AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್​ ವಿಶ್ವ ದಾಖಲೆ ಮಾಡಿದೆ: ಅಶ್ವಿನಿ ವೈಷ್ಣವ್

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್​ ವಿಶ್ವ ದಾಖಲೆ ಮಾಡಿದೆ ಎಂದು ಕೇಂದ್ರ ರೈಲ್ವೆ, ಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಹೇಳಿದ್ದಾರೆ.  ಯುಪಿಎ ಸರ್ಕಾರದ ಅವಧಿಯಲ್ಲಿನ 2ಜಿ ಹಗರಣವನ್ನು ಎಂದೂ ನೆನಪಿಸಿಕೊಳ್ಳಬೇಡಿ ಎಂದರು. ನರೇಂದ್ರ ಮೋದಿ(Narendra Modi) ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತ ದೂರಸಂಪರ್ಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ಕುರಿತು ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿದ್ದಾರೆ.

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್​ ವಿಶ್ವ ದಾಖಲೆ ಮಾಡಿದೆ: ಅಶ್ವಿನಿ ವೈಷ್ಣವ್
ಅಶ್ವಿನಿ ವೈಷ್ಣವ್Image Credit source: Indian Express
ನಯನಾ ರಾಜೀವ್
|

Updated on: Dec 14, 2023 | 9:52 AM

Share

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್​ ವಿಶ್ವ ದಾಖಲೆ ಮಾಡಿದೆ ಎಂದು ಕೇಂದ್ರ ರೈಲ್ವೆ, ಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಹೇಳಿದ್ದಾರೆ.  ಯುಪಿಎ ಸರ್ಕಾರದ ಅವಧಿಯಲ್ಲಿನ 2ಜಿ ಹಗರಣವನ್ನು ಎಂದೂ ನೆನಪಿಸಿಕೊಳ್ಳಬೇಡಿ ಎಂದರು. ನರೇಂದ್ರ ಮೋದಿ(Narendra Modi) ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತ ದೂರಸಂಪರ್ಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ಕುರಿತು ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿದ್ದಾರೆ.

ಆದರೆ ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ದೂರಸಂಪರ್ಕ ಕ್ಷೇತ್ರವು ಅಭಿವೃದ್ಧಿ ಹೊಂದುತ್ತಿದೆ. ಮೋದಿ ಸರ್ಕಾರವು ಟೆಲಿಕಾಂ ಕ್ಷೇತ್ರವನ್ನು ಸನ್‌ರೈಸ್ ಸೆಕ್ಟರ್‌ಗೆ ಕೊಂಡೊಯ್ಯುತ್ತಿದ್ದಾರೆ ಎಂದಿದ್ದಾರೆ.

ಇಂದು, ಟೆಲಿಕಾಂ ಕ್ಷೇತ್ರದಲ್ಲಿ ಬೆಳವಣಿಗೆ ಮತ್ತು ಹೂಡಿಕೆ ಮತ್ತು ಪಾರದರ್ಶಕತೆ ಇದೆ. ದೇಶದಲ್ಲಿ ಮಾರಾಟವಾಗುವ ಒಟ್ಟು ಸ್ಮಾರ್ಟ್‌ಫೋನ್‌ಗಳಲ್ಲಿ ಶೇಕಡಾ 30-35 ರಷ್ಟು 5G ಸಂವಹನ ಸಾಮರ್ಥ್ಯವನ್ನು ಹೊಂದಿವೆ ಎಂದು ವರದಿಯೊಂದು ತಿಳಿಸಿದೆ. ಭಾರತವು 2029 ರ ವೇಳೆಗೆ 6G ನೆಟ್‌ವರ್ಕ್ ಮೂಲಸೌಕರ್ಯವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ವರ್ಷದ ಮಾರ್ಚ್‌ನಲ್ಲಿ ಹೇಳಿದ್ದರು.

ಮತ್ತಷ್ಟು ಓದಿ: Emergency Alert: ಟೆಲಿಕಾಂ ಕಂಪನಿಯಿಂದ ಬಳಕೆದಾರರಿಗೆ ಫ್ಲ್ಯಾಶ್ ಎಚ್ಚರಿಕೆ ಸಂದೇಶ

OTT (ಓವರ್-ದಿ-ಟಾಪ್) ಘಟಕಗಳಿಂದ ನೆಟ್‌ವರ್ಕ್ ಬಳಕೆಯ ಶುಲ್ಕಗಳನ್ನು ವಿಧಿಸುವ ಪ್ರಸ್ತಾಪದ ಕುರಿತು ಪ್ರಶ್ನೆಗಳಿಗೆ ಪ್ರತ್ಯುತ್ತರಿಸುವಾಗ ಭಾರತದಲ್ಲಿ ನೆಟ್ ನ್ಯೂಟ್ರಾಲಿಟಿ ತತ್ವವು ಉತ್ತಮವಾಗಿದೆ ಎಂದು ವೈಷ್ಣವ್ ಹೇಳಿದರು.

ಒಂದೆರಡು ಕಂಪನಿಗಳು ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸುತ್ತಿವೆ ಎಂಬ ಗೌರವ್ ಗೊಗೊಯ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ವೈಷ್ಣವ್ ಅವರು ಯುಪಿಎ ಅವಧಿಯಲ್ಲಿ ನಡೆದ 2G ಹಗರಣ ಮತ್ತು ಟೆಲಿಕಾಂ ಕ್ಷೇತ್ರವನ್ನು ವಿಶೇಷವಾಗಿ BSNLನ್ನು ಸರ್ಕಾರವು ಹಾಳುಮಾಡಿರುವುದು ಎಲ್ಲರಿಗೂ ನೆನಪಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ