AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನ ತೇಜ್​ಪುರದಲ್ಲಿ ಮತ್ತೆ ನಡುಗಿದ ಭೂಮಿ; 3.7ರಷ್ಟು ತೀವ್ರತೆ ದಾಖಲು

ಅಸ್ಸಾಂನಲ್ಲಿ ಕಳೆದ ತಿಂಗಳು ಕೂಡ ಭೂಕಂಪನ ಉಂಟಾಗಿತ್ತು. ಅಕ್ಟೋಬರ್​ 3ರಂದು ಕೂಡ ಭೂಮಿ ನಡುಗಿತ್ತು. ಆಗ ರಿಕ್ಟರ್​ ಮಾಪಕದಲ್ಲಿ 3.8ರಷ್ಟು ತೀವ್ರತೆ ದಾಖಲಾಗಿತ್ತು.

ಅಸ್ಸಾಂನ ತೇಜ್​ಪುರದಲ್ಲಿ ಮತ್ತೆ ನಡುಗಿದ ಭೂಮಿ; 3.7ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 04, 2021 | 1:29 PM

Share

ಅಸ್ಸಾಂನ ಗುವಾಹಟಿ ಮತ್ತು ತೇಜ್​ಪುರ್​ಗಳಲ್ಲಿ ಇಂದು ಭೂಕಂಪ ಉಂಟಾಗಿದ್ದು, ರಿಕ್ಟರ್​ ಮಾಪಕದಲ್ಲಿ 3.7ರಷ್ಟು ತೀವ್ರತೆ ದಾಖಲಾಗಿದೆ.  ತೇಜ್​ಪುರದ ಪಶ್ಚಿಮ-ನೈಋತ್ಯಕ್ಕೆ 35 ಕಿಮೀ ದೂರದಲ್ಲಿ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.  ಬೆಳಗ್ಗೆ ಸುಮಾರು 10.19ರ ಹೊತ್ತಿಗೆ ಭೂಮಿ ನಡುಗಿದ್ದು, ಯಾರದ್ದೂ ಪ್ರಾಣ ಹೋದ ಬಗ್ಗೆ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 

ಅಸ್ಸಾಂನಲ್ಲಿ ಕಳೆದ ತಿಂಗಳು ಕೂಡ ಭೂಕಂಪನ ಉಂಟಾಗಿತ್ತು. ಅಕ್ಟೋಬರ್​ 3ರಂದು ಕೂಡ ಭೂಮಿ ನಡುಗಿತ್ತು. ಆಗ ರಿಕ್ಟರ್​ ಮಾಪಕದಲ್ಲಿ 3.8ರಷ್ಟು ತೀವ್ರತೆ ದಾಖಲಾಗಿತ್ತು. ಆಗ ಮಧ್ಯಾಹ್ನ 2.40ರ ಹೊತ್ತಿಗೆ ಭೂಕಂಪನ ಉಂಟಾಗಿತ್ತು. ಆಗಲೂ ಕೂಡ ಯಾವುದೇ ಹಾನಿಯಾಗಿರಲಿಲ್ಲ. ಹಾಗೇ, ಕಳೆದ ಎರಡು ದಿನಗಳ ಹಿಂದೆ ಅಂದರೆ ನವೆಂಬರ್​ 2ರಂದು ಜಮ್ಮು-ಕಾಶ್ಮೀರದಲ್ಲೂ ಭೂಕಂಪ ಉಂಟಾಗಿದ್ದು, ರಿಕ್ಟರ್​ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿತ್ತು. ಇದನ್ನು ಹೊರತುಪಡಿಸಿದರೆ ಅಕ್ಟೋಬರ್​ 24ರಂದು ಲಡಾಖ್​​ನಲ್ಲಿ 4.2 ರಷ್ಟು ತೀವ್ರತೆಯ ಭೂಕಂಪನ ಉಂಟಾಗಿತ್ತು. ಕಾರ್ಗಿಲ್​​ ಪ್ರದೇಶದಲ್ಲಿ ಬೆಳಗ್ಗೆ ರಾತ್ರಿ 11.29ರ ಹೊತ್ತಿಗೆ ಭೂಮಿ ನಡುಗಿತ್ತು ಮತ್ತು ಭೂ ಮೇಲ್ಮೈನಿಂದ 140 ಕಿಮೀ ಆಳದಲ್ಲಿ ಭೂಕಂಪ ಉಂಟಾಗಿತ್ತು ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಮಾಹಿತಿ ನೀಡಿತ್ತು.  ಇತ್ತೀಚೆಗೆ ಹಲವು ಪ್ರದೇಶಗಳಲ್ಲಿ ಸಣ್ಣಮಟ್ಟದ ಭೂಕಂಪನ ಆಗುತ್ತಲೇ ಇದೆ. ಅದೃಷ್ಟವಶಾತ್​ ಯಾರಿಗೂ ಜೀವಕ್ಕೆ ಹಾನಿಯಾಗುತ್ತಿಲ್ಲ. ಆಸ್ತಿಪಾಸ್ತಿ ನಾಶ ಉಂಟಾಗಿಲ್ಲ.

ಇದನ್ನೂ ಓದಿ: ಪ್ರತಿಭಟನಾಕಾರರು ಉಂಟು ಮಾಡಿದ ನಾಶನಷ್ಟವನ್ನು ಅವರೇ ಭರಿಸುವಂತೆ ಮಾಡಲು ಮಧ್ಯಪ್ರದೇಶ ಸರ್ಕಾರ ಸಿದ್ಧತೆ

Hotels to hike food price: ದರ ದರನೇ ಏರುತ್ತಿರುವ ಗ್ಯಾಸ್​ ರೇಟ್, ಗ್ರಾಹಕನಿಗೆ ಬರೆ ಎಳೆಯಲು ಹೋಟೆಲ್ ಮಾಲೀಕರ​ ಸಿದ್ಧತೆ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು