AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಂಪಿಸಿದ ಭೂಮಿ; 4.1 ತೀವ್ರತೆ ದಾಖಲು

Arunachal Pradesh: ಸೆಪ್ಟೆಂಬರ್​ 19ರಂದು ಅರುಣಾಚಲ ಪ್ರದೇಶದ ಚಾಂಗ್ಲಾಂಗ್​ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಕಂಪನವಾಗಿತ್ತು.

Earthquake: ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಂಪಿಸಿದ ಭೂಮಿ; 4.1 ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 02, 2021 | 11:49 AM

Share

ಇಟಾನಗರ್: ಅರುಣಾಚಲ ಪ್ರದೇಶದ ಬಸಾರ್​ನಲ್ಲಿ ಇಂದು ಬೆಳಗ್ಗೆ 10.15ರ ಹೊತ್ತಿಗೆ ಭೂಮಿ ಕಂಪಿಸಿದೆ. ಭೂಕಂಪದ (Earthquake) ತೀವ್ರತೆ ರಿಕ್ಟರ್ ಮಾಪಕ (Richter scale)ದಲ್ಲಿ 4.1ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದ್ದು, ಬಸಾರ್​​ನಿಂದ ಉತ್ತರ-ವಾಯುವ್ಯಕ್ಕೆ 143 ಕಿಮೀ ದೂರದಲ್ಲಿ, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದೂ ಮಾಹಿತಿ ನೀಡಿದೆ. ಭೂಕಂಪನದಿಂದ ಯಾವುದೇ ಆಸ್ತಿಪಾಸ್ತಿ, ಜೀವ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಈ ಹಿಂದೆ ಸೆಪ್ಟೆಂಬರ್​ 25ರಂದು ಅರುಣಾಚಲ ಪ್ರದೇಶದಲ್ಲಿ ಭೂಕಂಪವಾಗಿತ್ತು. ಅಂದು ಪ್ಯಾಂಗಿನ್​ನ ಉತ್ತರದಿಂದ ಈಶಾನ್ಯಕ್ಕೆ 237ಕಿಮೀ ದೂರದಲ್ಲಿ ಬೆಳಗ್ಗೆ 10.11ಗಂಟೆಗೆ ಭೂಮಿ ಕಂಪನವಾಗಿತ್ತು. ಅಂದು 4.5ರಷ್ಟು ತೀವ್ರತೆ ದಾಖಲಾಗಿದ್ದಾಗಿ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿತ್ತು. ಅವತ್ತೂ ಸಹ ಯಾವುದೇ ಹಾನಿಯಾಗಿರಲಿಲ್ಲ.  ಅದಕ್ಕೂ ಮೊದಲು ಸೆಪ್ಟೆಂಬರ್​ 19ರಂದು ಅರುಣಾಚಲ ಪ್ರದೇಶದ ಚಾಂಗ್ಲಾಂಗ್​ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಅಂದು ಚಾಂಗ್ಲಾಂಗ್​​ನಿಂದ ಉತ್ತರದಿಂದ ಪೂರ್ವಕ್ಕೆ 70 ಕಿಮೀ ದೂರದಲ್ಲಿ, ಮಧ್ಯಾಹ್ನ 3.6ಗಂಟೆಗೆ ಭೂಮಿ ನಡುಗಿತ್ತು. ಹೀಗೆ ಅರುಣಾಚಲ ಪ್ರದೇಶದಲ್ಲಿ ಪದೇಪದೆ ಭೂಕಂಪನವಾಗುತ್ತಿರುವುದು ಸಹಜವಾಗಿಯೇ ಆತಂಕ ಮೂಡಿಸಿದೆ.

ಇದನ್ನೂ ಓದಿ:  Gandhi Jayanti 2021 : ‘ಭಿನ್ನಾಭಿಪ್ರಾಯಗಳು ವಿಷಯಗಳನ್ನು ಕುರಿತು ಇರಬೇಕೇ ಹೊರತು, ವ್ಯಕ್ತಿಗಳ ನಡುವೆ ಇರಬಾರದು‘

Video: 1000 ಕೆಜಿ ತೂಕದ ಖಾದಿ ತ್ರಿವರ್ಣಧ್ವಜ ಲೇಹ್​​ನಲ್ಲಿ ಅನಾವರಣ; ವಿಶ್ವದಲ್ಲೇ ಅತ್ಯಂತ ದೊಡ್ಡ ರಾಷ್ಟ್ರಧ್ವಜವಿದು

Published On - 11:47 am, Sat, 2 October 21

Follow Us
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್