಕೋಡ್ ಮೂಲಕ ಶೇರ್ ಮಾಡಬಹುದು. ಸದ್ಯಕ್ಕೆ ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಈ ವೋಚರ್ ಅನ್ನು ಬಳಸಲು ಅನುಮತಿ ನೀಡಲಾಗಿದೆ. ಮುಖ್ಯವಾಗಿ ಆರೋಗ್ಯ ಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ಈ ಡಿಜಿಟಲ್ ಸೇವೆಯನ್ನು ಚಾಲನೆಗೆ ತರಲಾಗಿದೆ. ಈ ವೋಚರ್ ಕೊಟ್ಟ ವ್ಯಕ್ತಿ ಇದನ್ನು ಯಾವ ಉದ್ದೇಶಕ್ಕಾಗ ನೀಡಿದ್ದಾರೋ ಅದಕ್ಕೆ ಮಾತ್ರ ಉಪಯೋಗಿಸಲು ಸಾಧ್ಯವಿರುತ್ತದೆ.

ಸ್ಮಾರ್ಟ್​ಫೋನ್ ಇಲ್ಲದವರು ಎಸ್​ಎಂಎಸ್ ಅಥವಾ ಕ್ಯೂ ಆರ್ ಕೋಡ್ ಬಳಕೆ ಮಾಡಿ ಹಣವನ್ನು ಪಾವತಿ ಮಾಡುವ ಆಯ್ಕೆ ಇದರಲ್ಲಿದೆ. ಇದರಿಂದ ಇಂಟರ್ನೆಟ್ ವ್ಯವಸ್ಥೆ ಇಲ್ಲದ ಫೋನ್​ಗಳನ್ನು ಬಳಸುವವರಿಗೆ ಕೂಡ ಡಿಜಿಟಲ್ ಪೇಮೆಂಟ್​ಗೆ ಅನುಕೂಲವಾಗಲಿದೆ. ನೆಟ್ ಬ್ಯಾಂಕಿಂಗ್, ಆನ್​ಲೈನ್ ಪೇಮೆಂಟ್ ಆ್ಯಪ್​ಗಳನ್ನು ಬಳಸದೆ ಸುಲಭವಾಗಿ ಹಣ ಪಾವತಿ ಮಾಡುವ ಆಯ್ಕೆಯೇ ಇ-ರುಪಿ. ಇದು ಇ-ವೋಚರ್ ಆಧಾರಿತವಾಗಿ ಕಾರ್ಯ ನಿರ್ವಹಿಸಲಿದೆ.

ಹಣಕಾಸು ಸೇವೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಹಯೋಗದಲ್ಲಿ ಉ-ರುಪಿಯನ್ನು ನ್ಯಾಷನಲ್ ಪೇಮೆಂಟ್ಸ್​ ಕಾರ್ಪೋರೇಷನ್ ಆಫ್ ಇಂಡಿಯಾ ಅಭಿವೃದ್ಧಿಪಡಿಸಿದೆ. ಫೋನ್ ಪೇ, ಗೂಗಲ್ ಪೇ, ಪೇಟಿಎಂಗಳಿಗೆ ಇರುವಂತೆ ಇದಕ್ಕೂ ಯುಪಿಐ ಐಡಿ ಇರಲಿದೆ. ಕ್ಯೂಆರ್​ ಕೋಟ್ ಅಥವಾ ಎಸ್​ಎಂಎಸ್ ಆಧಾರಿತವಾದ ಇ-ವೋಚರ್ ಮೂಲಕ ಮೊಬೈಲ್ ಬಳಕೆದಾರರು ಹಣ ಪಾವತಿ ಮಾಡಬಹುದು.

ಕಾರ್ಪೋರೇಟ್ ಸಂಸ್ಥೆಗಳು ತಮ್ಮ ಸಿಬ್ಬಂದಿಗೆ ಈ ವೋಚರ್​ಗಳನ್ನು ನೀಡಬಹುದು. ಎಸ್​ಬಿಐ, ಹೆಚ್​ಡಿಎಫ್​ಸಿ, ಕೆನರಾ, ಆ್ಯಕ್ಸಿಸ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಇಂಡಸ್ ಇಂಡ್, ಐಸಿಐಸಿಐ ಬ್ಯಾಂಕ್​ಗಳಲ್ಲಿ ಈ ಇ-ರುಪಿ ವ್ಯವಸ್ಥೆಯಿದೆ.

ಇದನ್ನೂ ಓದಿ: e- RUPI: ಪ್ರಧಾನಿ ನರೇಂದ್ರ ಮೋದಿಯಿಂದ ಆಗಸ್ಟ್ 2ಕ್ಕೆ ಇ-ರುಪಿಗೆ ಚಾಲನೆ; ಏನಿದರ ವೈಶಿಷ್ಟ್ಯ ತಿಳಿಯಿರಿ

ಏನಿದು e-RUPI ವೋಚರ್? ಇದರ ಅನುಕೂಲಗಳೇನು? ಯಾವ ಬ್ಯಾಂಕ್​ಗಳಲ್ಲಿ ಸಿಗುತ್ತವೆ?

(E RUPI: Prime Minister Narendra Modi Launches E-RUPI Digital Voucher Based Digital Payment System Today)

Published On - 5:18 pm, Mon, 2 August 21

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ