AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​ ಸೌಮ್ಯ ಲಕ್ಷಣಗಳನ್ನು ಉಂಟು ಮಾಡುವ ವೈರಸ್​ ಎಂಬ ತಪ್ಪು ಕಲ್ಪನೆ ಬೇಡ, ನಿರ್ಲಕ್ಷ್ಯವೂ ಬೇಡ: ಡಾ. ಅನುರಾಗ್​ ಅಗರ್​ವಾಲ್​

Omicron Updates: ಇನ್ನೊಂದೆಡೆ ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಡಾ. ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಕೂಡ ಒಮಿಕ್ರಾನ್​ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ 77ಕ್ಕೂ ಅಧಿಕ ದೇಶಗಳಲ್ಲಿ ಒಮಿಕ್ರಾನ್​ ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.

ಒಮಿಕ್ರಾನ್​ ಸೌಮ್ಯ ಲಕ್ಷಣಗಳನ್ನು ಉಂಟು ಮಾಡುವ ವೈರಸ್​ ಎಂಬ ತಪ್ಪು ಕಲ್ಪನೆ ಬೇಡ, ನಿರ್ಲಕ್ಷ್ಯವೂ ಬೇಡ: ಡಾ. ಅನುರಾಗ್​ ಅಗರ್​ವಾಲ್​
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Dec 16, 2021 | 12:44 PM

ಒಮಿಕ್ರೋನ್​ ರೂಪಾಂತರ (Omicron Variant) ಕೇವಲ ಸೌಮ್ಯವಾದ ಲಕ್ಷಣಗಳನ್ನು ಉಂಟುಮಾಡುತ್ತದೆ. ಗಂಭೀರ ಸ್ವರೂಪದ ಕಾಯಿಲೆಯನ್ನು ತರುವುದಿಲ್ಲ ಎಂಬುದು ತಪ್ಪು ಕಲ್ಪನೆ ಎಂದು ದೇಶದ ಉನ್ನತ ಜಿನೋಮ್​ ಸಿಕ್ವೆನ್ಸಿಂಗ್​ ಇನ್​ಸ್ಟಿಟ್ಯೂಟ್​ನ ಉನ್ನತ ವಿಜ್ಞಾನಿ ಡಾ.ಅನುರಾಗ್​ ಅಗರ್​ವಾಲ್​ ಹೇಳಿದ್ದಾಗಿ ನ್ಯೂಸ್ 18 ವರದಿ ಮಾಡಿದೆ. ಕೊರೊನಾದ ಯಾವುದೇ ರೂಪಾಂತರ ಪ್ರಾರಂಭಿಕ ಹಂತದಲ್ಲಿ ಸೌಮ್ಯ ಲಕ್ಷಣಗಳನ್ನು ಉಂಟು ಮಾಡುತ್ತದೆ.  ಈ ಹೊಸ ತಳಿಯ ಸಂಪೂರ್ಣ ಲಕ್ಷಣ, ಪ್ರಭಾವಗಳು ಡಿಸೆಂಬರ್​ ಅಂತ್ಯದ ಹೊತ್ತಿಗೆ ಚೆನ್ನಾಗಿ ತಿಳಿಯಬಹುದು ಎಂದು ಅವರು ತಿಳಿಸಿದ್ದಾರೆ.  ಅಷ್ಟೇ ಅಲ್ಲ, ಸೌಮ್ಯ ಲಕ್ಷಣಗಳ ವೈರಸ್​ ಎಂದು ನಿರ್ಲಕ್ಯ ಮಾಡುವಂತಿಲ್ಲ. ಇಡೀ ಆರೋಗ್ಯ ವ್ಯವಸ್ಥೆ ಹಾಳುಗೆಡವಲು ಅದೇ ಸಾಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. 

ಒಂದು ಸಾಮಾನ್ಯ ವೈರಸ್​ ಕೂಡ ಭಾರತಕ್ಕೆ ಕಾಲಿಟ್ಟ ಮೇಲೆ ಅದು ದೊಡ್ಡದಾಗಿ ಕಾಣಿಸಿಕೊಳ್ಳುತ್ತದೆ. ಅದಕ್ಕೆ ಕಾರಣ ಇಲ್ಲಿನ ಜನಸಂಖ್ಯೆ. ಹಾಗಾಗಿ ಇಲ್ಲಿ ಗಂಭೀರ ಪರಿಸ್ಥಿತಿ ತಲುಪುವವರ ಸಂಖ್ಯೆಯೂ ಹೆಚ್ಚಾಗುತ್ತದೆ ಎಂದು ಅನುರಾಗ್​ ಅಗರ್​ವಾಲ್​ ವಿವರಿಸಿದ್ದಾರೆ.  ಹಾಗೇ, ಡಿಸೆಂಬರ್ ಅಂತ್ಯದವರೆಗೂ ಏನೇನೂ ಹೇಳಲು ಸಾಧ್ಯವಿಲ್ಲ. ಒಮಿಕ್ರಾನ್​ ಮೊದಲು ಯುವಜನರಿಗೇ ತಗಲುತ್ತಿರಲು ಕಾರಣ ಅವರು ಮನೆಯಿಂದ ಹೊರಗೆ ಬರುವುದು ಹೆಚ್ಚು. ಅತ್ತಿಂದತ್ತ ಚಲಿಸುತ್ತಾರೆ. ನಂತರ ಮನೆಗೆ ಹೋಗಿ, ಮನೆಯಲ್ಲಿರುವ ಮಕ್ಕಳು, ಹಿರಿಯರಿಗೂ ಹಿಡಿಸುತ್ತಾರೆ ಎಂದು ಹೇಳಿದ್ದಾರೆ.

ಮಾಸ್ಕ್​ ಮಹತ್ವ ಅರಿಯಬೇಕು ಇನ್ನೊಂದೆಡೆ ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಡಾ. ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಕೂಡ ಒಮಿಕ್ರಾನ್​ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ 77ಕ್ಕೂ ಅಧಿಕ ದೇಶಗಳಲ್ಲಿ ಒಮಿಕ್ರಾನ್​ ಕಾಣಿಸಿಕೊಂಡಿದೆ. ಕೊರೊನಾದ ಇನ್ಯಾವುದೇ ತಳಿಯ ಪ್ರಸರಣದ ಪ್ರಮಾಣಕ್ಕಿಂತಲೂ ಒಮಿಕ್ರಾನ್​ ಹರಡುವಿಕೆ ಪ್ರಮಾಣ ಅತ್ಯಂತ ಹೆಚ್ಚಾಗಿದೆ. ಈ ಒಮಿಕ್ರಾನ್​ ಬಗ್ಗೆ ಇನ್ನೂ ಜನರಲ್ಲಿ ಅರಿವು ಸರಿಯಾಗಿ ಮೂಡಿಲ್ಲ. ಆದರೆ ಕೇವಲ ಮುನ್ನೆಚ್ಚರಿಕಾ ಕ್ರಮಗಳು ಮಾತ್ರ ಸೋಂಕು ನಿಯಂತ್ರಣಕ್ಕೆ ಸಹಾಯವಾಗಬಲ್ಲವು ಎಂಬುದನ್ನು ಜನಸಾಮಾನ್ಯರು ಅರ್ಥ ಮಾಡಿಕೊಳ್ಳಬೇಕು. ಮಾಸ್ಕ್​ನ್ನು ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಆಶ್ಲೆ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ ಮತಾಂತರ ಯತ್ನ ಆರೋಪ, ಶಾಲೆ ವಿರುದ್ದ ಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ

 

Published On - 12:44 pm, Thu, 16 December 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್