AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನ ತೇಜ್​ಪುರದಲ್ಲಿ ಮತ್ತೆ ನಡುಗಿದ ಭೂಮಿ; 3.7ರಷ್ಟು ತೀವ್ರತೆ ದಾಖಲು

ಅಸ್ಸಾಂನಲ್ಲಿ ಕಳೆದ ತಿಂಗಳು ಕೂಡ ಭೂಕಂಪನ ಉಂಟಾಗಿತ್ತು. ಅಕ್ಟೋಬರ್​ 3ರಂದು ಕೂಡ ಭೂಮಿ ನಡುಗಿತ್ತು. ಆಗ ರಿಕ್ಟರ್​ ಮಾಪಕದಲ್ಲಿ 3.8ರಷ್ಟು ತೀವ್ರತೆ ದಾಖಲಾಗಿತ್ತು.

ಅಸ್ಸಾಂನ ತೇಜ್​ಪುರದಲ್ಲಿ ಮತ್ತೆ ನಡುಗಿದ ಭೂಮಿ; 3.7ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 04, 2021 | 1:29 PM

Share

ಅಸ್ಸಾಂನ ಗುವಾಹಟಿ ಮತ್ತು ತೇಜ್​ಪುರ್​ಗಳಲ್ಲಿ ಇಂದು ಭೂಕಂಪ ಉಂಟಾಗಿದ್ದು, ರಿಕ್ಟರ್​ ಮಾಪಕದಲ್ಲಿ 3.7ರಷ್ಟು ತೀವ್ರತೆ ದಾಖಲಾಗಿದೆ.  ತೇಜ್​ಪುರದ ಪಶ್ಚಿಮ-ನೈಋತ್ಯಕ್ಕೆ 35 ಕಿಮೀ ದೂರದಲ್ಲಿ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.  ಬೆಳಗ್ಗೆ ಸುಮಾರು 10.19ರ ಹೊತ್ತಿಗೆ ಭೂಮಿ ನಡುಗಿದ್ದು, ಯಾರದ್ದೂ ಪ್ರಾಣ ಹೋದ ಬಗ್ಗೆ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 

ಅಸ್ಸಾಂನಲ್ಲಿ ಕಳೆದ ತಿಂಗಳು ಕೂಡ ಭೂಕಂಪನ ಉಂಟಾಗಿತ್ತು. ಅಕ್ಟೋಬರ್​ 3ರಂದು ಕೂಡ ಭೂಮಿ ನಡುಗಿತ್ತು. ಆಗ ರಿಕ್ಟರ್​ ಮಾಪಕದಲ್ಲಿ 3.8ರಷ್ಟು ತೀವ್ರತೆ ದಾಖಲಾಗಿತ್ತು. ಆಗ ಮಧ್ಯಾಹ್ನ 2.40ರ ಹೊತ್ತಿಗೆ ಭೂಕಂಪನ ಉಂಟಾಗಿತ್ತು. ಆಗಲೂ ಕೂಡ ಯಾವುದೇ ಹಾನಿಯಾಗಿರಲಿಲ್ಲ. ಹಾಗೇ, ಕಳೆದ ಎರಡು ದಿನಗಳ ಹಿಂದೆ ಅಂದರೆ ನವೆಂಬರ್​ 2ರಂದು ಜಮ್ಮು-ಕಾಶ್ಮೀರದಲ್ಲೂ ಭೂಕಂಪ ಉಂಟಾಗಿದ್ದು, ರಿಕ್ಟರ್​ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿತ್ತು. ಇದನ್ನು ಹೊರತುಪಡಿಸಿದರೆ ಅಕ್ಟೋಬರ್​ 24ರಂದು ಲಡಾಖ್​​ನಲ್ಲಿ 4.2 ರಷ್ಟು ತೀವ್ರತೆಯ ಭೂಕಂಪನ ಉಂಟಾಗಿತ್ತು. ಕಾರ್ಗಿಲ್​​ ಪ್ರದೇಶದಲ್ಲಿ ಬೆಳಗ್ಗೆ ರಾತ್ರಿ 11.29ರ ಹೊತ್ತಿಗೆ ಭೂಮಿ ನಡುಗಿತ್ತು ಮತ್ತು ಭೂ ಮೇಲ್ಮೈನಿಂದ 140 ಕಿಮೀ ಆಳದಲ್ಲಿ ಭೂಕಂಪ ಉಂಟಾಗಿತ್ತು ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಮಾಹಿತಿ ನೀಡಿತ್ತು.  ಇತ್ತೀಚೆಗೆ ಹಲವು ಪ್ರದೇಶಗಳಲ್ಲಿ ಸಣ್ಣಮಟ್ಟದ ಭೂಕಂಪನ ಆಗುತ್ತಲೇ ಇದೆ. ಅದೃಷ್ಟವಶಾತ್​ ಯಾರಿಗೂ ಜೀವಕ್ಕೆ ಹಾನಿಯಾಗುತ್ತಿಲ್ಲ. ಆಸ್ತಿಪಾಸ್ತಿ ನಾಶ ಉಂಟಾಗಿಲ್ಲ.

ಇದನ್ನೂ ಓದಿ: ಪ್ರತಿಭಟನಾಕಾರರು ಉಂಟು ಮಾಡಿದ ನಾಶನಷ್ಟವನ್ನು ಅವರೇ ಭರಿಸುವಂತೆ ಮಾಡಲು ಮಧ್ಯಪ್ರದೇಶ ಸರ್ಕಾರ ಸಿದ್ಧತೆ

Hotels to hike food price: ದರ ದರನೇ ಏರುತ್ತಿರುವ ಗ್ಯಾಸ್​ ರೇಟ್, ಗ್ರಾಹಕನಿಗೆ ಬರೆ ಎಳೆಯಲು ಹೋಟೆಲ್ ಮಾಲೀಕರ​ ಸಿದ್ಧತೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!