AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಂಪಿಸಿದ ಭೂಮಿ; 4.1 ತೀವ್ರತೆ ದಾಖಲು

Arunachal Pradesh: ಸೆಪ್ಟೆಂಬರ್​ 19ರಂದು ಅರುಣಾಚಲ ಪ್ರದೇಶದ ಚಾಂಗ್ಲಾಂಗ್​ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಕಂಪನವಾಗಿತ್ತು.

Earthquake: ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಂಪಿಸಿದ ಭೂಮಿ; 4.1 ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 02, 2021 | 11:49 AM

Share

ಇಟಾನಗರ್: ಅರುಣಾಚಲ ಪ್ರದೇಶದ ಬಸಾರ್​ನಲ್ಲಿ ಇಂದು ಬೆಳಗ್ಗೆ 10.15ರ ಹೊತ್ತಿಗೆ ಭೂಮಿ ಕಂಪಿಸಿದೆ. ಭೂಕಂಪದ (Earthquake) ತೀವ್ರತೆ ರಿಕ್ಟರ್ ಮಾಪಕ (Richter scale)ದಲ್ಲಿ 4.1ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದ್ದು, ಬಸಾರ್​​ನಿಂದ ಉತ್ತರ-ವಾಯುವ್ಯಕ್ಕೆ 143 ಕಿಮೀ ದೂರದಲ್ಲಿ, ಭೂಮಿಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದೂ ಮಾಹಿತಿ ನೀಡಿದೆ. ಭೂಕಂಪನದಿಂದ ಯಾವುದೇ ಆಸ್ತಿಪಾಸ್ತಿ, ಜೀವ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಈ ಹಿಂದೆ ಸೆಪ್ಟೆಂಬರ್​ 25ರಂದು ಅರುಣಾಚಲ ಪ್ರದೇಶದಲ್ಲಿ ಭೂಕಂಪವಾಗಿತ್ತು. ಅಂದು ಪ್ಯಾಂಗಿನ್​ನ ಉತ್ತರದಿಂದ ಈಶಾನ್ಯಕ್ಕೆ 237ಕಿಮೀ ದೂರದಲ್ಲಿ ಬೆಳಗ್ಗೆ 10.11ಗಂಟೆಗೆ ಭೂಮಿ ಕಂಪನವಾಗಿತ್ತು. ಅಂದು 4.5ರಷ್ಟು ತೀವ್ರತೆ ದಾಖಲಾಗಿದ್ದಾಗಿ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿತ್ತು. ಅವತ್ತೂ ಸಹ ಯಾವುದೇ ಹಾನಿಯಾಗಿರಲಿಲ್ಲ.  ಅದಕ್ಕೂ ಮೊದಲು ಸೆಪ್ಟೆಂಬರ್​ 19ರಂದು ಅರುಣಾಚಲ ಪ್ರದೇಶದ ಚಾಂಗ್ಲಾಂಗ್​ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಅಂದು ಚಾಂಗ್ಲಾಂಗ್​​ನಿಂದ ಉತ್ತರದಿಂದ ಪೂರ್ವಕ್ಕೆ 70 ಕಿಮೀ ದೂರದಲ್ಲಿ, ಮಧ್ಯಾಹ್ನ 3.6ಗಂಟೆಗೆ ಭೂಮಿ ನಡುಗಿತ್ತು. ಹೀಗೆ ಅರುಣಾಚಲ ಪ್ರದೇಶದಲ್ಲಿ ಪದೇಪದೆ ಭೂಕಂಪನವಾಗುತ್ತಿರುವುದು ಸಹಜವಾಗಿಯೇ ಆತಂಕ ಮೂಡಿಸಿದೆ.

ಇದನ್ನೂ ಓದಿ:  Gandhi Jayanti 2021 : ‘ಭಿನ್ನಾಭಿಪ್ರಾಯಗಳು ವಿಷಯಗಳನ್ನು ಕುರಿತು ಇರಬೇಕೇ ಹೊರತು, ವ್ಯಕ್ತಿಗಳ ನಡುವೆ ಇರಬಾರದು‘

Video: 1000 ಕೆಜಿ ತೂಕದ ಖಾದಿ ತ್ರಿವರ್ಣಧ್ವಜ ಲೇಹ್​​ನಲ್ಲಿ ಅನಾವರಣ; ವಿಶ್ವದಲ್ಲೇ ಅತ್ಯಂತ ದೊಡ್ಡ ರಾಷ್ಟ್ರಧ್ವಜವಿದು

Published On - 11:47 am, Sat, 2 October 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ