AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಂಪಿಸಿದ ಭೂಮಿ; 4.1 ತೀವ್ರತೆ ದಾಖಲು

Arunachal Pradesh: ಸೆಪ್ಟೆಂಬರ್​ 19ರಂದು ಅರುಣಾಚಲ ಪ್ರದೇಶದ ಚಾಂಗ್ಲಾಂಗ್​ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಕಂಪನವಾಗಿತ್ತು.

Earthquake: ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಂಪಿಸಿದ ಭೂಮಿ; 4.1 ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 02, 2021 | 11:49 AM

Share

ಇಟಾನಗರ್: ಅರುಣಾಚಲ ಪ್ರದೇಶದ ಬಸಾರ್​ನಲ್ಲಿ ಇಂದು ಬೆಳಗ್ಗೆ 10.15ರ ಹೊತ್ತಿಗೆ ಭೂಮಿ ಕಂಪಿಸಿದೆ. ಭೂಕಂಪದ (Earthquake) ತೀವ್ರತೆ ರಿಕ್ಟರ್ ಮಾಪಕ (Richter scale)ದಲ್ಲಿ 4.1ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದ್ದು, ಬಸಾರ್​​ನಿಂದ ಉತ್ತರ-ವಾಯುವ್ಯಕ್ಕೆ 143 ಕಿಮೀ ದೂರದಲ್ಲಿ, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದೂ ಮಾಹಿತಿ ನೀಡಿದೆ. ಭೂಕಂಪನದಿಂದ ಯಾವುದೇ ಆಸ್ತಿಪಾಸ್ತಿ, ಜೀವ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಈ ಹಿಂದೆ ಸೆಪ್ಟೆಂಬರ್​ 25ರಂದು ಅರುಣಾಚಲ ಪ್ರದೇಶದಲ್ಲಿ ಭೂಕಂಪವಾಗಿತ್ತು. ಅಂದು ಪ್ಯಾಂಗಿನ್​ನ ಉತ್ತರದಿಂದ ಈಶಾನ್ಯಕ್ಕೆ 237ಕಿಮೀ ದೂರದಲ್ಲಿ ಬೆಳಗ್ಗೆ 10.11ಗಂಟೆಗೆ ಭೂಮಿ ಕಂಪನವಾಗಿತ್ತು. ಅಂದು 4.5ರಷ್ಟು ತೀವ್ರತೆ ದಾಖಲಾಗಿದ್ದಾಗಿ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿತ್ತು. ಅವತ್ತೂ ಸಹ ಯಾವುದೇ ಹಾನಿಯಾಗಿರಲಿಲ್ಲ.  ಅದಕ್ಕೂ ಮೊದಲು ಸೆಪ್ಟೆಂಬರ್​ 19ರಂದು ಅರುಣಾಚಲ ಪ್ರದೇಶದ ಚಾಂಗ್ಲಾಂಗ್​ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಅಂದು ಚಾಂಗ್ಲಾಂಗ್​​ನಿಂದ ಉತ್ತರದಿಂದ ಪೂರ್ವಕ್ಕೆ 70 ಕಿಮೀ ದೂರದಲ್ಲಿ, ಮಧ್ಯಾಹ್ನ 3.6ಗಂಟೆಗೆ ಭೂಮಿ ನಡುಗಿತ್ತು. ಹೀಗೆ ಅರುಣಾಚಲ ಪ್ರದೇಶದಲ್ಲಿ ಪದೇಪದೆ ಭೂಕಂಪನವಾಗುತ್ತಿರುವುದು ಸಹಜವಾಗಿಯೇ ಆತಂಕ ಮೂಡಿಸಿದೆ.

ಇದನ್ನೂ ಓದಿ:  Gandhi Jayanti 2021 : ‘ಭಿನ್ನಾಭಿಪ್ರಾಯಗಳು ವಿಷಯಗಳನ್ನು ಕುರಿತು ಇರಬೇಕೇ ಹೊರತು, ವ್ಯಕ್ತಿಗಳ ನಡುವೆ ಇರಬಾರದು‘

Video: 1000 ಕೆಜಿ ತೂಕದ ಖಾದಿ ತ್ರಿವರ್ಣಧ್ವಜ ಲೇಹ್​​ನಲ್ಲಿ ಅನಾವರಣ; ವಿಶ್ವದಲ್ಲೇ ಅತ್ಯಂತ ದೊಡ್ಡ ರಾಷ್ಟ್ರಧ್ವಜವಿದು

Published On - 11:47 am, Sat, 2 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ