AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquak: ಒಡಿಶಾದ ಕೊರಾಪುಟ್‌ನಲ್ಲಿ 3.8 ತೀವ್ರತೆಯ ಭೂಕಂಪ

ಇಂದು ಮುಂಜಾನೆ ಒಡಿಶಾದ ಕೊರಾಪುಟ್‌ನಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ನೆಲದಿಂದ 5 ಕಿಲೋಮೀಟರ್ ಕೆಳಗೆ ಇದೆ.

Earthquak: ಒಡಿಶಾದ ಕೊರಾಪುಟ್‌ನಲ್ಲಿ 3.8 ತೀವ್ರತೆಯ ಭೂಕಂಪ
ಭೂಕಂಪ
ಅಕ್ಷಯ್​ ಪಲ್ಲಮಜಲು​​
|

Updated on: Mar 03, 2023 | 11:59 AM

Share

ಭುವನೇಶ್ವರ್: ಇಂದು (ಮಾ.3) ಮುಂಜಾನೆ ಒಡಿಶಾ(Odisha) ಕೊರಾಪುಟ್‌ನಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ನೆಲದಿಂದ 5 ಕಿಲೋಮೀಟರ್ ಕೆಳಗೆ ಸಂಭವಿಸಿದೆ. 03-03-2023 ರಂದು ಸಂಭವಿಸಿದ ಭೂಕಂಪ:3.8, 03-03-2023, 05:05:44 IST, ಲ್ಯಾಟ್: 18.83 ಮತ್ತು ಉದ್ದ: 83.21, ಆಳ: 5 ಕಿಮೀ ,ಸ್ಥಳ: ಕೊರಾಪುಟ್ ಒಡಿಶಾ ಎಂದು ಭೂಕಂಪಶಾಸ್ತ್ರ ಕೇಂದ್ರ ಟ್ವೀಟ್ ಮಾಡಿದ್ದಾರೆ.

ಲಘು ಭೂಕಂಪನದ ತೀವ್ರತೆಯಿಂದಾಗಿ ರಾಜ್ಯದಲ್ಲಿ ಯಾವುದೇ ಆಸ್ತಿಪಾಸ್ತಿ ಅಥವಾ ಪ್ರಾಣ ಹಾನಿ ಸಂಭವಿಸಿಲ್ಲ. ಭೂಕಂಪದ ಕೇಂದ್ರಬಿಂದು ಛತ್ತೀಸ್‌ಗಢದ ಜಗದಲ್‌ಪುರದಿಂದ ಪೂರ್ವಕ್ಕೆ 129 ಕಿಲೋಮೀಟರ್ ದೂರದಲ್ಲಿದೆ. ನಾರಾಯಣಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸ್ಥಳೀಯ ಜನರಿಗೆ ಭೂಕಂಪದ ಅನುಭವವಾಗಿದೆ. ಇದರಿಂದ ಅಅಲ್ಲಿಯ ಜನರು ಭಯಭೀತರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸೌಮ್ಯವಾದ ಕಂಪನದಿಂದಾಗಿ, ಜನರು ಭಯಗೊಂಡು ತಮ್ಮ ಮನೆಗಳಿಂದ ಹೊರಬಂದಿದ್ದಾರೆ.

ಇದನ್ನೂ ಓದಿ: Earthquake: ಗುಜರಾತ್​ನಲ್ಲಿ 4.3 ತೀವ್ರತೆಯ ಭೂಕಂಪ; ಭಾರತದಲ್ಲಿ ಹೆಚ್ಚು ಕಂಪನ ಸೂಕ್ಷ್ಮ ಪ್ರದೇಶಗಳು ಎಲ್ಲಿವೆ?

ಒಡಿಶಾದ ಕೆಲವು ಜಿಲ್ಲೆಗಳಲ್ಲಿ ಭೂಕಂಪನ ಸಂಭವಿಸಿದೆ. ಒಡಿಶಾದ ಅಂಗುಲ್ ಜಿಲ್ಲೆ ತಾಲ್ಚೆರ್ ಮತ್ತು ಅದರ ಹತ್ತಿರದ ಪ್ರದೇಶಗಳನ್ನು ಇತ್ತೀಚೆಗೆ ವಲಯ III ಎಂದು ಗುರುತಿಸಲಾಗಿದೆ, ಅಂದರೆ ಅವು ಮಧ್ಯಮ ಹಾನಿ ಅಪಾಯದ ವಲಯದ ಅಡಿಯಲ್ಲಿ ಬರುತ್ತವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ