AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bay of Bengal Earthquake: ಬಂಗಾಳ ಕೊಲ್ಲಿಯಲ್ಲಿ ಭೂಕಂಪ; ಚೆನ್ನೈ ಭಾಗದಲ್ಲಿ ಕಂಪಿಸಿದ ನೆಲ

Chennai: ಆಂಧ್ರಪ್ರದೇಶ ಹಾಗೂ ತಮಿಳುನಾಡಿಗೆ ಹೊಂದಿಕೊಂಡಿರುವ ಬಂಗಾಳ ಕೊಲ್ಲಿ ಸಮುದ್ರ ಭಾಗದಲ್ಲಿ, 10 ಕಿಲೋ ಮೀಟರ್ ಆಳದಲ್ಲಿ ಭೂಕಂಪ ಉಂಟಾಗಿರುವ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ಮಾಹಿತಿ ನೀಡಿದೆ.

Bay of Bengal Earthquake: ಬಂಗಾಳ ಕೊಲ್ಲಿಯಲ್ಲಿ ಭೂಕಂಪ; ಚೆನ್ನೈ ಭಾಗದಲ್ಲಿ ಕಂಪಿಸಿದ ನೆಲ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 24, 2021 | 2:48 PM

Share

ಚೆನ್ನೈ: ತಮಿಳುನಾಡು ರಾಜ್ಯ ರಾಜಧಾನಿ ಸಹಿತ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳವಾರ (ಆಗಸ್ಟ್ 24) ಮಧ್ಯಾಹ್ನ ವೇಳೆಗೆ ಲಘು ಭೂಕಂಪನ ಉಂಟಾಗಿದೆ. ರಿಕ್ಟರ್ ಮಾಪನದಲ್ಲಿ 5.1 ರಷ್ಟು ತೀವ್ರತೆ ದಾಖಲಾಗಿದೆ. ಆಂಧ್ರಪ್ರದೇಶ ಹಾಗೂ ತಮಿಳುನಾಡಿಗೆ ಹೊಂದಿಕೊಂಡಿರುವ ಬಂಗಾಳ ಕೊಲ್ಲಿ ಸಮುದ್ರ ಭಾಗದಲ್ಲಿ, 10 ಕಿಲೋ ಮೀಟರ್ ಆಳದಲ್ಲಿ ಭೂಕಂಪ ಉಂಟಾಗಿರುವ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ಮಾಹಿತಿ ನೀಡಿದೆ.

ಈ ಭೂಕಂಪನವು ಮಧ್ಯಾಹ್ನ 12.35 ರ ಸುಮಾರಿಗೆ ಸಂಭವಿಸಿದ್ದು. ಆರನೇ ಕ್ಯಾಟಗರಿ ಅಂದರೆ ‘Very Strong’ ಎಂದು ಪರಿಗಣಿತವಾಗಿದೆ. ಭೂಕಂಪದ ಕೇಂದ್ರ ಬಿಂದು ಆಂಧ್ರಪ್ರದೇಶದ ಕಾಕಿನಾಡ ಪ್ರದೇಶದಿಂದ ದಕ್ಷಿಣಕ್ಕೆ 296 ಕಿಲೋ ಮೀಟರ್ ಹಾಗೂ ಚೆನ್ನೈ, ತಮಿಳುನಾಡು ಭಾಗದಿಂದ ದಕ್ಷಿಣಕ್ಕೆ 320 ಕಿಲೋ ಮೀಟರ್ ಅಂತರದಲ್ಲಿ ಇದೆ ಎಂದು ತಿಳಿಸಲಾಗಿದೆ.

ಚೆನ್ನೈನ ದಕ್ಷಿಣ ಭಾಗದಲ್ಲಿ ಭೂಕಂಪದ ಅನುಭವ ಆಗಿದೆ. ಕೆಲಸದಲ್ಲಿ ನಿರತರಾಗಿದ್ದವರು ಕಚೇರಿ, ಕಾರ್ಖಾನೆ ಬಿಟ್ಟು ಹೊರಗೆ ಬಂದಿದ್ದಾರೆ. ಹಲವರು ಸಾಮಾಜಿಕ ಜಾಲತಾಣದಲ್ಲಿ ಇತರರಿಗೂ ಹೀಗೆ ಅನುಭವ ಆಗಿರುವ ಬಗ್ಗೆ ಕೇಳಿದ್ದಾರೆ. ಮಾಹಿತಿ ಹಂಚಿಕೊಂಡಿದ್ದಾರೆ. ಭೂಕಂಪ ಆಗಿರುವುದಾಗಿ ಖಚಿತವಾಗಿದೆ. ಆದರೆ, ಯಾವುದೇ ಸುನಾಮಿ ಅಲರ್ಟ್ ಇಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Haiti Earthquake: ಹುಡುಕಿದಷ್ಟೂ ಸಿಗುತ್ತಿವೆ ಶವಗಳು; ಹೈಟಿ ಭೂಕಂಪ ಭೀಕರತೆ, ಸಾವಿನ ಸಂಖ್ಯೆ 2207ಕ್ಕೆ ಏರಿಕೆ

Gujarat Earthquake: ಕಚ್​​ನಲ್ಲಿ ಮತ್ತೆ ಭೂಕಂಪ; ಈ ಬಾರಿ 4.1ರಷ್ಟು ತೀವ್ರತೆ ದಾಖಲು

Published On - 2:33 pm, Tue, 24 August 21

Follow Us
Web contact
Web contact

TV9 Kannada

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ