AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಗುಜರಾತ್​ನಲ್ಲಿ 4.3 ತೀವ್ರತೆಯ ಭೂಕಂಪ; ಭಾರತದಲ್ಲಿ ಹೆಚ್ಚು ಕಂಪನ ಸೂಕ್ಷ್ಮ ಪ್ರದೇಶಗಳು ಎಲ್ಲಿವೆ?

4.3 Intensity Earthquake in Gujarat: ಗುಜರಾತ್​ನ ರಾಜಕೋಟ್​ನಿಂದ 270 ಕಿಮೀ ದೂರದಲ್ಲಿ ಕೇಂದ್ರ ಬಿಂದುವಾಗಿ ಮಧ್ಯಾಹ್ನ 3:21ಕ್ಕೆ ಸಂಭವಿಸಿದ ಭೂಕಂಪವು ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಕಳೆದ ಒಂದು ವಾರದಲ್ಲಿ ಇದು ಗುಜರಾತ್ ರಾಜ್ಯದಲ್ಲಿ ಸಂಭವಿಸಿದ ಮೂರನೇ ಭೂಕಂಪವಾಗಿದೆ.

Earthquake: ಗುಜರಾತ್​ನಲ್ಲಿ 4.3 ತೀವ್ರತೆಯ ಭೂಕಂಪ; ಭಾರತದಲ್ಲಿ ಹೆಚ್ಚು ಕಂಪನ ಸೂಕ್ಷ್ಮ ಪ್ರದೇಶಗಳು ಎಲ್ಲಿವೆ?
ಗುಜರಾತ್ ರಾಜ್ಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 26, 2023 | 4:40 PM

Share

ನವದೆಹಲಿ: ಗುಜರಾತ್ ರಾಜ್ಯದಲ್ಲಿ ಇಂದು ಭಾನುವಾರ ಲಘು ಭೂಕಂಪ (Earthquake) ಸಂಭವಿಸಿರುವುದು ವರದಿಯಾಗಿದೆ. ಭಾನುವಾರ ಮಧ್ಯಾಹ್ನ 3:21ಕ್ಕೆ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Seismology Center) ತಿಳಿಸಿದೆ. ಭೂಕಂಪದ ಕೇಂದ್ರಬಿಂದು ಗುಜರಾತ್​ನ ರಾಜಕೋಟ್​ನಿಂದ ವಾಯವ್ಯ ದಿಕ್ಕಿಗೆ (ನಾರ್ತ್ ವೆಸ್ಟ್) 270 ಕಿಮೀ ದೂರದ ಸ್ಥಳದಲ್ಲಿ ಇತ್ತು. ನೆಲದಿಂದ 10 ಕಿಮೀ ಆಳದಲ್ಲಿ ಕೇಂದ್ರ ಬಿಂದು ಇತ್ತೆಂದು ವರದಿಯಾಗಿದೆ.

ಈ ಲಘು ಭೂಕಂಪದಿಂದ ಯಾವುದೇ ಅನಾಹುತವಾದ ವರದಿ ಬಂದಿಲ್ಲ. ಕಳೆದ ವಾರ ಕೂಡ ಗುಜರಾತ್​ನ ಅಮರೇಲಿ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಮೂರು ಲಘು ಭೂಕಂಪಗಳು ಸಂಭವಿಸಿದ್ದವು. ಭಾರತದಲ್ಲಿ ಅತ್ಯಂತ ಭೂಕಂಪ ಸೂಕ್ಷ್ಮ ಸ್ಥಳಗಳಲ್ಲಿ ಗುಜರಾತ್ ಕೂಡ ಒಂದು. ಹಿಂದೆಲ್ಲಾ ಹಲವು ಬಾರಿ ಇಲ್ಲಿ ಭೂಕಂಪಗಳು ಸಂಭವಿಸಿದ ದೊಡ್ಡ ಅನಾಹುತಗಳಿಗೆ ಕಾರಣವಾಗಿದ್ದಿದೆ.

ಭೂಕಂಪ ಸೂಕ್ಷ್ಮ ಪ್ರದೇಶಗಳು

ಅತಿಹೆಚ್ಚು ಭೂಕಂಪಗಳು ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳನ್ನು ಭಾರತದಲ್ಲಿ ಝೋನ್ 5 ಎಂದು ಪಟ್ಟಿ ಮಾಡಲಾಗಿದೆ. ಇದರಲ್ಲಿ ಗುಜರಾತ್ ರಾಜ್ಯವಿದೆ. ಜೊತೆಗೆ ಹಿಮಾಚಲಪ್ರದೇಶ, ಬಿಹಾರ, ಅಸ್ಸಾಮ್, ಮಣಿಪುರ, ನಾಗಾಲೆಂಡ್, ಜಮ್ಮು ಕಾಶ್ಮೀರ, ಅಂಡಮಾನ್ ನಿಕೋಬಾರ್ ಇವೆ.

ಇದನ್ನೂ ಓದಿEarthquake: ಪಪುವಾ ನ್ಯೂ ಗಿನಿಯಾ ದ್ವೀಪ ರಾಷ್ಟ್ರದಲ್ಲಿ 6.5ರಷ್ಟು ತೀರ್ವತೆಯಲ್ಲಿ ಕಂಪಿಸಿದ ಭೂಮಿ

ಹಿಮಾಲಯ ಪ್ರದೇಶದಲ್ಲಿ ಸದ್ಯ ಭಾರೀ ಭೂಕಂಪ ಸಂಭವಿಸುವ ಸಾಧ್ಯತೆ ಇದೆ ಎಂದು ಕೆಲ ವರದಿಗಳು ಹೇಳುತ್ತಿವೆ. ಇಲ್ಲಿ ಭೂಕಂಪ ಸಂಭವಿಸುವುದಕ್ಕೆ ಪೂರಕವಾದ ಘಟನೆಗಳು ಭೂಗರ್ಭದಲ್ಲಿ ಆಗುತ್ತಿವೆ. ಯಾವಾಗ ಬೇಕಾದರೂ ಹಿಮಾಲಯದ ಗರ್ಭ ಅಲುಗಾಡಬಹುದು ಎನ್ನುವಂತಹ ಅಭಿಪ್ರಾಯಗಳನ್ನು ಕೆಲ ಭೂಕಂಪ ತಜ್ಞರು ನೀಡಿ ಎಚ್ಚರಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ