AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಸತತ 2ದಿನಗಳಿಂದ ಭೂಕಂಪ; ಇಂದು 3.8ರಷ್ಟು ತೀವ್ರತೆ ದಾಖಲು

Manipur Earthquake: ಇತ್ತೀಚೆಗೆ ಭಾರತದಲ್ಲಿ ಅಲ್ಲಲ್ಲಿ ಭೂಕಂಪನದ ಪ್ರಮಾಣ ಜಾಸ್ತಿಯಾಗಿದೆ. ಆದರೆ ದೊಡ್ಡಮಟ್ಟದ ಹಾನಿಗಳು ಆಗಿಲ್ಲ. ಸಾಮಾನ್ಯವಾಗಿ ಭೂಮೇಲ್ಮೈನಿಂದ ಎಷ್ಟು ಕಿಮೀ ಆಳದಲ್ಲಿ ಕಂಪನವಾಗುತ್ತದೆ ಎಂಬುದರ ಆಧಾರದ ಮೇಲೆ ಹಾನಿಯ ಪ್ರಮಾಣವೂ ನಿರ್ಧರಿತವಾಗುತ್ತದೆ.

ಮಣಿಪುರದಲ್ಲಿ ಸತತ 2ದಿನಗಳಿಂದ ಭೂಕಂಪ; ಇಂದು 3.8ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 09, 2021 | 4:44 PM

Share

ಮಣಿಪುರದಲ್ಲಿ ಇಂದು ಮುಂಜಾನೆ ಭೂಕಂಪ (Earthquake) ಉಂಟಾಗಿದ್ದು, ರಿಕ್ಟರ್​ ಮಾಪಕದಲ್ಲಿ 3.8ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ನಿನ್ನೆಯೂ ಕೂಡ ಮಣಿಪುರದ ಉಖ್ರುಲ್​​ನಲ್ಲಿ ಭೂಕಂಪ ಉಂಟಾಗಿತ್ತು. ಅದರ ತೀವ್ರತೆ 4.4ರಷ್ಟಿತ್ತು. ಇಂದು ಬೆಳಗ್ಗೆ 9.47ರ ಹೊತ್ತಿಗೆ ಮಣಿಪುರದ ಶಿರುಯಿಯಲ್ಲಿ ಭೂಕಂಪ ಉಂಟಾಗಿದೆ. ಅಂದರೆ ಶಿರುಯಿಯಿಂದ ಈಶಾನ್ಯಕ್ಕೆ 62 ಕಿಮೀ ದೂರದಲ್ಲಿ ಭೂ ಮೇಲ್ಮೈ ಆಳದಿಂದ 60 ಕಿಮೀ ಆಳದಲ್ಲಿ ಭೂಮಿ ನಡುಗಿದೆ.   

ಅದಕ್ಕೂ ಮೊದಲು ಕಳೆದ ಗುರುವಾರವೂ ಕೂಡ ಮಣಿಪುರದಲ್ಲಿ ಭೂಕಂಪನ ಉಂಟಾಗಿತ್ತು. ಅಂದು ಮೊಯಿರಂಗ್​ ಸಮೀಪ ಸುಮಾರು 3.5 ರಷ್ಟು ತೀವ್ರತೆಯಲ್ಲಿ, ಭೂ ಮೇಲ್ಮೈಯಿಂದ 57 ಕಿಮೀ ಆಳದಲ್ಲಿ ಭೂಮಿ ನಡುಗಿತ್ತು.  ಆದರೆ ಇದುವರೆಗೆ ಮೂರ್ನಾಲ್ಕು ಬಾರಿ ಭೂಕಂಪನವಾದರೂ ಕೂಡ ಯಾವುದೇ ದೊಡ್ಡ ಮಟ್ಟದ ಹಾನಿಯಾಗಿಲ್ಲ. ಯಾರ ಜೀವಕ್ಕೂ ಅಪಾಯ ಆಗಿಲ್ಲ.

ಇತ್ತೀಚೆಗೆ ಭಾರತದಲ್ಲಿ ಅಲ್ಲಲ್ಲಿ ಭೂಕಂಪನದ ಪ್ರಮಾಣ ಜಾಸ್ತಿಯಾಗಿದೆ. ಆದರೆ ದೊಡ್ಡಮಟ್ಟದ ಹಾನಿಗಳು ಆಗಿಲ್ಲ. ಸಾಮಾನ್ಯವಾಗಿ ಭೂಮೇಲ್ಮೈನಿಂದ ಎಷ್ಟು ಕಿಮೀ ಆಳದಲ್ಲಿ ಕಂಪನವಾಗುತ್ತದೆ ಎಂಬುದರ ಆಧಾರದ ಮೇಲೆ ಹಾನಿಯ ಪ್ರಮಾಣವೂ ನಿರ್ಧರಿತವಾಗುತ್ತದೆ. ಹಾಗೊಮ್ಮೆ ಪ್ರಬಲ ಭೂಕಂಪನವಾದರೆ ಕಟ್ಟಡಗಳು, ಅಣೆಕಟ್ಟುಗಳು, ಸೇತುವೆಗಳೆಲ್ಲ ಕುಸಿದು ಬೀಳುತ್ತವೆ. ಜನರ ಜೀವವೂ ಹೋಗುತ್ತದೆ. ಹಿಂದೆಲ್ಲ ಹಲವು ಬಾರಿ ಭಾರತದಲ್ಲಿ ಇಂಥ ದೊಡ್ಡಮಟ್ಟದ ಭೂಕಂಪಗಳು ಉಂಟಾಗಿದ್ದವು.

ಇದನ್ನೂ ಓದಿ: Covid Vaccines: ಭಾರತದಲ್ಲಿ ಬಳಕೆಯಾಗದೆ ಉಳಿದ ಕೊವಿಡ್ ಲಸಿಕೆಗಳ ಪ್ರಮಾಣ 15 ಕೋಟಿ!

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ