AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಸತತ 2ದಿನಗಳಿಂದ ಭೂಕಂಪ; ಇಂದು 3.8ರಷ್ಟು ತೀವ್ರತೆ ದಾಖಲು

Manipur Earthquake: ಇತ್ತೀಚೆಗೆ ಭಾರತದಲ್ಲಿ ಅಲ್ಲಲ್ಲಿ ಭೂಕಂಪನದ ಪ್ರಮಾಣ ಜಾಸ್ತಿಯಾಗಿದೆ. ಆದರೆ ದೊಡ್ಡಮಟ್ಟದ ಹಾನಿಗಳು ಆಗಿಲ್ಲ. ಸಾಮಾನ್ಯವಾಗಿ ಭೂಮೇಲ್ಮೈನಿಂದ ಎಷ್ಟು ಕಿಮೀ ಆಳದಲ್ಲಿ ಕಂಪನವಾಗುತ್ತದೆ ಎಂಬುದರ ಆಧಾರದ ಮೇಲೆ ಹಾನಿಯ ಪ್ರಮಾಣವೂ ನಿರ್ಧರಿತವಾಗುತ್ತದೆ.

ಮಣಿಪುರದಲ್ಲಿ ಸತತ 2ದಿನಗಳಿಂದ ಭೂಕಂಪ; ಇಂದು 3.8ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 09, 2021 | 4:44 PM

Share

ಮಣಿಪುರದಲ್ಲಿ ಇಂದು ಮುಂಜಾನೆ ಭೂಕಂಪ (Earthquake) ಉಂಟಾಗಿದ್ದು, ರಿಕ್ಟರ್​ ಮಾಪಕದಲ್ಲಿ 3.8ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ನಿನ್ನೆಯೂ ಕೂಡ ಮಣಿಪುರದ ಉಖ್ರುಲ್​​ನಲ್ಲಿ ಭೂಕಂಪ ಉಂಟಾಗಿತ್ತು. ಅದರ ತೀವ್ರತೆ 4.4ರಷ್ಟಿತ್ತು. ಇಂದು ಬೆಳಗ್ಗೆ 9.47ರ ಹೊತ್ತಿಗೆ ಮಣಿಪುರದ ಶಿರುಯಿಯಲ್ಲಿ ಭೂಕಂಪ ಉಂಟಾಗಿದೆ. ಅಂದರೆ ಶಿರುಯಿಯಿಂದ ಈಶಾನ್ಯಕ್ಕೆ 62 ಕಿಮೀ ದೂರದಲ್ಲಿ ಭೂ ಮೇಲ್ಮೈ ಆಳದಿಂದ 60 ಕಿಮೀ ಆಳದಲ್ಲಿ ಭೂಮಿ ನಡುಗಿದೆ.   

ಅದಕ್ಕೂ ಮೊದಲು ಕಳೆದ ಗುರುವಾರವೂ ಕೂಡ ಮಣಿಪುರದಲ್ಲಿ ಭೂಕಂಪನ ಉಂಟಾಗಿತ್ತು. ಅಂದು ಮೊಯಿರಂಗ್​ ಸಮೀಪ ಸುಮಾರು 3.5 ರಷ್ಟು ತೀವ್ರತೆಯಲ್ಲಿ, ಭೂ ಮೇಲ್ಮೈಯಿಂದ 57 ಕಿಮೀ ಆಳದಲ್ಲಿ ಭೂಮಿ ನಡುಗಿತ್ತು.  ಆದರೆ ಇದುವರೆಗೆ ಮೂರ್ನಾಲ್ಕು ಬಾರಿ ಭೂಕಂಪನವಾದರೂ ಕೂಡ ಯಾವುದೇ ದೊಡ್ಡ ಮಟ್ಟದ ಹಾನಿಯಾಗಿಲ್ಲ. ಯಾರ ಜೀವಕ್ಕೂ ಅಪಾಯ ಆಗಿಲ್ಲ.

ಇತ್ತೀಚೆಗೆ ಭಾರತದಲ್ಲಿ ಅಲ್ಲಲ್ಲಿ ಭೂಕಂಪನದ ಪ್ರಮಾಣ ಜಾಸ್ತಿಯಾಗಿದೆ. ಆದರೆ ದೊಡ್ಡಮಟ್ಟದ ಹಾನಿಗಳು ಆಗಿಲ್ಲ. ಸಾಮಾನ್ಯವಾಗಿ ಭೂಮೇಲ್ಮೈನಿಂದ ಎಷ್ಟು ಕಿಮೀ ಆಳದಲ್ಲಿ ಕಂಪನವಾಗುತ್ತದೆ ಎಂಬುದರ ಆಧಾರದ ಮೇಲೆ ಹಾನಿಯ ಪ್ರಮಾಣವೂ ನಿರ್ಧರಿತವಾಗುತ್ತದೆ. ಹಾಗೊಮ್ಮೆ ಪ್ರಬಲ ಭೂಕಂಪನವಾದರೆ ಕಟ್ಟಡಗಳು, ಅಣೆಕಟ್ಟುಗಳು, ಸೇತುವೆಗಳೆಲ್ಲ ಕುಸಿದು ಬೀಳುತ್ತವೆ. ಜನರ ಜೀವವೂ ಹೋಗುತ್ತದೆ. ಹಿಂದೆಲ್ಲ ಹಲವು ಬಾರಿ ಭಾರತದಲ್ಲಿ ಇಂಥ ದೊಡ್ಡಮಟ್ಟದ ಭೂಕಂಪಗಳು ಉಂಟಾಗಿದ್ದವು.

ಇದನ್ನೂ ಓದಿ: Covid Vaccines: ಭಾರತದಲ್ಲಿ ಬಳಕೆಯಾಗದೆ ಉಳಿದ ಕೊವಿಡ್ ಲಸಿಕೆಗಳ ಪ್ರಮಾಣ 15 ಕೋಟಿ!

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ